Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗು ಜನಿಸಿದ ಬಗ್ಗೆ ಫಸ್ಟ್​ ರಿಯಾಕ್ಷನ್ ನೀಡಿದ ನಿಖಿಲ್​ ಕುಮಾರಸ್ವಾಮಿ

ನಿಖಿಲ್​ ಕುಮಾರಸ್ವಾಮಿ ಟ್ವಿಟರ್​ನಲ್ಲಿ ಆ್ಯಕ್ಟಿವ್ ಆಗಿದ್ದಾರೆ. ಅಭಿಮಾನಿಗಳ ಜತೆ ಸಂಪರ್ಕದಲ್ಲಿರೋಕೆ ಟ್ವಿಟರ್​, ಇನ್​ಸ್ಟಾಗ್ರಾಮ್​ ಹಾಗೂ ಫೇಸ್​ಬುಕ್​ ಬಳಕೆ ಮಾಡುತ್ತಾರೆ. ಅಲ್ಲಿ ಅವರು ಪತ್ನಿ ರೇವತಿ ಜತೆ ಇರುವ ಫೋಟೋವನ್ನು ಹಾಕುತ್ತಾರೆ.

ಮಗು ಜನಿಸಿದ ಬಗ್ಗೆ ಫಸ್ಟ್​ ರಿಯಾಕ್ಷನ್ ನೀಡಿದ ನಿಖಿಲ್​ ಕುಮಾರಸ್ವಾಮಿ
ನಿಖಿಲ್​ ಕುಮಾರಸ್ವಾಮಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Sep 24, 2021 | 3:44 PM

ನಟ ನಿಖಿಲ್​ ಕುಮಾರಸ್ವಾಮಿ ಅವರು ಗಂಡು ಮಗುವನ್ನು ಬರಮಾಡಿಕೊಂಡ ಖುಷಿಯಲ್ಲಿದ್ದಾರೆ. ಪತ್ನಿ ರೇವತಿ ಇಂದು (ಸೆಪ್ಟೆಂಬರ್​ 24) ಒಂದು ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮನೀಡಿದ್ದಾರೆ. ಈ ಖುಷಿಯನ್ನು ನಿಖಿಲ್​ ಕುಮಾರಸ್ವಾಮಿ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ನಿಖಿಲ್​ ಕುಮಾರಸ್ವಾಮಿ ಟ್ವಿಟರ್​ನಲ್ಲಿ ಆ್ಯಕ್ಟಿವ್ ಆಗಿದ್ದಾರೆ. ಅಭಿಮಾನಿಗಳ ಜತೆ ಸಂಪರ್ಕದಲ್ಲಿರೋಕೆ ಟ್ವಿಟರ್​, ಇನ್​ಸ್ಟಾಗ್ರಾಮ್​ ಹಾಗೂ ಫೇಸ್​ಬುಕ್​ ಬಳಕೆ ಮಾಡುತ್ತಾರೆ. ಅಲ್ಲಿ ಅವರು ಪತ್ನಿ ರೇವತಿ ಜತೆ ಇರುವ ಫೋಟೋವನ್ನು ಹಾಕುತ್ತಾರೆ. ಈಗ ಮಗುವಿನ ಜತೆ ನಿಂತಿರುವ ಫೋಟೋವನ್ನು ನಿಖಿಲ್​ ಪೋಸ್ಟ್​ ಮಾಡಿದ್ದಾರೆ. ‘ನಮ್ಮ ಜೀವನದ ಈ ವಿಶೇಷ ಕ್ಷಣವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಸಂತೋಷವಾಗುತ್ತಿದೆ. ಲವ್​ ಯು ಮೈ ಸನ್​’ ಎಂದು ಬರೆದುಕೊಂಡಿದ್ದಾರೆ ನಿಖಿಲ್.

2020ರ ಏಪ್ರಿಲ್​ನಲ್ಲಿ ರೇವತಿ ಜೊತೆ ನಿಖಿಲ್​ ಕುಮಾರಸ್ವಾಮಿ ಸಪ್ತಪದಿ ತುಳಿದಿದ್ದರು. ಲಾಕ್​ಡೌನ್​ ನಿಯಮಗಳ ಅನುಸಾರ ಈ ಹೈಪ್ರೊಫೈಲ್​ ಕುಟುಂಬದಲ್ಲಿ ವಿವಾಹ ಸಮಾರಂಭ ನೆರವೇರಿತ್ತು. ಬಿಡದಿ ಬಳಿ ಇರುವ ಫಾರ್ಮ್​ಹೌಸ್​ನಲ್ಲಿ ರೇವತಿ ಮತ್ತು ನಿಖಿಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ರೇವತಿ ಪ್ರೆಗ್ನೆಂಟ್​ ಎಂಬ ಸುದ್ದಿ ಇತ್ತೀಚಿನ ಕೆಲವು ತಿಂಗಳುಗಳಿಂದ ಕೇಳಿಬರುತ್ತಿತ್ತು. ಈ ವರ್ಷ ಜೂನ್​ನಲ್ಲಿ ಆ ಬಗ್ಗೆ ಸ್ವತಃ ನಿಖಿಲ್​ ಪ್ರತಿಕ್ರಿಯೆ ನೀಡಿದ್ದರು. ‘ಕೇಳಿಬರುತ್ತಿರುವ ಸುದ್ದಿ ನಿಜ. ನಾವು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ. ಶೀಘ್ರದಲ್ಲಿ ನಮ್ಮ ಕುಟುಂಬಕ್ಕೆ ಹೊಸ ಅತಿಥಿ ಬರಲಿದ್ದಾರೆ’ ಎಂದು ನಿಖಿಲ್​ ಹೇಳಿದ್ದರು. ಈಗ ಅವರಿಗೆ ಗಂಡು ಮಗು ಜನನವಾಗಿದೆ.

ಈ ಬಗ್ಗೆ ಎಚ್​​ಡಿಕೆ ಕೂಡ ಸಂತಸ ಹೊರ ಹಾಕಿದ್ದಾರೆ. ‘ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ. ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ. ಕಂದನಿಗೆ ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದ ಇರಲಿ ಎಂದು ಪ್ರಾರ್ಥನೆ ಮಾಡುತ್ತೇನೆ’ ಎಂದು ಎಚ್​ಡಿಕೆ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ’; ತಾತನಾದ ಖುಷಿ ಹಂಚಿಕೊಂಡ ಕುಮಾರಸ್ವಾಮಿ

Published On - 3:43 pm, Fri, 24 September 21

ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ