AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

31ನೇ ವಸಂತಕ್ಕೆ ಕಾಲಿಟ್ಟ ನಿಖಿಲ್ ಗೌಡ; ಕೇಕ್​ ತಿನ್ನಿಸಿ ಶುಭ ಹಾರೈಸಿದ ಹೆಚ್​ಡಿ ಕುಮಾರಸ್ವಾಮಿ

ಇಂದು ನಿಖಿಲ್ ಕುಮಾರಸ್ವಾಮಿ ತಮ್ಮ ಹುಟ್ಟು ಹಬ್ಬದ ಸಂಭ್ರಮಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ. ಅಭಿಮಾನಿಗಳೆಲ್ಲ ಕೇಕ್​ ಕತ್ತರಿಸುವ ಮೂಲಕ ನಿಖಿಲ್ ಹುಟ್ಟಿದ ದಿನವನ್ನು ಸಂಭ್ರಮಿಸಿದ್ದಾರೆ.

31ನೇ ವಸಂತಕ್ಕೆ ಕಾಲಿಟ್ಟ ನಿಖಿಲ್ ಗೌಡ; ಕೇಕ್​ ತಿನ್ನಿಸಿ ಶುಭ ಹಾರೈಸಿದ ಹೆಚ್​ಡಿ ಕುಮಾರಸ್ವಾಮಿ
ನಿಖಿಲ್​ಗೆ ಇಂದು ಹುಟ್ಟು ಹಬ್ಬದ ಸಂಭ್ರಮ
shruti hegde
|

Updated on: Jan 22, 2021 | 12:46 PM

Share

ಬೆಂಗಳೂರು: ಸ್ಯಾಂಡಲ್​ವುಡ್​ ಯುವರಾಜ​ ನಿಖಿಲ್​ ಕುಮಾರಸ್ವಾಮಿಗೆ ಇಂದು (ಜ. 22) ಹುಟ್ಟು ಹಬ್ಬದ ಸಂಭ್ರಮ. ಜೆ.ಪಿ ನಗರದ ಮನೆಯಲ್ಲಿ ಕೇಕ್​ ಕತ್ತರಿಸುವ ಮೂಲಕ ನಿಖಿಲ್​ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ.

31ನೇ ವಸಂತಕ್ಕೆ ಕಾಲಿಟ್ಟ ನಿಖಿಲ್​ ಹುಟ್ಟು ಹಬ್ಬಕ್ಕೆ ಬಗೆಗೆ ಬಗೆಯ ಗಿಫ್ಟ್​ ಹಾಗೂ ಕೇಕ್​ಗಳನ್ನು ತಂದು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ರಕ್ತದಾನ, ಅನ್ನದಾನ ಶಿಬಿರವನ್ನು ಸಹ ಹಮ್ಮಿಕೊಳ್ಳಲಾಗಿದೆ. ವಿಜಯ್ ಕೊಂಡ ಆಕ್ಷನ್ ಕಟ್ ಹೇಳ್ತಿರೋ ‘ರೈಡರ್’ ಚಿತ್ರ ಟೀಸರ್​ ರಿಲೀಸ್​ ಮಾಡುವ ಮೂಲಕ ಚಿತ್ರತಂಡ ಭರ್ಜರಿ ಗಿಫ್ಟ್​ ನೀಡಿದೆ. ನಿಖಿಲ್ ಹುಟ್ಟು ಹಬ್ಬಕ್ಕೆ ಆಗಮಿಸಿರುವ ಅಭಿಮಾನಿಗಳನ್ನು ನೋಡಿ, ನಿಖಿಲ್ ಪತ್ನಿ ರೇವತಿ ಹಾಗೂ ತಾಯಿ ಅನಿತಾ ಕುಮಾರಸ್ವಾಮಿ  ಸಂತೋಷಗೊಂಡಿದ್ದಾರೆ.

ನಿಖಿಲ್ ಮಾತು:

ಕೊರೊನಾ ಸಂಕಷ್ಟ ಕಾಲದಲ್ಲಿ ಹುಟ್ಟು ಹಬ್ಬ ಆಚರಣೆ ಬೇಡ ಎಂದುಕೊಂಡಿದ್ದೆ. ಆದರೆ, ಸಾವಿರಾರು ಅಭಿಮಾನಿಗಳು ಹಾಗೂ ಕಾರ್ಯಕರ್ತರು ಹುಟ್ಟು ಹಬ್ಬ ಆಚರಣೆಗೆ ಇಲ್ಲಿ ಬಂದಿದ್ದೀರಿ. ಎಲ್ಲರೂ ಸುರಕ್ಷಿತವಾಗಿ ಮನೆ ತಲುಪಬೇಕು. ಆಗಲೇ ನನಗೆ ನೆಮ್ಮದಿ. ರಾಜ್ಯದ ಮೂಲೆ ಮೂಲೆಗಳಿಂದ ಅನೇಕ ಯುವಕರು ಬಂದಿದ್ದಾರೆ. ಎಲ್ಲರಿಗೂ ಧನ್ಯವಾದಗಳು ಎಂದು ನಿಖಿಲ್ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಈ ಕುರಿತಂತೆ ಮಾತನಾಡಿದ ನಿಖಿಲ್, ಜೆಡಿಎಸ್ ಪಕ್ಷ ಅಂದರೆ ರೈತರ ಪಕ್ಷ. ಮುಂದಿನ ದಿನಗಳಲ್ಲಿ ಜೆಡಿಎಸ್ ಯುವಕರ ಪಕ್ಷವೂ ಆಗುತ್ತದೆ. ನಾವೆಲ್ಲಾ ಸಮಾಜದ ಏಳಿಗೆಗಾಗಿ ಜೊತೆಯಾಗಿ ದುಡಿಯೋಣ. ಇಂದು ರೈಡರ್ ಚಿತ್ರದ ಟೀಸರ್ ಬಿಡುಗಡೆಯಾಗುತ್ತಿದೆ. ಟೀಸರ್ ನೋಡಿ ಅಭಿಪ್ರಾಯ ತಿಳಿಸಿ. ರೈಡರ್ ಸಿನಿಮಾದ ಶೂಟಿಂಗ್ ಶೇ.30 ಬಾಕಿ ಇದೆ ಎಂದು ಮಾತನಾಡಿದ್ದಾರೆ.

ಸ್ಯಾಂಡಲ್​ವುಡ್ ಸಾರಥಿಗೆ ಹುಟ್ಟುಹಬ್ಬದ ಸಂಭ್ರಮ, 43ನೇ ವಸಂತಕ್ಕೆ ಕಾಲಿಟ್ಟ ಚಾಲೆಂಜಿಂಗ್ ಸ್ಟಾರ್

Follow Us
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!