AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಯ ಮಡದಿ ಜತೆ, ನೆಚ್ಚಿನ ಬೈಕ್​ ಆರ್​ಎಕ್ಸ್​ 100ನಲ್ಲಿ ನಿಖಿಲ್ ಕುಮಾರಸ್ವಾಮಿ ಫುಲ್​ ಜಾಲಿ ರೈಡ್​

ಸದ್ಯ ನಿಖಿಲ್ ಕುಮಾರಸ್ವಾಮಿ ರೈಡರ್​ ಸಿನಿಮಾ ಶೂಟಿಂಗ್​ನಲ್ಲಿ ತೊಡಗಿಕೊಂಡಿದ್ದಾರೆ. ಇದರಲ್ಲಿ ನಿಖಿಲ್​ದು ಬಾಸ್ಕೆಟ್​ ಬಾಲ್ ಆಟಗಾರನ ಪಾತ್ರ. ಈ ಚಿತ್ರದ ಮೋಶನ್​ ಪೋಸ್ಟರ್, ಟೀಸರ್​ ​ ಕೂಡ ಬಿಡುಗಡೆಯಾಗಿದೆ.

ಪ್ರೀತಿಯ ಮಡದಿ ಜತೆ, ನೆಚ್ಚಿನ ಬೈಕ್​ ಆರ್​ಎಕ್ಸ್​ 100ನಲ್ಲಿ ನಿಖಿಲ್ ಕುಮಾರಸ್ವಾಮಿ ಫುಲ್​ ಜಾಲಿ ರೈಡ್​
ಪತ್ನಿ ಜತೆ ನಿಖಿಲ್ ಕುಮಾರಸ್ವಾಮಿ ಜಾಲಿ ರೈಡ್​
Lakshmi Hegde
|

Updated on:Feb 23, 2021 | 5:24 PM

Share

ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಪುತ್ರ, ನಟ ನಿಖಿಲ್​ ಕುಮಾರಸ್ವಾಮಿ ( Nikhil Kumarswamy)  ಪತ್ನಿ ಜತೆ ಆರ್​ಎಕ್ಸ್​ 100 ಬೈಕ್​ನಲ್ಲ ಜಾಲಿ ರೈಡ್​ ಮಾಡಿದ ವಿಡಿಯೋ ವೈರಲ್​ ಆಗಿದೆ. ಈ ವಿಡಿಯೋವನ್ನು ನಿಖಿಲ್​ ಕುಮಾರಸ್ವಾಮಿ ತಮ್ಮ ಇನ್ಸ್ಟಾಗ್ರಾಂನಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ತೆಂಗಿನ ತೋಟದ ಮಧ್ಯೆ ದಂಪತಿ ಬೈಕ್​ನಲ್ಲಿ ರೈಡ್​ ಹೋಗುವ ವಿಡಿಯೋಕ್ಕೆ 2 ಲಕ್ಷಕ್ಕೂ ಅಧಿಕ ವೀವ್ಸ್ ಬಂದಿದೆ. ನೀವಿಬ್ರೂ ಸೂಪರ್​.. ಬಾಸ್​ ಈಸ್ ಆಲ್ವೇಸ್ ಕಿಂಗ್​..ಎಂಬಿತ್ಯಾದಿ ಕಾಮೆಂಟ್​ಗಳನ್ನು ಅಭಿಮಾನಿಗಳು ಪ್ರೀತಿಯಿಂದ ಬರೆದಿದ್ದಾರೆ. ವಿಡಿಯೋ ಶೇರ್​ ಮಾಡಿಕೊಂಡಿರುವ ನಿಖಿಲ್ ಕುಮಾರಸ್ವಾಮಿ, ಆರ್​ಎಕ್ಸ್​ 100 (RX 100) ನನ್ನ ಸದಾ ಕಾಲದ ನೆಚ್ಚಿನ ಬೈಕ್​ ಎಂದೂ ಹೇಳಿದ್ದಾರೆ.

ಸದ್ಯ ನಿಖಿಲ್ ಕುಮಾರಸ್ವಾಮಿ ರೈಡರ್​ ಸಿನಿಮಾ ಶೂಟಿಂಗ್​ನಲ್ಲಿ ತೊಡಗಿಕೊಂಡಿದ್ದಾರೆ. ಇದರಲ್ಲಿ ನಿಖಿಲ್​ದು ಬಾಸ್ಕೆಟ್​ ಬಾಲ್ ಆಟಗಾರನ ಪಾತ್ರ. ಈ ಚಿತ್ರದ ಮೋಶನ್​ ಪೋಸ್ಟರ್, ಟೀಸರ್​ ​ ಕೂಡ ಬಿಡುಗಡೆಯಾಗಿದೆ. ಈ ಮಧ್ಯೆ ಬಿಡುವು ಮಾಡಿಕೊಂಡು ಪತ್ನಿ ಜತೆ ಫುಲ್​ ಖುಷಿಯಾಗಿ ಕಾಲಕಳೆಯುತ್ತಿದ್ದಾರೆ. ಕಳೆದ ವರ್ಷ ಏಪ್ರಿಲ್​ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ನಿಖಿಲ್​ ಮತ್ತು ರೇವತಿ ಆಗಾಗ ಸಾರ್ವಜನಿಕವಾಗಿ ಒಟ್ಟಾಗಿ ಕಾಣಿಸಿಕೊಳ್ಳುತ್ತಾರೆ. ನಿಖಿಲ್​ ಆಗಾಗ ಸೋಷಿಯಲ್​ ಮೀಡಿಯಾದಲ್ಲಿ ತಮ್ಮ ಫೋಟೋಗಳನ್ನು ಶೇರ್​ ಮಾಡಿಕೊಳ್ಳುತ್ತಿರುತ್ತಾರೆ. ನಿಖಿಲ್​ ಕುಮಾರಸ್ವಾಮಿ ಬರ್ತ್​ ಡೇ ಸಿಲೆಬ್ರೇಶನ್​ ವಿಡಿಯೋ ಕೂಡ ಸಖತ್ ವೈರಲ್​ ಆಗಿತ್ತು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಸೋತ ನಂತರ ನಿಖಿಲ್ ಕುಮಾರಸ್ವಾಮಿ ರಾಜಕೀಯದಿಂದ ದೂರವೇ ಉಳಿದಿದ್ದಾರೆ. ಸಮಾಜ ಸೇವೆ, ನಟನೆಯ ಬಗ್ಗೆಯೇ ಹೆಚ್ಚು ಗಮನಹರಿಸುತ್ತಿದ್ದಾರೆ. 2019ರಲ್ಲಿ ತೆರೆಕಂಡ ಕುರುಕ್ಷೇತ್ರ ಸಿನಿಮಾ ಬಳಿಕ ನಿಖಿಲ್​ ಕುಮಾರಸ್ವಾಮಿಯ ಯಾವುದೇ ಸಿನಿಮಾವೂ ಬಂದಿಲ್ಲ. ಇದೀಗ ರೈಡರ್​​ ಬಗ್ಗೆ ಸಹಜವಾಗಿಯೇ ಅಭಿಮಾನಿಗಳಲ್ಲಿ ನಿರೀಕ್ಷೆ ಹುಟ್ಟಿದೆ.

Published On - 5:21 pm, Tue, 23 February 21

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ