AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

​ನಿಖಿಲ್​ ಕುಮಾರಸ್ವಾಮಿ ಪತ್ನಿ ರೇವತಿಗೆ ಸೀಮಂತ; ದೇವೇಗೌಡರ ಕುಟುಂಬದಲ್ಲಿ ಸಂಭ್ರಮ

ಎಚ್​ಎಸ್​ಆರ್​ ಲೇಔಟ್​ನಲ್ಲಿ ಇರುವ ಮಾನ್ವಿ ಕನ್ವೆನ್ಷನ್ ಹಾಲ್​ನಲ್ಲಿ ನಿಖಿಲ್ ಕುಮಾರಸ್ವಾಮಿ​ ಪತ್ನಿ ರೇವತಿ ಅವರ ಸೀಮಂತ ಕಾರ್ಯಕ್ರಮ ನಡೆಯುತ್ತಿದೆ. ಕೇವಲ ಕುಟುಂಬದವರು ಮತ್ತು ಆಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿದೆ.

​ನಿಖಿಲ್​ ಕುಮಾರಸ್ವಾಮಿ ಪತ್ನಿ ರೇವತಿಗೆ ಸೀಮಂತ; ದೇವೇಗೌಡರ ಕುಟುಂಬದಲ್ಲಿ ಸಂಭ್ರಮ
ನಿಖಿಲ್ ಕುಮಾರಸ್ವಾಮಿ, ರೇವತಿ
TV9 Web
| Edited By: |

Updated on: Sep 13, 2021 | 1:09 PM

Share

ನಿಖಿಲ್​ ಕುಮಾರಸ್ವಾಮಿ ಮತ್ತು ರೇವತಿ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ ಎಂಬ ಸುದ್ದಿ ಕೇಳಿ ಅವರ ಫ್ಯಾನ್ಸ್​ ಖುಷಿ ಆಗಿದ್ದರು. ರೇವತಿ ಅವರು ಈಗ 8 ತಿಂಗಳ ತುಂಬು ಗರ್ಭಿಣಿ. ಆ ಪ್ರಯುಕ್ತ ಸೀಮಂತ ಕಾರ್ಯಕ್ರಮ ನೆರವೇರಿಸಲಾಗುತ್ತಿದೆ. ದೇವೇಗೌಡರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಎಚ್​ಎಸ್​ಆರ್​ ಲೇಔಟ್​ನಲ್ಲಿ ಇರುವ ಮಾನ್ವಿ ಕನ್ವೆನ್ಷನ್ ಹಾಲ್​ನಲ್ಲಿ ನಿಖಿಲ್​ ಪತ್ನಿ ರೇವತಿಗೆ ಸೀಮಂತ ಕಾರ್ಯಕ್ರಮ ಮಾಡಲಾಗುತ್ತಿದೆ. ಇಂದು (ಸೆ.13) ಈ ಕಾರ್ಯ ನಡೆಯುತ್ತಿದ್ದು, ಕೇವಲ ಕುಟುಂಬದವರು ಮತ್ತು ಆಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಕೊವಿಡ್​ ನಿಯಮಾವಳಿ ಹಿನ್ನೆಲೆಯಲ್ಲಿ ಹೆಚ್ಚಿನವರನ್ನು ಆಹ್ವಾನಿಸಲು ಸಾಧ್ಯವಾಗಿಲ್ಲ. ಕುಮಾರಸ್ವಾಮಿ ಕುಟುಂಬದ ಆಪ್ತರು ಈ ಸೀಮಂತ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ.

2020ರ ಏಪ್ರಿಲ್​ನಲ್ಲಿ ರೇವತಿ ಜೊತೆ ನಿಖಿಲ್​ ಕುಮಾರಸ್ವಾಮಿ ಸಪ್ತಪದಿ ತುಳಿದಿದ್ದರು. ಲಾಕ್​ಡೌನ್​ ನಿಯಮಗಳ ಅನುಸಾರ ಈ ಹೈಪ್ರೊಫೈಲ್​ ಕುಟುಂಬದಲ್ಲಿ ವಿವಾಹ ಸಮಾರಂಭ ನೆರವೇರಿತ್ತು. ಬಿಡದಿ ಬಳಿ ಇರುವ ಫಾರ್ಮ್​ಹೌಸ್​ನಲ್ಲಿ ರೇವತಿ ಮತ್ತು ನಿಖಿಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ರೇವತಿ ಪ್ರೆಗ್ನೆಂಟ್​ ಎಂಬ ಸುದ್ದಿ ಇತ್ತೀಚಿನ ಕೆಲವು ತಿಂಗಳುಗಳಿಂದ ಕೇಳಿಬರುತ್ತಿತ್ತು. ಈ ವರ್ಷ ಜೂನ್​ನಲ್ಲಿ ಆ ಬಗ್ಗೆ ಸ್ವತಃ ನಿಖಿಲ್​ ಪ್ರತಿಕ್ರಿಯೆ ನೀಡಿದ್ದರು. ‘ಕೇಳಿಬರುತ್ತಿರುವ ಸುದ್ದಿ ನಿಜ. ನಾವು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ. ಶೀಘ್ರದಲ್ಲಿ ನಮ್ಮ ಕುಟುಂಬಕ್ಕೆ ಹೊಸ ಅತಿಥಿ ಬರಲಿದ್ದಾರೆ’ ಎಂದು ನಿಖಿಲ್​ ಹೇಳಿದ್ದರು.

ಸಿನಿಮಾ ಮತ್ತು ರಾಜಕೀಯ ಎರಡರಲ್ಲೂ ಬ್ಯುಸಿ ಆಗಿರುವ ನಿಖಿಲ್​ ಅವರು ಕುಟುಂಬದ ಕಡೆಗೂ ಹೆಚ್ಚು ಗಮನ ನೀಡುತ್ತಾರೆ. ಪತ್ನಿ ಜೊತೆ ಇರುವ ಫೋಟೋಗಳನ್ನು ಅವರು ಆಗಾಗ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾ ಇರುತ್ತಾರೆ. ಇತ್ತೀಚೆಗೆ ಅವರ ಮನೆಯಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಆ ಸಂದರ್ಭದ ಫೋಟೋವನ್ನು ಹಂಚಿಕೊಂಡ ನಿಖಿಲ್​, ತಮ್ಮ ಅಭಿಮಾನಿಗಳಿಗೆ ವಿಶ್​ ಮಾಡಿದ್ದರು.

ಮೊದಲ ಮಗುವಿನ ನಿರೀಕ್ಷೆಯಲ್ಲಿ ಇರುವ ನಿಖಿಲ್​ ಮತ್ತು ರೇವತಿ ದಂಪತಿಗೆ ಎಲ್ಲರಿಂದ ಶುಭ ಹಾರೈಕೆಗಳು ಕೇಳಿಬರುತ್ತಿವೆ. ಸಿನಿಮಾ ವಿಚಾರಕ್ಕೆ ಬರುವುದಾದರೆ ನಿಖಿಲ್​ ಸದ್ಯ ‘ರೈಡರ್​’ ಚಿತ್ರದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ:

ನಿಖಿಲ್​ ಕುಮಾರಸ್ವಾಮಿ ಬೆನ್ನಲ್ಲೇ ರೈಡರ್​ ಚಿತ್ರತಂಡಕ್ಕೂ ಕೊರೊನಾ

Nikhil Kumaraswamy: ಕನ್ನಡ ಸರಿಯಾಗಿ ಬರಲ್ವಾ; ತಪ್ಪು ಪದ ಬಳಸಿ ಟ್ರೋಲ್​ ಆದ ನಿಖಿಲ್​ ಕುಮಾರಸ್ವಾಮಿ

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ