AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

31ನೇ ವಸಂತಕ್ಕೆ ಕಾಲಿಟ್ಟ ನಿಖಿಲ್ ಗೌಡ; ಕೇಕ್​ ತಿನ್ನಿಸಿ ಶುಭ ಹಾರೈಸಿದ ಹೆಚ್​ಡಿ ಕುಮಾರಸ್ವಾಮಿ

ಇಂದು ನಿಖಿಲ್ ಕುಮಾರಸ್ವಾಮಿ ತಮ್ಮ ಹುಟ್ಟು ಹಬ್ಬದ ಸಂಭ್ರಮಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ. ಅಭಿಮಾನಿಗಳೆಲ್ಲ ಕೇಕ್​ ಕತ್ತರಿಸುವ ಮೂಲಕ ನಿಖಿಲ್ ಹುಟ್ಟಿದ ದಿನವನ್ನು ಸಂಭ್ರಮಿಸಿದ್ದಾರೆ.

31ನೇ ವಸಂತಕ್ಕೆ ಕಾಲಿಟ್ಟ ನಿಖಿಲ್ ಗೌಡ; ಕೇಕ್​ ತಿನ್ನಿಸಿ ಶುಭ ಹಾರೈಸಿದ ಹೆಚ್​ಡಿ ಕುಮಾರಸ್ವಾಮಿ
ನಿಖಿಲ್​ಗೆ ಇಂದು ಹುಟ್ಟು ಹಬ್ಬದ ಸಂಭ್ರಮ
shruti hegde
|

Updated on: Jan 22, 2021 | 12:46 PM

Share

ಬೆಂಗಳೂರು: ಸ್ಯಾಂಡಲ್​ವುಡ್​ ಯುವರಾಜ​ ನಿಖಿಲ್​ ಕುಮಾರಸ್ವಾಮಿಗೆ ಇಂದು (ಜ. 22) ಹುಟ್ಟು ಹಬ್ಬದ ಸಂಭ್ರಮ. ಜೆ.ಪಿ ನಗರದ ಮನೆಯಲ್ಲಿ ಕೇಕ್​ ಕತ್ತರಿಸುವ ಮೂಲಕ ನಿಖಿಲ್​ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ.

31ನೇ ವಸಂತಕ್ಕೆ ಕಾಲಿಟ್ಟ ನಿಖಿಲ್​ ಹುಟ್ಟು ಹಬ್ಬಕ್ಕೆ ಬಗೆಗೆ ಬಗೆಯ ಗಿಫ್ಟ್​ ಹಾಗೂ ಕೇಕ್​ಗಳನ್ನು ತಂದು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ರಕ್ತದಾನ, ಅನ್ನದಾನ ಶಿಬಿರವನ್ನು ಸಹ ಹಮ್ಮಿಕೊಳ್ಳಲಾಗಿದೆ. ವಿಜಯ್ ಕೊಂಡ ಆಕ್ಷನ್ ಕಟ್ ಹೇಳ್ತಿರೋ ‘ರೈಡರ್’ ಚಿತ್ರ ಟೀಸರ್​ ರಿಲೀಸ್​ ಮಾಡುವ ಮೂಲಕ ಚಿತ್ರತಂಡ ಭರ್ಜರಿ ಗಿಫ್ಟ್​ ನೀಡಿದೆ. ನಿಖಿಲ್ ಹುಟ್ಟು ಹಬ್ಬಕ್ಕೆ ಆಗಮಿಸಿರುವ ಅಭಿಮಾನಿಗಳನ್ನು ನೋಡಿ, ನಿಖಿಲ್ ಪತ್ನಿ ರೇವತಿ ಹಾಗೂ ತಾಯಿ ಅನಿತಾ ಕುಮಾರಸ್ವಾಮಿ  ಸಂತೋಷಗೊಂಡಿದ್ದಾರೆ.

ನಿಖಿಲ್ ಮಾತು:

ಕೊರೊನಾ ಸಂಕಷ್ಟ ಕಾಲದಲ್ಲಿ ಹುಟ್ಟು ಹಬ್ಬ ಆಚರಣೆ ಬೇಡ ಎಂದುಕೊಂಡಿದ್ದೆ. ಆದರೆ, ಸಾವಿರಾರು ಅಭಿಮಾನಿಗಳು ಹಾಗೂ ಕಾರ್ಯಕರ್ತರು ಹುಟ್ಟು ಹಬ್ಬ ಆಚರಣೆಗೆ ಇಲ್ಲಿ ಬಂದಿದ್ದೀರಿ. ಎಲ್ಲರೂ ಸುರಕ್ಷಿತವಾಗಿ ಮನೆ ತಲುಪಬೇಕು. ಆಗಲೇ ನನಗೆ ನೆಮ್ಮದಿ. ರಾಜ್ಯದ ಮೂಲೆ ಮೂಲೆಗಳಿಂದ ಅನೇಕ ಯುವಕರು ಬಂದಿದ್ದಾರೆ. ಎಲ್ಲರಿಗೂ ಧನ್ಯವಾದಗಳು ಎಂದು ನಿಖಿಲ್ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಈ ಕುರಿತಂತೆ ಮಾತನಾಡಿದ ನಿಖಿಲ್, ಜೆಡಿಎಸ್ ಪಕ್ಷ ಅಂದರೆ ರೈತರ ಪಕ್ಷ. ಮುಂದಿನ ದಿನಗಳಲ್ಲಿ ಜೆಡಿಎಸ್ ಯುವಕರ ಪಕ್ಷವೂ ಆಗುತ್ತದೆ. ನಾವೆಲ್ಲಾ ಸಮಾಜದ ಏಳಿಗೆಗಾಗಿ ಜೊತೆಯಾಗಿ ದುಡಿಯೋಣ. ಇಂದು ರೈಡರ್ ಚಿತ್ರದ ಟೀಸರ್ ಬಿಡುಗಡೆಯಾಗುತ್ತಿದೆ. ಟೀಸರ್ ನೋಡಿ ಅಭಿಪ್ರಾಯ ತಿಳಿಸಿ. ರೈಡರ್ ಸಿನಿಮಾದ ಶೂಟಿಂಗ್ ಶೇ.30 ಬಾಕಿ ಇದೆ ಎಂದು ಮಾತನಾಡಿದ್ದಾರೆ.

ಸ್ಯಾಂಡಲ್​ವುಡ್ ಸಾರಥಿಗೆ ಹುಟ್ಟುಹಬ್ಬದ ಸಂಭ್ರಮ, 43ನೇ ವಸಂತಕ್ಕೆ ಕಾಲಿಟ್ಟ ಚಾಲೆಂಜಿಂಗ್ ಸ್ಟಾರ್

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ