AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭೀತಿ ನಡುವೆಯೇ ದಾಂಪತ್ಯ ಜೀವನಕ್ಕೆ ಕಾಲಿಡಲಿರುವ ನಿಖಿಲ್- ರೇವತಿ

ರಾಮನಗರ: ಎಲ್ಲೆಲ್ಲೂ ಭಯದ ವಾತಾವರಣ, ಒಂಚೂರು ಎಡವಟ್ಟಾದ್ರೂ ನಡೆಯೋದು ಮಾತ್ರ ಭೀಕರ ರಣಭೀಕರ. ಅಂದಹಾಗೆ ದೇಶಕ್ಕೆ ಕೊರೊನಾ ಸೋಂಕು ಅಪ್ಪಳಿಸಿದ ಪರಿಣಾಮ, ಇಡೀ ದೇಶವೇ ಲಾಕ್​ಡೌನ್ ಆಗಿದೆ. ಸಭೆ, ಸಮಾರಂಭಗಳು ಅಂದ್ರೆ ಜನ ಕಿಲೋ ಮೀಟರ್ ಲೆಕ್ಕದಲ್ಲಿ ಓಡೋಡಿ ಹೋಗ್ತಾರೆ. ಇಂಥ ಟೈಂನಲ್ಲೇ ಮಾಜಿ ಸಿಎಂ ಪುತ್ರನ ವಿವಾಹವೂ ಬಂದಿದ್ದು, ಸಿಂಪಲ್ ಆಗಿ ಮದುವೆ ಮುಗಿಸೋಕೆ ಹೆಚ್​ಡಿಕೆ ಕುಟುಂಬ ಅಂತಿಮ ಸಿದ್ಧತೆ ನಡೆಸಿದೆ. ಕೇತಗಾನಹಳ್ಳಿ ತೋಟದ ಮನೆಯಲ್ಲಿ ಅಂತಿಮ ಸಿದ್ಧತೆ:  ಮಾಜಿ ಪಿಎಂ ಮೊಮ್ಮಗ, ಮಾಜಿ ಸಿಎಂಗೆ […]

ಕೊರೊನಾ ಭೀತಿ ನಡುವೆಯೇ ದಾಂಪತ್ಯ ಜೀವನಕ್ಕೆ ಕಾಲಿಡಲಿರುವ ನಿಖಿಲ್- ರೇವತಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 17, 2020 | 6:53 AM

Share

ರಾಮನಗರ: ಎಲ್ಲೆಲ್ಲೂ ಭಯದ ವಾತಾವರಣ, ಒಂಚೂರು ಎಡವಟ್ಟಾದ್ರೂ ನಡೆಯೋದು ಮಾತ್ರ ಭೀಕರ ರಣಭೀಕರ. ಅಂದಹಾಗೆ ದೇಶಕ್ಕೆ ಕೊರೊನಾ ಸೋಂಕು ಅಪ್ಪಳಿಸಿದ ಪರಿಣಾಮ, ಇಡೀ ದೇಶವೇ ಲಾಕ್​ಡೌನ್ ಆಗಿದೆ. ಸಭೆ, ಸಮಾರಂಭಗಳು ಅಂದ್ರೆ ಜನ ಕಿಲೋ ಮೀಟರ್ ಲೆಕ್ಕದಲ್ಲಿ ಓಡೋಡಿ ಹೋಗ್ತಾರೆ. ಇಂಥ ಟೈಂನಲ್ಲೇ ಮಾಜಿ ಸಿಎಂ ಪುತ್ರನ ವಿವಾಹವೂ ಬಂದಿದ್ದು, ಸಿಂಪಲ್ ಆಗಿ ಮದುವೆ ಮುಗಿಸೋಕೆ ಹೆಚ್​ಡಿಕೆ ಕುಟುಂಬ ಅಂತಿಮ ಸಿದ್ಧತೆ ನಡೆಸಿದೆ.

ಕೇತಗಾನಹಳ್ಳಿ ತೋಟದ ಮನೆಯಲ್ಲಿ ಅಂತಿಮ ಸಿದ್ಧತೆ:  ಮಾಜಿ ಪಿಎಂ ಮೊಮ್ಮಗ, ಮಾಜಿ ಸಿಎಂಗೆ ಮಗ.. ಅಂದಹಾಗೆ ನಿಖಿಲ್ ಕುಮಾರಸ್ವಾಮಿ ಇಂದು ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಸ್ಯಾಂಡಲ್​ವುಡ್​ನಲ್ಲಿ ಭರ್ಜರಿ ಫೈಟ್ ಮಾಡಿ, ರಾಜಕೀಯ ಅಖಾಡದಲ್ಲೂ ಅದೃಷ್ಟವನ್ನ ಪರೀಕ್ಷಿಸಿದ್ದ ನಿಖಿಲ್​ಗೆ ಕಂಕಣ ಭಾಗ್ಯ ಒದಗಿ ಬಂದಿದೆ. ಹೆಚ್​ಡಿಡಿ ಮನೆಯಲ್ಲಿ ನಡೀತಿರೋ ಶುಭ ಸಮಾರಂಭವನ್ನು ಅದ್ಧೂರಿಯಾಗಿ ಮಾಡಬೇಕು ಅನ್ನೋ ಕನಸು ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಇತ್ತು. ತಮ್ಮ ಪುತ್ರನ ಮದುವೆ ಹಾಗೆ ನಡೆಯಬೇಕು, ತಯಾರಿಗಳು ಹೀಗೆ ಇರಬೇಕು ಅಂತೆಲ್ಲಾ ಹೆಚ್​ಡಿಕೆ ಕನಸು ಕಟ್ಟಿಕೊಂಡಿದ್ರು. ಆದ್ರೆ ಕೊರೊನಾ ಅನ್ನೋ ಹೆಮ್ಮಾರಿ ನಿಖಿಲ್ ಅದ್ಧೂರಿ ಮದುವೆಗೂ ಅಡ್ಡಿಯಾಗಿಬಿಟ್ಟಿತ್ತು.

‘ಯುವರಾಜ’ನ ಮದುವೆಯಲ್ಲಿ ಕೆಲವರು ಮಾತ್ರ ಭಾಗಿ..! ಅಂದಹಾಗೆ ದೇಶದಲ್ಲಿ ಹಾಗೂ ರಾಜ್ಯದಲ್ಲಿ ‘ಕೊರೊನಾ’ ಅಟ್ಟಹಾಸ ಶುರುವಾಗುವುದಕ್ಕೂ ಮೊದಲೇ ನಿಖಿಲ್ ಮ್ಯಾರೇಜ್ ಫಿಕ್ಸ್ ಆಗಿತ್ತು. ಆದ್ರೆ ದಿಢೀರ್ ಅಂತಾ ದಾಳಿಯಿಟ್ಟ ಕೊರೊನಾ ಎಲ್ಲವನ್ನ ಅಲ್ಲೋಲ ಕಲ್ಲೋಲ ಮಾಡಿದೆ. ಈ ಮೊದಲು ರಾಮನಗರದ ಜಾನಪದ ಲೋಕದ ಸಮೀಪದಲ್ಲಿ ಅದ್ಧೂರಿಯಾಗಿ ನಡೆದಿದ್ದ ಸಿದ್ಧತೆಗಳು ರದ್ದಾಗಿದ್ದವು. ನಂತರ ಸಿಂಪಲ್ ಆಗಿ ಮದುವೆ ಮಾಡಲು ಹೆಚ್​ಡಿಡಿ ಕುಟುಂಬ ನಿರ್ಧರಿಸಿತ್ತು. ಅದರಂತೆ ರಾಮನಗರ ತಾಲೂಕಿನ ಕೇತಗಾನಹಳ್ಳಿ ಗ್ರಾಮದ ಹೆಚ್​ಡಿಕೆ ತೋಟದ ಮನೆಯಲ್ಲಿ ಮದುವೆಗೆ ಅಂತಿಮ ಸಿದ್ಧತೆ ನಡೆದಿದ್ದು, ಇಂದು ನಿಖಿಲ್ ಮತ್ತು ರೇವತಿ ವಿವಾಹ ನೆರವೇರಲಿದೆ. ಆದ್ರೆ ನಿಖಿಲ್ ಮದುವೆಯಲ್ಲಿ ಎರಡೂ ಕುಟುಂಬದವರು ಸೇರಿದಂತೆ ಕೆಲವರು ಮಾತ್ರ ಭಾಗಿಯಾಗಲಿದ್ದಾರೆ ಎನ್ನಲಾಗ್ತಿದೆ.

ಒಟ್ನಲ್ಲಿ ಲಾಕ್​ಡೌನ್ ನಡುವೆಯೂ ಶುಭ ಸಮಾರಂಭ ನಡೆಯುತ್ತಿದ್ದು, ನಾಡಿನ ಚಿತ್ತ ನಿಖಿಲ್ ಮದುವೆಯತ್ತ ನೆಟ್ಟಿದೆ. ವಿವಾಹದಲ್ಲಿ ಭಾರಿ ಪ್ರಮಾಣದಲ್ಲಿ ಜನರು ಸೇರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಜನ ಸೇರದಂತೆ ಕೆಲವು ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಲಾಗಿದೆ. ಅಲ್ಲದೆ ಸುತ್ತಮುತ್ತಲ ಪ್ರದೇಶದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಆದ್ರೆ ಯಾರೆಲ್ಲಾ ನಿಖಿಲ್ ಮದುವೆಗೆ ಬರ್ತಾರೆ, ಲಾಕ್​ಡೌನ್ ಪರಿಣಾಮ ಸೆಲೆಬ್ರಿಟಿಗಳು ಗೈರು ಹಾಜರಾಗ್ತಾರಾ ಅನ್ನೋ ಕುತೂಹಲದ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ.

Published On - 6:52 am, Fri, 17 April 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್