ಯುವರಾಜನ ಕಲ್ಯಾಣೋತ್ಸವ: ನಿಖಿಲ್ ಕುಮಾರಸ್ವಾಮಿ-ರೇವತಿ ವಿವಾಹ ಸಂಭ್ರಮ

ರಾಮನಗರ: ಮಹಾಮಾರಿ ಕೊರೊನಾ ಭೀತಿಯ ನಡುವೆಯೇ ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಮತ್ತು ರೇವತಿ ವಿವಾಹ ಮಹೋತ್ಸವ ಸರಳವಾಗಿ ನೆರವೇರಿದೆ. ರಾಮನಗರ ತಾಲೂಕಿನ ಕೇತಗಾನಹಳ್ಳಿ ಗ್ರಾಮದ ಹೆಚ್​ಡಿಕೆ ತೋಟದ ಮನೆಯಲ್ಲಿ ಯುವರಾಜನ ಕಲ್ಯಾಣ ನಡೆದಿದೆ. ಏಪ್ರಿಲ್ 17 ರಂದು ಮದುವೆ ಮಾಡುಲು ಮೊದಲೇ ದಿನಾಂಕ ಫಿಕ್ಸ್ ಆಗಿತ್ತು. ಹಾಗಾಗಿ ಇಂದು ಬೆಳಗ್ಗೆ 6 ಗಂಟೆಯಿಂದಲೇ ಮದುವೆ ಶಾಸ್ತ್ರ ಆರಂಭಿಸಲಾಗಿದೆ. ಬೆಳಗ್ಗೆ 9 ಗಂಟೆಗೆ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ನಿಖಿಲ್- ರೇವತಿ ಕಾಲಿಟ್ಟಿದ್ದಾರೆ. ಕೊರೊನಾ ಭೀತಿ […]

ಯುವರಾಜನ ಕಲ್ಯಾಣೋತ್ಸವ: ನಿಖಿಲ್ ಕುಮಾರಸ್ವಾಮಿ-ರೇವತಿ ವಿವಾಹ ಸಂಭ್ರಮ
ಸಾಧು ಶ್ರೀನಾಥ್​

Updated on: Apr 18, 2020 | 10:50 AM

ರಾಮನಗರ: ಮಹಾಮಾರಿ ಕೊರೊನಾ ಭೀತಿಯ ನಡುವೆಯೇ ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಮತ್ತು ರೇವತಿ ವಿವಾಹ ಮಹೋತ್ಸವ ಸರಳವಾಗಿ ನೆರವೇರಿದೆ. ರಾಮನಗರ ತಾಲೂಕಿನ ಕೇತಗಾನಹಳ್ಳಿ ಗ್ರಾಮದ ಹೆಚ್​ಡಿಕೆ ತೋಟದ ಮನೆಯಲ್ಲಿ ಯುವರಾಜನ ಕಲ್ಯಾಣ ನಡೆದಿದೆ.

ಏಪ್ರಿಲ್ 17 ರಂದು ಮದುವೆ ಮಾಡುಲು ಮೊದಲೇ ದಿನಾಂಕ ಫಿಕ್ಸ್ ಆಗಿತ್ತು. ಹಾಗಾಗಿ ಇಂದು ಬೆಳಗ್ಗೆ 6 ಗಂಟೆಯಿಂದಲೇ ಮದುವೆ ಶಾಸ್ತ್ರ ಆರಂಭಿಸಲಾಗಿದೆ. ಬೆಳಗ್ಗೆ 9 ಗಂಟೆಗೆ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ನಿಖಿಲ್- ರೇವತಿ ಕಾಲಿಟ್ಟಿದ್ದಾರೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಎರಡೂ ಕುಟುಂಬದ ಕಡಿಮೆ ಸದಸ್ಯರು ಮಾತ್ರ ಮದುವೆಯಲ್ಲಿ ಭಾಗಿಯಾಗಿದ್ದರು.

ಮದುವೆಗೆ ಹೆಚ್ಚು ಜನರು ಸೇರುವ ಕಾರಣ ಫಾರ್ಮ್‌ಹೌಸ್ ಬಳಿ ಪೊಲೀಸ್ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿತ್ತು. ವಿವಾಹ ಕಾರ್ಯಕ್ರಮಕ್ಕೆ ತೆರಳುವ ಪ್ರತಿಯೊಂದು ವಾಹನಗಳನ್ನು ಪೊಲೀಸರು ತಪಾಸಣೆ ಮಾಡಿಯೇ ಒಳಬಿಟ್ಟಿದ್ದಾರೆ.

Published On - 10:34 am, Fri, 17 April 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us