AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಖಿಲ್-ರೇವತಿ ನವ ಜೋಡಿ: ನಗರದಲ್ಲಿ ಅದ್ಧೂರಿ ನಿಶ್ಚಿತಾರ್ಥ

ಬೆಂಗಳೂರು: ಸ್ಯಾಂಡಲ್​ವುಡ್​ನಲ್ಲಿ ಯುವರಾಜನಾಗಿ, ರಾಜಕೀಯದಲ್ಲೂ ಗುರುತಿಸಿಕೊಂಡಿರೋ ದೊಡ್ಡಗೌಡರ ಪ್ರೀತಿಯ ಮೊಮ್ಮಗ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮುದ್ದಿನ ಮಗ ನಿಖಿಲ್ ಕುಮಾರಸ್ವಾಮಿಗೆ ಯುವರಾಣಿ ಸಿಕ್ಕಿದ್ದಾಳೆ. ಅದು ಬೇರೆ ಯಾರೂ ಅಲ್ಲ. ಬೆಂಗಳೂರಿನ ಉದ್ಯಮಿ ಪುತ್ರಿ ರೇವತಿ. ರೇವತಿಗೆ ವಜ್ರದ ಉಂಗುರ ತೊಡಿಸಿದ ನಿಖಿಲ್: ಬೆಂಗಳೂರಿನ ತಾಜ್ ವೆಸ್ಟೆಂಡ್‌ ಹೋಟೆಲ್‌ನಲ್ಲಿ ನಿಖಿಲ್ ಕುಮಾರಸ್ವಾಮಿ ಎಂಗೇಜ್​ಮೆಂಟ್ ನಡೆದಿದೆ. ನಿಖಿಲ್ ಅವರು ಕ್ರೀಮ್, ಗೋಲ್ಡನ್ ಕಲರ್ ಕುರ್ತಾ ಧರಿಸಿದ್ದು, ರೇವತಿ ಕೂಡ ಕ್ರೀಮ್ ಗೋಲ್ಡನ್ ಸಿಲ್ಕ್ ಸ್ಯಾರಿಯಲ್ಲಿ ಮಿಂಚುತ್ತಿದ್ದಾರೆ. ನಿಖಿಲ್ ತಾತ ಹೆಚ್​.ಡಿ.ದೇವೇಗೌಡ […]

ನಿಖಿಲ್-ರೇವತಿ ನವ ಜೋಡಿ: ನಗರದಲ್ಲಿ ಅದ್ಧೂರಿ ನಿಶ್ಚಿತಾರ್ಥ
ಸಾಧು ಶ್ರೀನಾಥ್​
|

Updated on:Feb 10, 2020 | 12:16 PM

Share

ಬೆಂಗಳೂರು: ಸ್ಯಾಂಡಲ್​ವುಡ್​ನಲ್ಲಿ ಯುವರಾಜನಾಗಿ, ರಾಜಕೀಯದಲ್ಲೂ ಗುರುತಿಸಿಕೊಂಡಿರೋ ದೊಡ್ಡಗೌಡರ ಪ್ರೀತಿಯ ಮೊಮ್ಮಗ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮುದ್ದಿನ ಮಗ ನಿಖಿಲ್ ಕುಮಾರಸ್ವಾಮಿಗೆ ಯುವರಾಣಿ ಸಿಕ್ಕಿದ್ದಾಳೆ. ಅದು ಬೇರೆ ಯಾರೂ ಅಲ್ಲ. ಬೆಂಗಳೂರಿನ ಉದ್ಯಮಿ ಪುತ್ರಿ ರೇವತಿ.

ರೇವತಿಗೆ ವಜ್ರದ ಉಂಗುರ ತೊಡಿಸಿದ ನಿಖಿಲ್:

ಬೆಂಗಳೂರಿನ ತಾಜ್ ವೆಸ್ಟೆಂಡ್‌ ಹೋಟೆಲ್‌ನಲ್ಲಿ ನಿಖಿಲ್ ಕುಮಾರಸ್ವಾಮಿ ಎಂಗೇಜ್​ಮೆಂಟ್ ನಡೆದಿದೆ. ನಿಖಿಲ್ ಅವರು ಕ್ರೀಮ್, ಗೋಲ್ಡನ್ ಕಲರ್ ಕುರ್ತಾ ಧರಿಸಿದ್ದು, ರೇವತಿ ಕೂಡ ಕ್ರೀಮ್ ಗೋಲ್ಡನ್ ಸಿಲ್ಕ್ ಸ್ಯಾರಿಯಲ್ಲಿ ಮಿಂಚುತ್ತಿದ್ದಾರೆ. ನಿಖಿಲ್ ತಾತ ಹೆಚ್​.ಡಿ.ದೇವೇಗೌಡ ದಂಪತಿ ಸಮಕ್ಷಮದಲ್ಲಿ ರೇವತಿಗೆ ವಜ್ರದ ಉಂಗುರ ತೊಡಿಸಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ನಿಖಿಲ್ ತಾಯಿ ಅನಿತಾ ಕುಮಾರಸ್ವಾಮಿ, ರೇವತಿಗೆ ಸೀರೆ ನೀಡಿ, ಅರಿಸಿಣ, ಕುಂಕುಮ ಕೊಟ್ಟಿದ್ದಾರೆ. ಬಂಗಾರದ ಝರಿ ಇರುವ ಪಂಚೆ ತೊಟ್ಟು, ಮೇಲೆ ಬಿಳಿ ಬಣ್ಣದ ಹಾಫ್ ಸ್ಲ್ಯಾಗ್ ಧರಿಸಿ ಮಗನ ನಿಶ್ಚಿತಾರ್ಥದಲ್ಲಿ ಲಗುಬಗೆಯಿಂದ ಕುಮಾರಸ್ವಾಮಿ ಓಡಾಡಿಕೊಂಡಿದ್ದರು.

ಇನ್ನು, ಎಂಗೇಜ್​ಮೆಂಟ್​ಗಾಗಿ ಹೋಟೆಲ್ ಒಳಗೆ ಅದ್ಧೂರಿ ಸೆಟ್ ಹಾಕಲಾಗಿದ್ದು, ಮಾಜಿ ಸಚಿವ ಬಂಡೆಪ್ಪ ಕಾಶಂಪುರ್, ADGP ಅಲೋಕ್ ಕುಮಾರ್, ನಟ ಪುನೀತ್ ರಾಜ್ ಕುಮಾರ್, ಮಾಜಿ ಸಚಿವ ಸಾರಾ ಮಹೇಶ್ ಸೇರಿದಂತೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಎಲ್ಲಾ ಪಕ್ಷದ ನಾಯಕರು, ಮುಖಂಡರು ಆಗಮಿಸಿದ್ದಾರೆ.

ಸಿಎಂ ಬಿಎಸ್​ವೈ ಆಗಮಿಸುವ ಸಾಧ್ಯತೆ: ಮಾಜಿ ಸಿಎಂ ಕುಮಾರಸ್ವಾಮಿ ಕಾರ್ಯಕ್ರಮಕ್ಕೆ ಪಕ್ಷಾತೀತವಾಗಿ ಎಲ್ಲಾ ರಾಜಕೀಯ ನಾಯಕರಿಗೂ ಮುಕ್ತ ಆಹ್ವಾನ ನೀಡಿದ್ದಾರೆ. ಹಾಗಾಗಿ ಮಧ್ಯಾಹ್ನ 12.30ರ ವೇಳೆಗೆ ನಿಖಿಲ್ ನಿಶ್ಚಿತಾರ್ಥಕ್ಕೆ ಸಿಎಂ ಯಡಿಯೂರಪ್ಪ ಆಗಮಿಸುವ ಸಾಧ್ಯತೆಯಿದೆ.

Published On - 11:40 am, Mon, 10 February 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ