AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿ ಪ್ರೇಕ್ಷಕರ ಮನಗೆದ್ದ ನಿಖಿಲ್​ ಕುಮಾರ್​; ‘ರೈಡರ್’ ಚಿತ್ರಕ್ಕೆ 100 ಮಿಲಿಯನ್​ ವೀಕ್ಷಣೆ

ಆರಂಭದಲ್ಲಿ ‘ರೈಡರ್’ ಚಿತ್ರ ಕೇವಲ ಕನ್ನಡದಲ್ಲಿ ಬಿಡುಗಡೆ ಆಗಿತ್ತು. ಆನಂತರ ಹಿಂದಿಗೆ ಡಬ್ ಆಯಿತು. ಮಾಸ್​ ಸಿನಿಮಾ ಇಷ್ಟಪಡುವ ಹಿಂದಿ ಪ್ರೇಕ್ಷಕರು ನಿಖಿಲ್ ಕುಮಾರ್​ ಅವರ ಈ ಸಿನಿಮಾವನ್ನು ಯೂಟ್ಯೂಬ್​ನಲ್ಲಿ ನೋಡಿ ಎಂಜಾಯ್​ ಮಾಡಿದ್ದಾರೆ. ಅವರ ಮುಂಬರುವ ಸಿನಿಮಾ ಮೇಲೆ ಇದರಿಂದ ನಿರೀಕ್ಷೆ ಹೆಚ್ಚಾಗಿದೆ.

ಹಿಂದಿ ಪ್ರೇಕ್ಷಕರ ಮನಗೆದ್ದ ನಿಖಿಲ್​ ಕುಮಾರ್​; ‘ರೈಡರ್’ ಚಿತ್ರಕ್ಕೆ 100 ಮಿಲಿಯನ್​ ವೀಕ್ಷಣೆ
ನಿಖಿಲ್​ ಕುಮಾರಸ್ವಾಮಿ
ಮದನ್​ ಕುಮಾರ್​
|

Updated on: Sep 07, 2023 | 3:13 PM

Share

ನಟ ನಿಖಿಲ್​ ಕುಮಾರ್​ (Nikhil Kumar) ಅವರು ರಾಜಕೀಯದ ಜೊತೆ ಚಿತ್ರರಂಗದಲ್ಲಿ ಮತ್ತೆ ಆ್ಯಕ್ಟೀವ್​ ಆಗಿದ್ದಾರೆ. ಈ ಸಂದರ್ಭಕ್ಕೆ ಸರಿಯಾಗಿ ಅವರ ‘ರೈಡರ್’ ಸಿನಿಮಾ (Rider Movie) ಸದ್ದು ಮಾಡುತ್ತಿದೆ. ಅಂದಹಾಗೆ, ಈ ಸಿನಿಮಾ ತೆರೆಕಂಡಿದ್ದು 2021ರಲ್ಲಿ. ಆದರೂ ಕೂಡ ಈ ಚಿತ್ರದ ಬಗ್ಗೆ ಈಗ ಮತ್ತೆ ಸುದ್ದಿ ಜೋರಾಗಿದೆ. ಅದಕ್ಕೆ ಬಲವಾದ ಕಾರಣ ಕೂಡ ಇದೆ. 2 ವರ್ಷಗಳ ಹಿಂದೆ ರಿಲೀಸ್​ ಆಗಿದ್ದ ಈ ಚಿತ್ರಕ್ಕೆ ಹಿಂದಿ ಪ್ರೇಕ್ಷಕರು ಮನ ಸೋತಿದ್ದಾರೆ. ಅದಕ್ಕೆ ಸಾಕ್ಷಿ ಒದಗಿಸುತ್ತಿದೆ ಯೂಟ್ಯೂಬ್​ (YouTube) ವೀವ್ಸ್​. ಹೌದು, ‘ರೈಡರ್​’ ಚಿತ್ರದ ಹಿಂದಿ ವರ್ಷನ್​ ಅನ್ನು ಬರೋಬ್ಬರಿ 100 ಮಿಲಿಯನ್​ ಬಾರಿ ವೀಕ್ಷಣೆ ಮಾಡಲಾಗಿದೆ. ಅಂದರೆ, 10 ಕೋಟಿ ಬಾರಿ ಈ ಸಿನಿಮಾ ವೀಕ್ಷಣೆ ಕಂಡಿದೆ.

ನಿಖಿಲ್ ಕುಮಾರ್​ ಅವರು ‘ರೈಡರ್​’ ಸಿನಿಮಾದ ಹಿಂದಿ ಡಬ್ಬಿಂಗ್​ ವರ್ಷನ್​ ಮೂಲಕ ಉತ್ತರ ಭಾರತದಲ್ಲೂ ಖ್ಯಾತಿ ಗಳಿಸಿದ್ದಾರೆ. ಸ್ಯಾಂಡಲ್​ವುಡ್​ ಸಿನಿಮಾಗಳು ಕರುನಾಡಿನಲ್ಲೇ ಇಷ್ಟೊಂದು ವೀವ್ಸ್​ ಪಡೆಯುವುದು ವಿರಳ. ಅಂಥದ್ದರಲ್ಲಿ ನಿಖಿಲ್ ಕುಮಾರ್​ ನಟನೆಯ ‘ರೈಡರ್​’ ಸಿನಿಮಾ ಹಿಂದಿ ಭಾಷೆಯಲ್ಲಿ 100 ಮಿಲಿಯನ್ ಬಾರಿ ವೀಕ್ಷಣೆ ಕಂಡಿದೆ ಎಂಬುದು ಗಮನಾರ್ಹ ಸಂಗತಿ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಕರುನಾಡಿನಲ್ಲಿ ಮಾತ್ರವಲ್ಲದೇ ಹಿಂದಿ ಪ್ರೇಕ್ಷಕರ ವಲಯದಲ್ಲೂ ನಿಖಿಲ್​ ಕುಮಾರ್​ಗೆ ಫ್ಯಾನ್ಸ್​ ಇದ್ದಾರೆ ಎಂಬುದಕ್ಕೆ ಈ 100 ಮಿಲಿಯನ್​ ಸಾಕ್ಷಿ ಒದಗಿಸುತ್ತಿದೆ.

‘ರೈಡರ್​’ ಹಿಂದಿ ವರ್ಷನ್:

‘ರೈಡರ್’ ಸಿನಿಮಾ ಕುರಿತು:

ಆರಂಭದಲ್ಲಿ ‘ರೈಡರ್’ ಚಿತ್ರ ಕೇವಲ ಕನ್ನಡದಲ್ಲಿ ಬಿಡುಗಡೆ ಆಗಿತ್ತು. ಆನಂತರ ಈ ಸಿನಿಮಾ ಹಿಂದಿಗೆ ಡಬ್ ಆಯಿತು. ಹಿಂದಿ ಪ್ರೇಕ್ಷಕರು ನಿಖಿಲ್ ಕುಮಾರ್​ ಅವರನ್ನು ಯೂಟ್ಯೂಬ್​ನಲ್ಲಿ ನೋಡಿ ಎಂಜಾಯ್​ ಮಾಡಿದ್ದಾರೆ. ನಿರ್ದೇಶಕ ವಿಜಯ್ ಕುಮಾರ್ ಕೊಂಡ ಅವರು ‘ರೈಡರ್’ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಿದ್ದರು. ಈ ಸಿನಿಮಾ ಪಕ್ಕಾ ಮಾಸ್ ಪ್ರೇಕ್ಷಕರಿಗೆ ಹೇಳಿ ಮಾಡಿಸಿದಂತಿತ್ತು. ತಮಿಳು ಹಾಗೂ ತೆಲುಗು ಚಿತ್ರಗಳಲ್ಲಿ ನಟಿಸಿದ್ದ ಕಾಶ್ಮೀರಾ ಪರದೇಶಿ ಅವರು ‘ರೈಡರ್​’ ಸಿನಿಮಾದಲ್ಲಿ ನಿಖಿಲ್​ಗೆ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಈ ಚಿತ್ರದ ಮೂಲಕ ಕಾಶ್ಮೀರಾ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ಚಿತ್ರದ ಹಾಡುಗಳು ಅರ್ಜುನ್ ಜನ್ಯ ಅವರ ಸಂಗೀತ ನಿರ್ದೇಶನದಲ್ಲಿ ಮೂಡಿಬಂದಿದ್ದವು.

ಇದನ್ನೂ ಓದಿ: ‘ರಾಜಕಾರಣದಿಂದ ಒಂದು ಹೆಜ್ಜೆ ಹೊರಗೆ ಇಟ್ಟಿದ್ದೇನೆ ಎಂಬ ಭಾವನೆ ಯಾರಿಗೂ ಬೇಡ’: ನಿಖಿಲ್​ ಕುಮಾರ್​ ಸ್ಪಷ್ಟನೆ

ಹೊಸ ಸಿನಿಮಾ ಕೆಲಸದಲ್ಲಿ ನಿಖಿಲ್​ ಬ್ಯುಸಿ:

ಇತ್ತೀಚೆಗಷ್ಟೇ ನಿಖಿಲ್ ಅವರ ಹೊಸ ಸಿನಿಮಾ ಸೆಟ್ಟೇರಿತು. ಆ ಸಿನಿಮಾ ಮೂಲಕ ಅವರು ಮತ್ತೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗುತ್ತಿದ್ದಾರೆ. ಖ್ಯಾತ ನಿರ್ಮಾಣ ಸಂಸ್ಥೆಯಾದ ಲೈಕಾ ಪ್ರೊಡಕ್ಷನ್​ ಮೂಲಕ ನಿಖಿಲ್​ ಅವರ ಹೊಸ ಚಿತ್ರ ನಿರ್ಮಾಣ ಆಗುತ್ತಿದೆ. ಕಾಲಿವುಡ್​ನ ಖ್ಯಾತ ನಿರ್ದೇಶಕ ಲಕ್ಷ್ಮಣ್ ಅವರು ಈ ಸಿನಿಮಾದ ಸಾರಥ್ಯ ವಹಿಸಿಕೊಂಡಿದ್ದಾರೆ. ಇದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮೂಡಿಬರುತ್ತಿದೆ ಎಂಬುದು ವಿಶೇಷ. ಹಿಂದಿಯಲ್ಲೂ ಬಿಡುಗಡೆ ಆಗಲಿದೆ. ಆ ಮೂಲಕ ಹಿಂದಿ ಪ್ರೇಕ್ಷಕರಿಗೆ ನಿಖಿಲ್​ ಅವರು ಮತ್ತಷ್ಟು ಹತ್ತಿರ ಆಗಲಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ