AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಖಿಲ್​ ಹೊಸ ಸಿನಿಮಾ ಹೆಸರು ‘ಯದುವೀರ’; ಖಡಕ್​ ಲುಕ್​ ಮೂಲಕ ಹುಟ್ಟುಹಬ್ಬದ ಗಿಫ್ಟ್​

Nikhil Kumaraswamy Birthday: ‘ಯದುವೀರ’ ಚಿತ್ರದ ಪೋಸ್ಟರ್​ ಮೂಲಕ ನಿಖಿಲ್​ ಕುಮಾರಸ್ವಾಮಿ ಅವರ ಹುಟ್ಟುಹಬ್ಬಕ್ಕೆ ಶುಭ ಕೋರಲಾಗಿದೆ. ಅವರ ಹೊಸ ಗೆಟಪ್​ ಕಂಡು ಫ್ಯಾನ್ಸ್​ ಖುಷಿ ಆಗಿದ್ದಾರೆ.

ನಿಖಿಲ್​ ಹೊಸ ಸಿನಿಮಾ ಹೆಸರು ‘ಯದುವೀರ’; ಖಡಕ್​ ಲುಕ್​ ಮೂಲಕ ಹುಟ್ಟುಹಬ್ಬದ ಗಿಫ್ಟ್​
ನಿಖಿಲ್ ಕುಮಾರಸ್ವಾಮಿ
TV9 Web
| Edited By: |

Updated on: Jan 22, 2022 | 12:57 PM

Share

ನಟ, ರಾಜಕಾರಣಿ ನಿಖಿಲ್​ ಕುಮಾರಸ್ವಾಮಿ (Nikhil Kumaraswamy) ಅವರಿಗೆ ಇಂದು (ಜ.22) ಹುಟ್ಟುಹಬ್ಬದ ಸಂಭ್ರಮ. ಈ ಖುಷಿಯ ದಿನದಂದು ಅವರ ಹೊಸ ಸಿನಿಮಾದ ಟೈಟಲ್​ ಮತ್ತು ಫಸ್ಟ್​ಲುಕ್​ ಬಿಡುಗಡೆ ಆಗಲಿದೆ ಎಂದು ಹೇಳಲಾಗಿತ್ತು. ಕೊಟ್ಟ ಮಾತಿನಂತೆಯೇ ಚಿತ್ರತಂಡದಿಂದ ಫಸ್ಟ್​ಲುಕ್​ ಪೋಸ್ಟರ್​ ಬಿಡುಗಡೆ ಆಗಿದೆ. ಈ ಚಿತ್ರಕ್ಕೆ ‘ಯದುವೀರ’ (Yaduveera Kannada Movie) ಎಂದು ಶೀರ್ಷಿಕೆ ಇಡಲಾಗಿದೆ. ನಿಖಿಲ್​ ಕುಮಾರ್​ ಅವರು ಖಡಕ್​ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ಮಂಜು ಅಥರ್ವ ನಿರ್ದೇಶನ ಮಾಡುತ್ತಿದ್ದು, ಕೆವಿಎನ್​ ಪ್ರೊಡಕ್ಷನ್ಸ್​ ಬ್ಯಾನರ್​ ಮೂಲಕ ನಿಶಾ ವೆಂಕಟ್​ ಕೊನಂಕಿ ಮತ್ತು ಸುಪ್ರಿತ್​ ಅವರು ನಿರ್ಮಾಣ ಮಾಡುತ್ತಿದ್ದಾರೆ. ಇದು ನಿಖಿಲ್​ ಕುಮಾರಸ್ವಾಮಿ (Nikhil Kumar) ನಟನೆಯ 5ನೇ ಸಿನಿಮಾ. ಇದೊಂದು ಪಕ್ಕಾ​ ಫ್ಯಾಮಿಲಿ ಎಂಟರ್​ಟೇನ್​ಮೆಂಟ್​​ ಸಿನಿಮಾ ಆಗಲಿರಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಜೊತೆಗೆ ಆ್ಯಕ್ಷನ್​ ಕೂಡ ಭರ್ಜರಿಯಾಗಿ ಇರಲಿದೆ.

ಖ್ಯಾತ ಸಂಗೀತ ನಿರ್ದೇಶಕ ಅಜನೀಶ್​ ಲೋಕನಾಥ್​ ಅವರು ‘ಯದುವೀರ’ ಚಿತ್ರಕ್ಕೆ ಸಂಗೀತ ನೀಡಲಿದ್ದಾರೆ. ನವೀನ್​ ಕುಮಾರ್​ ಛಾಯಾಗ್ರಹಣ ಮಾಡಲಿದ್ದಾರೆ. ಈ ಸಿನಿಮಾದಲ್ಲಿ ನಿಖಿಲ್​ ಜೊತೆ ಬೇರೆ ಯಾವೆಲ್ಲ ಕಲಾವಿದರು ನಟಿಸಲಿದ್ದಾರೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಇತ್ತೀಚೆಗಷ್ಟೇ ಈ ಸಿನಿಮಾದ ಶೂಟಿಂಗ್​ ಆರಂಭ ಆಗಿದೆ.

‘ಯದುವೀರ’ ಸಿನಿಮಾವನ್ನು ನಿರ್ದೇಶನ ಮಾಡುತ್ತಿರುವ ಮಂಜು ಅಥರ್ವ ಅವರಿಗೆ ಕನ್ನಡ ಚಿತ್ರರಂಗದಲ್ಲಿ ಹಲವು ವರ್ಷಗಳ ಅನುಭವ ಇದೆ. ಹಲವು ಚಿತ್ರಗಳಿಗೆ ಅವರು ಸಹ-ನಿರ್ದೇಶಕನಾಗಿ ಕೆಲಸ ಮಾಡಿದ್ದಾರೆ. ‘ಯದುವೀರ’ ಚಿತ್ರದ ಮೂಲಕ ಅವರು ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. ಈ ಸಿನಿಮಾದ ಪೋಸ್ಟರ್​ ಮೂಲಕ ನಿಖಿಲ್​ ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಶುಭ ಕೋರಲಾಗಿದೆ. ಅವರ ಹೊಸ ಗೆಟಪ್​ ಕಂಡು ಫ್ಯಾನ್ಸ್​ ಖುಷಿ ಆಗಿದ್ದಾರೆ. ರಗಡ್​ ಲುಕ್​ನಲ್ಲಿ ನಿಖಿಲ್​ ಕಾಣಿಸಿಕೊಂಡಿರುವುದರಿಂದ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿದೆ.

ಪರಿಸ್ಥಿತಿ ಚೆನ್ನಾಗಿ ಇದ್ದಿದ್ದರೆ ಇಂದು ಅದ್ದೂರಿಯಾಗಿ ನಿಖಿಲ್​ ಕುಮಾರ್​ ಬರ್ತ್​ಡೇ ಆಚರಣೆ ಮಾಡಿಕೊಳ್ಳಬೇಕಿತ್ತು. ಆದರೆ ಕೊರೊನಾ ವೈರಸ್​ ಹಾವಳಿಯಿಂದಾಗಿ ಅವರು ದೊಡ್ಡ ಮಟ್ಟದಲ್ಲಿ ಸೆಲೆಬ್ರೇಟ್​ ಮಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಕೇವಲ ಸೋಶಿಯಲ್​ ಮೀಡಿಯಾ ಮೂಲಕವೇ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ನಿಖಿಲ್​ಗೆ ಶುಭ ಕೋರುತ್ತಿದ್ದಾರೆ.

ಈ ವರ್ಷ ಅಭಿಮಾನಿಗಳ ಜೊತೆ ಸೇರಿ ಹುಟ್ಟುಹಬ್ಬ ಆಚರಣೆ ಮಾಡಲಾಗುತ್ತಿಲ್ಲ ಎಂಬ ಬಗ್ಗೆ ನಿಖಿಲ್​ ಕುಮಾರಸ್ವಾಮಿ ಅವರಿಗೆ ಬೇಸರ ಇದೆ. ಜ.21ರಂದು ನಿಖಿಲ್​ ಕುಮಾರಸ್ವಾಮಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಈ ಕುರಿತು ಪೋಸ್ಟ್​ ಮಾಡಿದ್ದಾರೆ. ‘ಕೊವಿಡ್ ಸಂಕಷ್ಟದ ಸಮಯದಲ್ಲಿ ಅದ್ದೂರಿ ಹುಟ್ಟುಹಬ್ಬದ ಆಚರಣೆಗೆ ನನ್ನ ಮನಸ್ಸು ಒಪ್ಪುತ್ತಿಲ್ಲ. ಹಾಗಾಗಿ ಈ ವರ್ಷ ನಾನು ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿಲ್ಲ. ಕೊವಿಡ್ ಸಂಕಷ್ಟದಲ್ಲಿ ಇರುವವರಿಗೆ ಅಭಿಮಾನಿಗಳು, ಕಾರ್ಯಕರ್ತರು ತಮ್ಮ ಕೈಲಾದ ಸಹಾಯ ಮಾಡುವ ಮೂಲಕ ತಾವಿದ್ದಲ್ಲಿಂದಲೇ ನನಗೆ ಹರಸಿ. ಒಂದು ಅರ್ಥಪೂರ್ಣ ಆಚರಣೆಗೆ ಕೈಜೋಡಿಸಿ’ ಎಂದು ನಿಖಿಲ್​ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:

‘ಪೈರಸಿ ಮೂಲಕ ‘ರೈಡರ್​’ ನೋಡ್ಬೇಡಿ’; ಕೈ ಮುಗಿದು ಮನವಿ ಮಾಡಿದ ನಿಖಿಲ್​ ಕುಮಾರ್​

‘ರೈಡರ್​’ ಚಿತ್ರ ನೋಡಿ ಜನ ಹೇಗೆ ಕಮೆಂಟ್​ ಮಾಡಿದಾರೆ? ಅಸಲಿ ವಿಚಾರ ತೆರೆದಿಟ್ಟ ನಿಖಿಲ್​

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ