AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಯ ಮಡದಿ ಜತೆ, ನೆಚ್ಚಿನ ಬೈಕ್​ ಆರ್​ಎಕ್ಸ್​ 100ನಲ್ಲಿ ನಿಖಿಲ್ ಕುಮಾರಸ್ವಾಮಿ ಫುಲ್​ ಜಾಲಿ ರೈಡ್​

ಸದ್ಯ ನಿಖಿಲ್ ಕುಮಾರಸ್ವಾಮಿ ರೈಡರ್​ ಸಿನಿಮಾ ಶೂಟಿಂಗ್​ನಲ್ಲಿ ತೊಡಗಿಕೊಂಡಿದ್ದಾರೆ. ಇದರಲ್ಲಿ ನಿಖಿಲ್​ದು ಬಾಸ್ಕೆಟ್​ ಬಾಲ್ ಆಟಗಾರನ ಪಾತ್ರ. ಈ ಚಿತ್ರದ ಮೋಶನ್​ ಪೋಸ್ಟರ್, ಟೀಸರ್​ ​ ಕೂಡ ಬಿಡುಗಡೆಯಾಗಿದೆ.

ಪ್ರೀತಿಯ ಮಡದಿ ಜತೆ, ನೆಚ್ಚಿನ ಬೈಕ್​ ಆರ್​ಎಕ್ಸ್​ 100ನಲ್ಲಿ ನಿಖಿಲ್ ಕುಮಾರಸ್ವಾಮಿ ಫುಲ್​ ಜಾಲಿ ರೈಡ್​
ಪತ್ನಿ ಜತೆ ನಿಖಿಲ್ ಕುಮಾರಸ್ವಾಮಿ ಜಾಲಿ ರೈಡ್​
Lakshmi Hegde
|

Updated on:Feb 23, 2021 | 5:24 PM

Share

ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಪುತ್ರ, ನಟ ನಿಖಿಲ್​ ಕುಮಾರಸ್ವಾಮಿ ( Nikhil Kumarswamy)  ಪತ್ನಿ ಜತೆ ಆರ್​ಎಕ್ಸ್​ 100 ಬೈಕ್​ನಲ್ಲ ಜಾಲಿ ರೈಡ್​ ಮಾಡಿದ ವಿಡಿಯೋ ವೈರಲ್​ ಆಗಿದೆ. ಈ ವಿಡಿಯೋವನ್ನು ನಿಖಿಲ್​ ಕುಮಾರಸ್ವಾಮಿ ತಮ್ಮ ಇನ್ಸ್ಟಾಗ್ರಾಂನಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ತೆಂಗಿನ ತೋಟದ ಮಧ್ಯೆ ದಂಪತಿ ಬೈಕ್​ನಲ್ಲಿ ರೈಡ್​ ಹೋಗುವ ವಿಡಿಯೋಕ್ಕೆ 2 ಲಕ್ಷಕ್ಕೂ ಅಧಿಕ ವೀವ್ಸ್ ಬಂದಿದೆ. ನೀವಿಬ್ರೂ ಸೂಪರ್​.. ಬಾಸ್​ ಈಸ್ ಆಲ್ವೇಸ್ ಕಿಂಗ್​..ಎಂಬಿತ್ಯಾದಿ ಕಾಮೆಂಟ್​ಗಳನ್ನು ಅಭಿಮಾನಿಗಳು ಪ್ರೀತಿಯಿಂದ ಬರೆದಿದ್ದಾರೆ. ವಿಡಿಯೋ ಶೇರ್​ ಮಾಡಿಕೊಂಡಿರುವ ನಿಖಿಲ್ ಕುಮಾರಸ್ವಾಮಿ, ಆರ್​ಎಕ್ಸ್​ 100 (RX 100) ನನ್ನ ಸದಾ ಕಾಲದ ನೆಚ್ಚಿನ ಬೈಕ್​ ಎಂದೂ ಹೇಳಿದ್ದಾರೆ.

ಸದ್ಯ ನಿಖಿಲ್ ಕುಮಾರಸ್ವಾಮಿ ರೈಡರ್​ ಸಿನಿಮಾ ಶೂಟಿಂಗ್​ನಲ್ಲಿ ತೊಡಗಿಕೊಂಡಿದ್ದಾರೆ. ಇದರಲ್ಲಿ ನಿಖಿಲ್​ದು ಬಾಸ್ಕೆಟ್​ ಬಾಲ್ ಆಟಗಾರನ ಪಾತ್ರ. ಈ ಚಿತ್ರದ ಮೋಶನ್​ ಪೋಸ್ಟರ್, ಟೀಸರ್​ ​ ಕೂಡ ಬಿಡುಗಡೆಯಾಗಿದೆ. ಈ ಮಧ್ಯೆ ಬಿಡುವು ಮಾಡಿಕೊಂಡು ಪತ್ನಿ ಜತೆ ಫುಲ್​ ಖುಷಿಯಾಗಿ ಕಾಲಕಳೆಯುತ್ತಿದ್ದಾರೆ. ಕಳೆದ ವರ್ಷ ಏಪ್ರಿಲ್​ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ನಿಖಿಲ್​ ಮತ್ತು ರೇವತಿ ಆಗಾಗ ಸಾರ್ವಜನಿಕವಾಗಿ ಒಟ್ಟಾಗಿ ಕಾಣಿಸಿಕೊಳ್ಳುತ್ತಾರೆ. ನಿಖಿಲ್​ ಆಗಾಗ ಸೋಷಿಯಲ್​ ಮೀಡಿಯಾದಲ್ಲಿ ತಮ್ಮ ಫೋಟೋಗಳನ್ನು ಶೇರ್​ ಮಾಡಿಕೊಳ್ಳುತ್ತಿರುತ್ತಾರೆ. ನಿಖಿಲ್​ ಕುಮಾರಸ್ವಾಮಿ ಬರ್ತ್​ ಡೇ ಸಿಲೆಬ್ರೇಶನ್​ ವಿಡಿಯೋ ಕೂಡ ಸಖತ್ ವೈರಲ್​ ಆಗಿತ್ತು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಸೋತ ನಂತರ ನಿಖಿಲ್ ಕುಮಾರಸ್ವಾಮಿ ರಾಜಕೀಯದಿಂದ ದೂರವೇ ಉಳಿದಿದ್ದಾರೆ. ಸಮಾಜ ಸೇವೆ, ನಟನೆಯ ಬಗ್ಗೆಯೇ ಹೆಚ್ಚು ಗಮನಹರಿಸುತ್ತಿದ್ದಾರೆ. 2019ರಲ್ಲಿ ತೆರೆಕಂಡ ಕುರುಕ್ಷೇತ್ರ ಸಿನಿಮಾ ಬಳಿಕ ನಿಖಿಲ್​ ಕುಮಾರಸ್ವಾಮಿಯ ಯಾವುದೇ ಸಿನಿಮಾವೂ ಬಂದಿಲ್ಲ. ಇದೀಗ ರೈಡರ್​​ ಬಗ್ಗೆ ಸಹಜವಾಗಿಯೇ ಅಭಿಮಾನಿಗಳಲ್ಲಿ ನಿರೀಕ್ಷೆ ಹುಟ್ಟಿದೆ.

Published On - 5:21 pm, Tue, 23 February 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ