AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

31ನೇ ವಸಂತಕ್ಕೆ ಕಾಲಿಟ್ಟ ನಿಖಿಲ್ ಗೌಡ; ಕೇಕ್​ ತಿನ್ನಿಸಿ ಶುಭ ಹಾರೈಸಿದ ಹೆಚ್​ಡಿ ಕುಮಾರಸ್ವಾಮಿ

ಇಂದು ನಿಖಿಲ್ ಕುಮಾರಸ್ವಾಮಿ ತಮ್ಮ ಹುಟ್ಟು ಹಬ್ಬದ ಸಂಭ್ರಮಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ. ಅಭಿಮಾನಿಗಳೆಲ್ಲ ಕೇಕ್​ ಕತ್ತರಿಸುವ ಮೂಲಕ ನಿಖಿಲ್ ಹುಟ್ಟಿದ ದಿನವನ್ನು ಸಂಭ್ರಮಿಸಿದ್ದಾರೆ.

31ನೇ ವಸಂತಕ್ಕೆ ಕಾಲಿಟ್ಟ ನಿಖಿಲ್ ಗೌಡ; ಕೇಕ್​ ತಿನ್ನಿಸಿ ಶುಭ ಹಾರೈಸಿದ ಹೆಚ್​ಡಿ ಕುಮಾರಸ್ವಾಮಿ
ನಿಖಿಲ್​ಗೆ ಇಂದು ಹುಟ್ಟು ಹಬ್ಬದ ಸಂಭ್ರಮ
shruti hegde
|

Updated on: Jan 22, 2021 | 12:46 PM

Share

ಬೆಂಗಳೂರು: ಸ್ಯಾಂಡಲ್​ವುಡ್​ ಯುವರಾಜ​ ನಿಖಿಲ್​ ಕುಮಾರಸ್ವಾಮಿಗೆ ಇಂದು (ಜ. 22) ಹುಟ್ಟು ಹಬ್ಬದ ಸಂಭ್ರಮ. ಜೆ.ಪಿ ನಗರದ ಮನೆಯಲ್ಲಿ ಕೇಕ್​ ಕತ್ತರಿಸುವ ಮೂಲಕ ನಿಖಿಲ್​ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ.

31ನೇ ವಸಂತಕ್ಕೆ ಕಾಲಿಟ್ಟ ನಿಖಿಲ್​ ಹುಟ್ಟು ಹಬ್ಬಕ್ಕೆ ಬಗೆಗೆ ಬಗೆಯ ಗಿಫ್ಟ್​ ಹಾಗೂ ಕೇಕ್​ಗಳನ್ನು ತಂದು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ರಕ್ತದಾನ, ಅನ್ನದಾನ ಶಿಬಿರವನ್ನು ಸಹ ಹಮ್ಮಿಕೊಳ್ಳಲಾಗಿದೆ. ವಿಜಯ್ ಕೊಂಡ ಆಕ್ಷನ್ ಕಟ್ ಹೇಳ್ತಿರೋ ‘ರೈಡರ್’ ಚಿತ್ರ ಟೀಸರ್​ ರಿಲೀಸ್​ ಮಾಡುವ ಮೂಲಕ ಚಿತ್ರತಂಡ ಭರ್ಜರಿ ಗಿಫ್ಟ್​ ನೀಡಿದೆ. ನಿಖಿಲ್ ಹುಟ್ಟು ಹಬ್ಬಕ್ಕೆ ಆಗಮಿಸಿರುವ ಅಭಿಮಾನಿಗಳನ್ನು ನೋಡಿ, ನಿಖಿಲ್ ಪತ್ನಿ ರೇವತಿ ಹಾಗೂ ತಾಯಿ ಅನಿತಾ ಕುಮಾರಸ್ವಾಮಿ  ಸಂತೋಷಗೊಂಡಿದ್ದಾರೆ.

ನಿಖಿಲ್ ಮಾತು:

ಕೊರೊನಾ ಸಂಕಷ್ಟ ಕಾಲದಲ್ಲಿ ಹುಟ್ಟು ಹಬ್ಬ ಆಚರಣೆ ಬೇಡ ಎಂದುಕೊಂಡಿದ್ದೆ. ಆದರೆ, ಸಾವಿರಾರು ಅಭಿಮಾನಿಗಳು ಹಾಗೂ ಕಾರ್ಯಕರ್ತರು ಹುಟ್ಟು ಹಬ್ಬ ಆಚರಣೆಗೆ ಇಲ್ಲಿ ಬಂದಿದ್ದೀರಿ. ಎಲ್ಲರೂ ಸುರಕ್ಷಿತವಾಗಿ ಮನೆ ತಲುಪಬೇಕು. ಆಗಲೇ ನನಗೆ ನೆಮ್ಮದಿ. ರಾಜ್ಯದ ಮೂಲೆ ಮೂಲೆಗಳಿಂದ ಅನೇಕ ಯುವಕರು ಬಂದಿದ್ದಾರೆ. ಎಲ್ಲರಿಗೂ ಧನ್ಯವಾದಗಳು ಎಂದು ನಿಖಿಲ್ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಈ ಕುರಿತಂತೆ ಮಾತನಾಡಿದ ನಿಖಿಲ್, ಜೆಡಿಎಸ್ ಪಕ್ಷ ಅಂದರೆ ರೈತರ ಪಕ್ಷ. ಮುಂದಿನ ದಿನಗಳಲ್ಲಿ ಜೆಡಿಎಸ್ ಯುವಕರ ಪಕ್ಷವೂ ಆಗುತ್ತದೆ. ನಾವೆಲ್ಲಾ ಸಮಾಜದ ಏಳಿಗೆಗಾಗಿ ಜೊತೆಯಾಗಿ ದುಡಿಯೋಣ. ಇಂದು ರೈಡರ್ ಚಿತ್ರದ ಟೀಸರ್ ಬಿಡುಗಡೆಯಾಗುತ್ತಿದೆ. ಟೀಸರ್ ನೋಡಿ ಅಭಿಪ್ರಾಯ ತಿಳಿಸಿ. ರೈಡರ್ ಸಿನಿಮಾದ ಶೂಟಿಂಗ್ ಶೇ.30 ಬಾಕಿ ಇದೆ ಎಂದು ಮಾತನಾಡಿದ್ದಾರೆ.

ಸ್ಯಾಂಡಲ್​ವುಡ್ ಸಾರಥಿಗೆ ಹುಟ್ಟುಹಬ್ಬದ ಸಂಭ್ರಮ, 43ನೇ ವಸಂತಕ್ಕೆ ಕಾಲಿಟ್ಟ ಚಾಲೆಂಜಿಂಗ್ ಸ್ಟಾರ್

ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ