AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಖಿಲ್​ ನನಗೆ ಮೋಸ ಮಾಡಿದ್ದಾನೆ; ಪೊಲೀಸ್​ ಠಾಣೆ ಮೆಟ್ಟಿಲೇರಿದ ನಿಕ್ಕಿ ಗಲ್ರಾನಿ

ನಿಕ್ಕಿ ಗಲ್ರಾನಿ ಇತ್ತೀಚೆಗೆ ಪೊಲೀಸ್​ ಠಾಣೆ ಮೆಟ್ಟಿಲೇರಿ ತಮಗೆ ನ್ಯಾಯ ಕೊಡಿಸುವಂತೆ ಕೇಳಿದ್ದಾರೆ. ಪರಿಚಯದ ವ್ಯಕ್ತಿ ನಿಖಿಲ್​ ತಮಗೆ ಮೋಸ ಮಾಡಿದ್ದಾರೆ ಎಂದು ಅವರು ದೂರು ನೀಡಿದ್ದಾರೆ.

ನಿಖಿಲ್​ ನನಗೆ ಮೋಸ ಮಾಡಿದ್ದಾನೆ; ಪೊಲೀಸ್​ ಠಾಣೆ ಮೆಟ್ಟಿಲೇರಿದ ನಿಕ್ಕಿ ಗಲ್ರಾನಿ
ನಿಕ್ಕಿ ಗಲ್ರಾನಿ
ರಾಜೇಶ್ ದುಗ್ಗುಮನೆ
| Edited By: |

Updated on: Apr 17, 2021 | 4:06 PM

Share

ಸ್ಯಾಂಡಲ್​ವುಡ್​ ಡ್ರಗ್​ ಕೇಸ್​ನಲ್ಲಿ ನಟಿ ಸಂಜನಾ ಗಲ್ರಾನಿ ಸುದ್ದಿಯಾಗಿದ್ದರು. ಅವರು ಜೈಲಿಗೆ ಕೂಡ ಹೋಗಿ ಬಂದಿದ್ದರು. ಈಗ ಅವರ ಸಹೋದರಿ ನಿಕ್ಕಿ ಗಲ್ರಾನಿ ಸುದ್ದಿಯಾಗಿದ್ದಾರೆ. ಹಣ ಪಡೆದು ಅದನ್ನು ಹಿಂದಿರುಗಿಸದೇ ಮೋಸ ಮಾಡಿರುವುದಾಗಿ ನಿಖಿಲ್​ ಹೆಗ್ಡೆ ವಿರುದ್ಧ ಅವರು ಕೋರ್ಟ್​ ಮೆಟ್ಟಿಲೇರಿದ್ದಾರೆ. ನಿಕ್ಕಿ ಗಲ್ರಾನಿ ಇತ್ತೀಚೆಗೆ ಪೊಲೀಸ್​ ಠಾಣೆ ಮೆಟ್ಟಿಲೇರಿ ತಮಗೆ ನ್ಯಾಯ ಕೊಡಿಸುವಂತೆ ಕೇಳಿದ್ದಾರೆ. ಪರಿಚಯದ ವ್ಯಕ್ತಿ ನಿಖಿಲ್​ ತಮಗೆ ಮೋಸ ಮಾಡಿದ್ದಾರೆ ಎಂದು ಅವರು ದೂರು ನೀಡಿದ್ದಾರೆ. ಅದು 2016ರ ಸಮಯ. ನಿಖಿಲ್​ ಕೆಫೆ ಒಂದನ್ನು ತೆರೆಯಲು ಮುಂದಾಗಿದ್ದರು. ಇದಕ್ಕೆ ದೊಡ್ಡ ಮೊತ್ತದ ಹಣ ಬೇಕಿತ್ತು. ಹೀಗಾಗಿ, ನಿಕ್ಕಿ ಬಳಿ ನಿಖಿಲ್​ ಹಣ ಕೇಳಿದ್ದರು. ಅಂತೆಯೇ, ನಿಕ್ಕಿ ಬರೋಬ್ಬರಿ 50 ಲಕ್ಷ ರೂಪಾಯಿ ಹಣವನ್ನು ನಿಖಿಲ್​ಗೆ ವರ್ಗಾಯಿಸಿದ್ದರು. ಹಣ ವರ್ಗಾವಣೆ ವೇಳೆ ಒಪ್ಪಂದ ಕೂಡ ಆಗಿತ್ತು.

ಈ ಒಪ್ಪಂದದ ಪ್ರಕಾರ ನಿಖಿಲ್​ ಪ್ರತಿ ತಿಂಗಳು 1 ಲಕ್ಷ ರೂಪಾಯಿ ಹಣವನ್ನು ನಿಕ್ಕಿಗೆ ನೀಡಬೇಕು. ಇದಕ್ಕೆ ನಿಖಿಲ್​ ಒಪ್ಪಿದ್ದರು. ಆದರೆ, ಈವರೆಗೆ ಒಂದು ರೂಪಾಯಿ ಹಣವನ್ನು ಕೂಡ ಅವರು ನಿಕ್ಕಿಗೆ ಹಿಂದಿರುಗಿಸಿಲ್ಲ. ಇನ್ನು, ನಿಕ್ಕಿ ಕರೆ ಮಾಡಿದರೂ ಕೂಡ ನಿಖಿಲ್​ ಕಾಲ್​ ಸ್ವೀಕರಿಸುತ್ತಿಲ್ಲವಂತೆ. ಪೊಲೀಸರು ಕೇಸ್​ ದಾಖಲಿಸಿಕೊಂಡಿದ್ದು, ನೋಟಿಸ್​ ನೀಡಿದ್ದಾರೆ.

ನಿಕ್ಕಿ ಗಲ್ರಾನಿ 2014ರಲ್ಲಿ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟಿದ್ದರು. ಕನ್ನಡ ತಮಿಳು, ಮಲಯಾಳಂ ಸೇರಿ 30ಕ್ಕೂ ಅಧಿಕ ಸಿನಿಮಾಗಳಲ್ಲಿ ನಿಕ್ಕಿ ನಟಿಸಿದ್ದಾರೆ. ತೆಲುಗು ಇಂಡಸ್ಟ್ರಿಯಲ್ಲಿ ನಿಕ್ಕಿ ಹೆಚ್ಚು ಪರಿಚಿತರಾಗಿದ್ದಾರೆ.

ಸ್ಯಾಂಡಲ್​ವುಡ್​ನಲ್ಲಿ ಸಂಜನಾ ಗಲ್ರಾನಿ ಹೆಸರು ಮಾಡಿದ್ದಾರೆ. ಆದರೆ, ಅವರು ಡ್ರಗ್​ ಕೇಸ್​ನಲ್ಲಿ ಜೈಲಿಗೆ ಹೋಗಿ ಬಂದಿದ್ದಾರೆ. ಇದು ಅವರ ಸಿನಿಮಾ ಕೆರಿಯರ್​ಗೆ ದೊಡ್ಡ ಹೊಡೆತ ನೀಡಿತ್ತು.

ಇದನ್ನೂ ಓದಿ: ಯುಗಾದಿ ಹಬ್ಬದಲ್ಲೂ ರಾಗಿಣಿ, ಸಂಜನಾಗೆ ತಪ್ಪಲಿಲ್ಲ ಕಣ್ಣೀರು! ಕಿರುತೆರೆಗೆ ಬಂದ ನಟಿಯರು

ಹೇಗಿದ್ದೆ, ಹೇಗಾದೆ; ಟಮ್ಮಿ ಫ್ಯಾಟ್​ ತೋರಿಸಿ ಸಂಜನಾ ಗಲ್ರಾನಿ ಹೇಳಿದ್ದೇನು?

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ