ನಿಖಿಲ್ ಕುಮಾರಸ್ವಾಮಿ ಸಿನಿಮಾ ಸೆಟ್​ಗೆ ಯುವ ರಾಜ್​ಕುಮಾರ್ ಭೇಟಿ

Nikhil-Yuva: ಯುವ ರಾಜ್​ಕುಮಾರ್ ಮತ್ತು ನಿಖಿಲ್ ಕುಮಾರಸ್ವಾಮಿ ಅವರುಗಳು ಪರಸ್ಪರ ಭೇಟಿ ಮಾಡಿ ಸಿನಿಮಾ ಇನ್ನಿತರೆ ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಈ ಇಬ್ಬರ ಭೇಟಿಯ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ನಿಖಿಲ್ ಕುಮಾರಸ್ವಾಮಿ ಸಿನಿಮಾ ಸೆಟ್​ಗೆ ಯುವ ರಾಜ್​ಕುಮಾರ್ ಭೇಟಿ
ನಿಖಿಲ್-ಯುವ
Follow us
|

Updated on:Oct 07, 2023 | 10:59 PM

ದೊಡ್ಮನೆ ಕುಡಿ ಯುವ ರಾಜ್​ಕುಮಾರ್ (Yuva Rajkumar) ಭರ್ಜರಿಯಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ‘ಯುವ’ ಹೆಸರಿನ ಸಿನಿಮಾದಲ್ಲಿ ಯುವ ರಾಜ್​ಕುಮಾರ್ ಇದು ಅವರ ಮೊದಲ ಸಿನಿಮಾ. ಮೊದಲ ಸಿನಿಮಾ ಆಗಿದ್ದರೂ ಸಹ ಸ್ಟಾರ್ ನಟರ ಸಿನಿಮಾಗಳಿಗಿರುವಂತೆ ದೊಡ್ಡ ಮಟ್ಟದಲ್ಲಿ ಬಜ್ ಸೃಷ್ಠಿಯಾಗಿದೆ. ಕನ್ನಡದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದು ಎಂದು ಈಗಲೇ ಖ್ಯಾತಿ ಪಡೆದುಕೊಂಡಿದೆ. ಯುವ ರಾಜ್​ಕುಮಾರ್ ಅವರ ಸಿನಿಮಾ ಸೆಟ್​ಗೆ ಸಹ ಒಬ್ಬರ ಹಿಂದೊಬ್ಬರು ಸ್ಟಾರ್ ನಟರು ಭೇಟಿ ನೀಡಿ ಶುಭಾಶಯಗಳನ್ನು ಸಹ ತಿಳಿಸುತ್ತಿದ್ದಾರೆ.

ಕೆಲವು ದಿನಗಳ ಹಿಂದಷ್ಟೆ ‘ಯುವ’ ಸಿನಿಮಾದ ಸೆಟ್​ಗೆ ನಟ ದರ್ಶನ್ ತೂಗುದೀಪ ಭೇಟಿ ನೀಡಿದ್ದರು. ಯುವ ರಾಜ್​ಕುಮಾರ್, ನಿರ್ದೇಶಕ ಸಂತೋಶ್ ಆನಂದ್​ರಾಮ್ ಸಿನಿಮಾದ ನಾಯಕಿ ಸಪ್ತಮಿ ಇನ್ನೂ ಕೆಲವರೊಟ್ಟಿಗೆ ಸಮಯ ಕಳೆಯುವ ಜೊತೆಗೆ ಕೆಲವು ಸಲಹೆಗಳನ್ನು ಸಹ ನೀಡಿದ್ದರು. ಇದೀಗ ಯುವ ರಾಜ್​ಕುಮಾರ್ ಅವರ ಸಿನಿಮಾ ಸೆಟ್​ಗೆ ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ.

ಯುವ ಹಾಗೂ ನಿಖಿಲ್ ಅವರ ಸಿನಿಮಾಗಳು ಪರಸ್ಪರ ಹತ್ತಿರದ ಲೊಕೇಶನ್​ಗಳಲ್ಲೇ ಚಿತ್ರೀಕರಣ ಆಗುತ್ತಿದ್ದ ಕಾರಣ ಸಿನಿಮಾ ಸೆಟ್​ನಲ್ಲಿ ಈ ಇಬ್ಬರೂ ಯುವನಟರು ಪರಸ್ಪರ ಭೇಟಿ ಆಗಿ ಕುಶಲೋಪರಿ ನಡೆಸಿದ್ದಾರೆ. ನಗರದ ಎಚ್.ಎಮ್.ಟಿ ಬಳಿಯ ಸಪೋಟ ತೋಟದ ಬಳಿಯೇ ಈ ಇಬ್ಬರು ನಟರ ಹೊಸ ಸಿನಿಮಾದ ಶೂಟಿಂಗ್ ನಡೆಯುತ್ತಿದ್ದು, ಅದೇ ಕಾರಣ ಇಬ್ಬರೂ ನಟರು ಭೇಟಿ ಮಾಡಿ ಪರಸ್ಪರ ಮಾತುಕತೆ ನಡೆಸಿದ್ದಾರೆ.

ಇದನ್ನೂ ಓದಿ:Darshan-Yuva: ದರ್ಶನ್-ಯುವ ರಾಜ್​ಕುಮಾರ್ ಆಲಿಂಗನ, ಇಲ್ಲಿವೆ ಚಿತ್ರಗಳು

ನಿಖಿಲ್ ಕುಮಾರಸ್ವಾಮಿ ಕೆಲವು ದಿನಗಳ ಹಿಂದಷ್ಟೆ ನಟ ಧ್ರುವ ಸರ್ಜಾ ಅವರನ್ನು ಸಹ ಭೇಟಿ ಆಗಿದ್ದರು. ಆ ಭೇಟಿ ಸಹ ಅನೌಪಚಾರಿಕ ಭೇಟಿ ಅಷ್ಟೆ ಆಗಿತ್ತು. ಇಬ್ಬರ ಸಿನಿಮಾಗಳ ಚಿತ್ರೀಕರಣ ಪರಸ್ಪರ ಹತ್ತಿರವೇ ನಡೆಯುತ್ತಿದ್ದ ಕಾರಣ ಸಿನಿಮಾ ಸೆಟ್​ನಲ್ಲಿ ಈ ನಟರು ಭೇಟಿಯಾಗಿ ತಮ್ಮ ಸಿನಿಮಾಗಳ ಬಗ್ಗ ಪರಸ್ಪರ ಚರ್ಚೆ ಮಾಡಿದರು.

ಯುವ ರಾಜ್​ಕುಮಾರ್ ನಟನೆಯ ‘ಯುವ’ ಸಿನಿಮಾವನ್ನು ಸಂತೋಶ್ ಆನಂದ್​ರಾಮ್ ನಿರ್ದೇಶನ ಮಾಡುತ್ತಿದ್ದು, ಸಿನಿಮಾಕ್ಕೆ ಹೊಂಬಾಳೆ ಫಿಲಮ್ಸ್​ನವರು ಬಂಡವಾಳ ಹೂಡಿದ್ದಾರೆ. ಸಿನಿಮಾಕ್ಕೆ ಸಪ್ತಮಿ ಗೌಡ ನಾಯಕಿ. ಸಿನಿಮಾದಲ್ಲಿ ಕಾಲೇಜು ಯುವಕನ ಪಾತ್ರದಲ್ಲಿ ಯುವ ರಾಜ್​ಕುಮಾರ್ ಕಾಣಿಸಿಕೊಂಡಿದ್ದಾರೆ. ಇನ್ನು ನಿಖಿಲ್, ತಮಿಳಿನ ಲೈಕಾ ನಿರ್ಮಾಣ ಸಂಸ್ಥೆ ನಿರ್ಮಾಣ ಮಾಡುತ್ತಿರುವ ಸಿನಿಮಾದಲ್ಲಿ ನಟಿಸುತ್ತಿದ್ದು, ಸಿನಿಮಾಕ್ಕೆ ಇನ್ನೂ ಹೆಸರಿಟ್ಟಿಲ್ಲ. ಅದರ ಜೊತೆಗೆ ‘ಯಧುವೀರ’ ಹೆಸರಿನ ಸಿನಿಮಾದಲ್ಲಿಯೂ ಸಹ ನಿಖಿಲ್ ನಟಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:30 pm, Sat, 7 October 23

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ