AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಖಿಲ್​ ನನಗೆ ಮೋಸ ಮಾಡಿದ್ದಾನೆ; ಪೊಲೀಸ್​ ಠಾಣೆ ಮೆಟ್ಟಿಲೇರಿದ ನಿಕ್ಕಿ ಗಲ್ರಾನಿ

ನಿಕ್ಕಿ ಗಲ್ರಾನಿ ಇತ್ತೀಚೆಗೆ ಪೊಲೀಸ್​ ಠಾಣೆ ಮೆಟ್ಟಿಲೇರಿ ತಮಗೆ ನ್ಯಾಯ ಕೊಡಿಸುವಂತೆ ಕೇಳಿದ್ದಾರೆ. ಪರಿಚಯದ ವ್ಯಕ್ತಿ ನಿಖಿಲ್​ ತಮಗೆ ಮೋಸ ಮಾಡಿದ್ದಾರೆ ಎಂದು ಅವರು ದೂರು ನೀಡಿದ್ದಾರೆ.

ನಿಖಿಲ್​ ನನಗೆ ಮೋಸ ಮಾಡಿದ್ದಾನೆ; ಪೊಲೀಸ್​ ಠಾಣೆ ಮೆಟ್ಟಿಲೇರಿದ ನಿಕ್ಕಿ ಗಲ್ರಾನಿ
ನಿಕ್ಕಿ ಗಲ್ರಾನಿ
ರಾಜೇಶ್ ದುಗ್ಗುಮನೆ
| Edited By: |

Updated on: Apr 17, 2021 | 4:06 PM

Share

ಸ್ಯಾಂಡಲ್​ವುಡ್​ ಡ್ರಗ್​ ಕೇಸ್​ನಲ್ಲಿ ನಟಿ ಸಂಜನಾ ಗಲ್ರಾನಿ ಸುದ್ದಿಯಾಗಿದ್ದರು. ಅವರು ಜೈಲಿಗೆ ಕೂಡ ಹೋಗಿ ಬಂದಿದ್ದರು. ಈಗ ಅವರ ಸಹೋದರಿ ನಿಕ್ಕಿ ಗಲ್ರಾನಿ ಸುದ್ದಿಯಾಗಿದ್ದಾರೆ. ಹಣ ಪಡೆದು ಅದನ್ನು ಹಿಂದಿರುಗಿಸದೇ ಮೋಸ ಮಾಡಿರುವುದಾಗಿ ನಿಖಿಲ್​ ಹೆಗ್ಡೆ ವಿರುದ್ಧ ಅವರು ಕೋರ್ಟ್​ ಮೆಟ್ಟಿಲೇರಿದ್ದಾರೆ. ನಿಕ್ಕಿ ಗಲ್ರಾನಿ ಇತ್ತೀಚೆಗೆ ಪೊಲೀಸ್​ ಠಾಣೆ ಮೆಟ್ಟಿಲೇರಿ ತಮಗೆ ನ್ಯಾಯ ಕೊಡಿಸುವಂತೆ ಕೇಳಿದ್ದಾರೆ. ಪರಿಚಯದ ವ್ಯಕ್ತಿ ನಿಖಿಲ್​ ತಮಗೆ ಮೋಸ ಮಾಡಿದ್ದಾರೆ ಎಂದು ಅವರು ದೂರು ನೀಡಿದ್ದಾರೆ. ಅದು 2016ರ ಸಮಯ. ನಿಖಿಲ್​ ಕೆಫೆ ಒಂದನ್ನು ತೆರೆಯಲು ಮುಂದಾಗಿದ್ದರು. ಇದಕ್ಕೆ ದೊಡ್ಡ ಮೊತ್ತದ ಹಣ ಬೇಕಿತ್ತು. ಹೀಗಾಗಿ, ನಿಕ್ಕಿ ಬಳಿ ನಿಖಿಲ್​ ಹಣ ಕೇಳಿದ್ದರು. ಅಂತೆಯೇ, ನಿಕ್ಕಿ ಬರೋಬ್ಬರಿ 50 ಲಕ್ಷ ರೂಪಾಯಿ ಹಣವನ್ನು ನಿಖಿಲ್​ಗೆ ವರ್ಗಾಯಿಸಿದ್ದರು. ಹಣ ವರ್ಗಾವಣೆ ವೇಳೆ ಒಪ್ಪಂದ ಕೂಡ ಆಗಿತ್ತು.

ಈ ಒಪ್ಪಂದದ ಪ್ರಕಾರ ನಿಖಿಲ್​ ಪ್ರತಿ ತಿಂಗಳು 1 ಲಕ್ಷ ರೂಪಾಯಿ ಹಣವನ್ನು ನಿಕ್ಕಿಗೆ ನೀಡಬೇಕು. ಇದಕ್ಕೆ ನಿಖಿಲ್​ ಒಪ್ಪಿದ್ದರು. ಆದರೆ, ಈವರೆಗೆ ಒಂದು ರೂಪಾಯಿ ಹಣವನ್ನು ಕೂಡ ಅವರು ನಿಕ್ಕಿಗೆ ಹಿಂದಿರುಗಿಸಿಲ್ಲ. ಇನ್ನು, ನಿಕ್ಕಿ ಕರೆ ಮಾಡಿದರೂ ಕೂಡ ನಿಖಿಲ್​ ಕಾಲ್​ ಸ್ವೀಕರಿಸುತ್ತಿಲ್ಲವಂತೆ. ಪೊಲೀಸರು ಕೇಸ್​ ದಾಖಲಿಸಿಕೊಂಡಿದ್ದು, ನೋಟಿಸ್​ ನೀಡಿದ್ದಾರೆ.

ನಿಕ್ಕಿ ಗಲ್ರಾನಿ 2014ರಲ್ಲಿ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟಿದ್ದರು. ಕನ್ನಡ ತಮಿಳು, ಮಲಯಾಳಂ ಸೇರಿ 30ಕ್ಕೂ ಅಧಿಕ ಸಿನಿಮಾಗಳಲ್ಲಿ ನಿಕ್ಕಿ ನಟಿಸಿದ್ದಾರೆ. ತೆಲುಗು ಇಂಡಸ್ಟ್ರಿಯಲ್ಲಿ ನಿಕ್ಕಿ ಹೆಚ್ಚು ಪರಿಚಿತರಾಗಿದ್ದಾರೆ.

ಸ್ಯಾಂಡಲ್​ವುಡ್​ನಲ್ಲಿ ಸಂಜನಾ ಗಲ್ರಾನಿ ಹೆಸರು ಮಾಡಿದ್ದಾರೆ. ಆದರೆ, ಅವರು ಡ್ರಗ್​ ಕೇಸ್​ನಲ್ಲಿ ಜೈಲಿಗೆ ಹೋಗಿ ಬಂದಿದ್ದಾರೆ. ಇದು ಅವರ ಸಿನಿಮಾ ಕೆರಿಯರ್​ಗೆ ದೊಡ್ಡ ಹೊಡೆತ ನೀಡಿತ್ತು.

ಇದನ್ನೂ ಓದಿ: ಯುಗಾದಿ ಹಬ್ಬದಲ್ಲೂ ರಾಗಿಣಿ, ಸಂಜನಾಗೆ ತಪ್ಪಲಿಲ್ಲ ಕಣ್ಣೀರು! ಕಿರುತೆರೆಗೆ ಬಂದ ನಟಿಯರು

ಹೇಗಿದ್ದೆ, ಹೇಗಾದೆ; ಟಮ್ಮಿ ಫ್ಯಾಟ್​ ತೋರಿಸಿ ಸಂಜನಾ ಗಲ್ರಾನಿ ಹೇಳಿದ್ದೇನು?

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ