AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಖಿಲ್ ಕುಮಾರಸ್ವಾಮಿ ಸಿನಿಮಾ ಸೆಟ್​ಗೆ ಯುವ ರಾಜ್​ಕುಮಾರ್ ಭೇಟಿ

Nikhil-Yuva: ಯುವ ರಾಜ್​ಕುಮಾರ್ ಮತ್ತು ನಿಖಿಲ್ ಕುಮಾರಸ್ವಾಮಿ ಅವರುಗಳು ಪರಸ್ಪರ ಭೇಟಿ ಮಾಡಿ ಸಿನಿಮಾ ಇನ್ನಿತರೆ ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಈ ಇಬ್ಬರ ಭೇಟಿಯ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ನಿಖಿಲ್ ಕುಮಾರಸ್ವಾಮಿ ಸಿನಿಮಾ ಸೆಟ್​ಗೆ ಯುವ ರಾಜ್​ಕುಮಾರ್ ಭೇಟಿ
ನಿಖಿಲ್-ಯುವ
ಮಂಜುನಾಥ ಸಿ.
|

Updated on:Oct 07, 2023 | 10:59 PM

Share

ದೊಡ್ಮನೆ ಕುಡಿ ಯುವ ರಾಜ್​ಕುಮಾರ್ (Yuva Rajkumar) ಭರ್ಜರಿಯಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ‘ಯುವ’ ಹೆಸರಿನ ಸಿನಿಮಾದಲ್ಲಿ ಯುವ ರಾಜ್​ಕುಮಾರ್ ಇದು ಅವರ ಮೊದಲ ಸಿನಿಮಾ. ಮೊದಲ ಸಿನಿಮಾ ಆಗಿದ್ದರೂ ಸಹ ಸ್ಟಾರ್ ನಟರ ಸಿನಿಮಾಗಳಿಗಿರುವಂತೆ ದೊಡ್ಡ ಮಟ್ಟದಲ್ಲಿ ಬಜ್ ಸೃಷ್ಠಿಯಾಗಿದೆ. ಕನ್ನಡದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದು ಎಂದು ಈಗಲೇ ಖ್ಯಾತಿ ಪಡೆದುಕೊಂಡಿದೆ. ಯುವ ರಾಜ್​ಕುಮಾರ್ ಅವರ ಸಿನಿಮಾ ಸೆಟ್​ಗೆ ಸಹ ಒಬ್ಬರ ಹಿಂದೊಬ್ಬರು ಸ್ಟಾರ್ ನಟರು ಭೇಟಿ ನೀಡಿ ಶುಭಾಶಯಗಳನ್ನು ಸಹ ತಿಳಿಸುತ್ತಿದ್ದಾರೆ.

ಕೆಲವು ದಿನಗಳ ಹಿಂದಷ್ಟೆ ‘ಯುವ’ ಸಿನಿಮಾದ ಸೆಟ್​ಗೆ ನಟ ದರ್ಶನ್ ತೂಗುದೀಪ ಭೇಟಿ ನೀಡಿದ್ದರು. ಯುವ ರಾಜ್​ಕುಮಾರ್, ನಿರ್ದೇಶಕ ಸಂತೋಶ್ ಆನಂದ್​ರಾಮ್ ಸಿನಿಮಾದ ನಾಯಕಿ ಸಪ್ತಮಿ ಇನ್ನೂ ಕೆಲವರೊಟ್ಟಿಗೆ ಸಮಯ ಕಳೆಯುವ ಜೊತೆಗೆ ಕೆಲವು ಸಲಹೆಗಳನ್ನು ಸಹ ನೀಡಿದ್ದರು. ಇದೀಗ ಯುವ ರಾಜ್​ಕುಮಾರ್ ಅವರ ಸಿನಿಮಾ ಸೆಟ್​ಗೆ ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ.

ಯುವ ಹಾಗೂ ನಿಖಿಲ್ ಅವರ ಸಿನಿಮಾಗಳು ಪರಸ್ಪರ ಹತ್ತಿರದ ಲೊಕೇಶನ್​ಗಳಲ್ಲೇ ಚಿತ್ರೀಕರಣ ಆಗುತ್ತಿದ್ದ ಕಾರಣ ಸಿನಿಮಾ ಸೆಟ್​ನಲ್ಲಿ ಈ ಇಬ್ಬರೂ ಯುವನಟರು ಪರಸ್ಪರ ಭೇಟಿ ಆಗಿ ಕುಶಲೋಪರಿ ನಡೆಸಿದ್ದಾರೆ. ನಗರದ ಎಚ್.ಎಮ್.ಟಿ ಬಳಿಯ ಸಪೋಟ ತೋಟದ ಬಳಿಯೇ ಈ ಇಬ್ಬರು ನಟರ ಹೊಸ ಸಿನಿಮಾದ ಶೂಟಿಂಗ್ ನಡೆಯುತ್ತಿದ್ದು, ಅದೇ ಕಾರಣ ಇಬ್ಬರೂ ನಟರು ಭೇಟಿ ಮಾಡಿ ಪರಸ್ಪರ ಮಾತುಕತೆ ನಡೆಸಿದ್ದಾರೆ.

ಇದನ್ನೂ ಓದಿ:Darshan-Yuva: ದರ್ಶನ್-ಯುವ ರಾಜ್​ಕುಮಾರ್ ಆಲಿಂಗನ, ಇಲ್ಲಿವೆ ಚಿತ್ರಗಳು

ನಿಖಿಲ್ ಕುಮಾರಸ್ವಾಮಿ ಕೆಲವು ದಿನಗಳ ಹಿಂದಷ್ಟೆ ನಟ ಧ್ರುವ ಸರ್ಜಾ ಅವರನ್ನು ಸಹ ಭೇಟಿ ಆಗಿದ್ದರು. ಆ ಭೇಟಿ ಸಹ ಅನೌಪಚಾರಿಕ ಭೇಟಿ ಅಷ್ಟೆ ಆಗಿತ್ತು. ಇಬ್ಬರ ಸಿನಿಮಾಗಳ ಚಿತ್ರೀಕರಣ ಪರಸ್ಪರ ಹತ್ತಿರವೇ ನಡೆಯುತ್ತಿದ್ದ ಕಾರಣ ಸಿನಿಮಾ ಸೆಟ್​ನಲ್ಲಿ ಈ ನಟರು ಭೇಟಿಯಾಗಿ ತಮ್ಮ ಸಿನಿಮಾಗಳ ಬಗ್ಗ ಪರಸ್ಪರ ಚರ್ಚೆ ಮಾಡಿದರು.

ಯುವ ರಾಜ್​ಕುಮಾರ್ ನಟನೆಯ ‘ಯುವ’ ಸಿನಿಮಾವನ್ನು ಸಂತೋಶ್ ಆನಂದ್​ರಾಮ್ ನಿರ್ದೇಶನ ಮಾಡುತ್ತಿದ್ದು, ಸಿನಿಮಾಕ್ಕೆ ಹೊಂಬಾಳೆ ಫಿಲಮ್ಸ್​ನವರು ಬಂಡವಾಳ ಹೂಡಿದ್ದಾರೆ. ಸಿನಿಮಾಕ್ಕೆ ಸಪ್ತಮಿ ಗೌಡ ನಾಯಕಿ. ಸಿನಿಮಾದಲ್ಲಿ ಕಾಲೇಜು ಯುವಕನ ಪಾತ್ರದಲ್ಲಿ ಯುವ ರಾಜ್​ಕುಮಾರ್ ಕಾಣಿಸಿಕೊಂಡಿದ್ದಾರೆ. ಇನ್ನು ನಿಖಿಲ್, ತಮಿಳಿನ ಲೈಕಾ ನಿರ್ಮಾಣ ಸಂಸ್ಥೆ ನಿರ್ಮಾಣ ಮಾಡುತ್ತಿರುವ ಸಿನಿಮಾದಲ್ಲಿ ನಟಿಸುತ್ತಿದ್ದು, ಸಿನಿಮಾಕ್ಕೆ ಇನ್ನೂ ಹೆಸರಿಟ್ಟಿಲ್ಲ. ಅದರ ಜೊತೆಗೆ ‘ಯಧುವೀರ’ ಹೆಸರಿನ ಸಿನಿಮಾದಲ್ಲಿಯೂ ಸಹ ನಿಖಿಲ್ ನಟಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:30 pm, Sat, 7 October 23

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ