Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಖಿಲ್​ ನನಗೆ ಮೋಸ ಮಾಡಿದ್ದಾನೆ; ಪೊಲೀಸ್​ ಠಾಣೆ ಮೆಟ್ಟಿಲೇರಿದ ನಿಕ್ಕಿ ಗಲ್ರಾನಿ

ನಿಕ್ಕಿ ಗಲ್ರಾನಿ ಇತ್ತೀಚೆಗೆ ಪೊಲೀಸ್​ ಠಾಣೆ ಮೆಟ್ಟಿಲೇರಿ ತಮಗೆ ನ್ಯಾಯ ಕೊಡಿಸುವಂತೆ ಕೇಳಿದ್ದಾರೆ. ಪರಿಚಯದ ವ್ಯಕ್ತಿ ನಿಖಿಲ್​ ತಮಗೆ ಮೋಸ ಮಾಡಿದ್ದಾರೆ ಎಂದು ಅವರು ದೂರು ನೀಡಿದ್ದಾರೆ.

ನಿಖಿಲ್​ ನನಗೆ ಮೋಸ ಮಾಡಿದ್ದಾನೆ; ಪೊಲೀಸ್​ ಠಾಣೆ ಮೆಟ್ಟಿಲೇರಿದ ನಿಕ್ಕಿ ಗಲ್ರಾನಿ
ನಿಕ್ಕಿ ಗಲ್ರಾನಿ
Follow us
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​

Updated on: Apr 17, 2021 | 4:06 PM

ಸ್ಯಾಂಡಲ್​ವುಡ್​ ಡ್ರಗ್​ ಕೇಸ್​ನಲ್ಲಿ ನಟಿ ಸಂಜನಾ ಗಲ್ರಾನಿ ಸುದ್ದಿಯಾಗಿದ್ದರು. ಅವರು ಜೈಲಿಗೆ ಕೂಡ ಹೋಗಿ ಬಂದಿದ್ದರು. ಈಗ ಅವರ ಸಹೋದರಿ ನಿಕ್ಕಿ ಗಲ್ರಾನಿ ಸುದ್ದಿಯಾಗಿದ್ದಾರೆ. ಹಣ ಪಡೆದು ಅದನ್ನು ಹಿಂದಿರುಗಿಸದೇ ಮೋಸ ಮಾಡಿರುವುದಾಗಿ ನಿಖಿಲ್​ ಹೆಗ್ಡೆ ವಿರುದ್ಧ ಅವರು ಕೋರ್ಟ್​ ಮೆಟ್ಟಿಲೇರಿದ್ದಾರೆ. ನಿಕ್ಕಿ ಗಲ್ರಾನಿ ಇತ್ತೀಚೆಗೆ ಪೊಲೀಸ್​ ಠಾಣೆ ಮೆಟ್ಟಿಲೇರಿ ತಮಗೆ ನ್ಯಾಯ ಕೊಡಿಸುವಂತೆ ಕೇಳಿದ್ದಾರೆ. ಪರಿಚಯದ ವ್ಯಕ್ತಿ ನಿಖಿಲ್​ ತಮಗೆ ಮೋಸ ಮಾಡಿದ್ದಾರೆ ಎಂದು ಅವರು ದೂರು ನೀಡಿದ್ದಾರೆ. ಅದು 2016ರ ಸಮಯ. ನಿಖಿಲ್​ ಕೆಫೆ ಒಂದನ್ನು ತೆರೆಯಲು ಮುಂದಾಗಿದ್ದರು. ಇದಕ್ಕೆ ದೊಡ್ಡ ಮೊತ್ತದ ಹಣ ಬೇಕಿತ್ತು. ಹೀಗಾಗಿ, ನಿಕ್ಕಿ ಬಳಿ ನಿಖಿಲ್​ ಹಣ ಕೇಳಿದ್ದರು. ಅಂತೆಯೇ, ನಿಕ್ಕಿ ಬರೋಬ್ಬರಿ 50 ಲಕ್ಷ ರೂಪಾಯಿ ಹಣವನ್ನು ನಿಖಿಲ್​ಗೆ ವರ್ಗಾಯಿಸಿದ್ದರು. ಹಣ ವರ್ಗಾವಣೆ ವೇಳೆ ಒಪ್ಪಂದ ಕೂಡ ಆಗಿತ್ತು.

ಈ ಒಪ್ಪಂದದ ಪ್ರಕಾರ ನಿಖಿಲ್​ ಪ್ರತಿ ತಿಂಗಳು 1 ಲಕ್ಷ ರೂಪಾಯಿ ಹಣವನ್ನು ನಿಕ್ಕಿಗೆ ನೀಡಬೇಕು. ಇದಕ್ಕೆ ನಿಖಿಲ್​ ಒಪ್ಪಿದ್ದರು. ಆದರೆ, ಈವರೆಗೆ ಒಂದು ರೂಪಾಯಿ ಹಣವನ್ನು ಕೂಡ ಅವರು ನಿಕ್ಕಿಗೆ ಹಿಂದಿರುಗಿಸಿಲ್ಲ. ಇನ್ನು, ನಿಕ್ಕಿ ಕರೆ ಮಾಡಿದರೂ ಕೂಡ ನಿಖಿಲ್​ ಕಾಲ್​ ಸ್ವೀಕರಿಸುತ್ತಿಲ್ಲವಂತೆ. ಪೊಲೀಸರು ಕೇಸ್​ ದಾಖಲಿಸಿಕೊಂಡಿದ್ದು, ನೋಟಿಸ್​ ನೀಡಿದ್ದಾರೆ.

ನಿಕ್ಕಿ ಗಲ್ರಾನಿ 2014ರಲ್ಲಿ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟಿದ್ದರು. ಕನ್ನಡ ತಮಿಳು, ಮಲಯಾಳಂ ಸೇರಿ 30ಕ್ಕೂ ಅಧಿಕ ಸಿನಿಮಾಗಳಲ್ಲಿ ನಿಕ್ಕಿ ನಟಿಸಿದ್ದಾರೆ. ತೆಲುಗು ಇಂಡಸ್ಟ್ರಿಯಲ್ಲಿ ನಿಕ್ಕಿ ಹೆಚ್ಚು ಪರಿಚಿತರಾಗಿದ್ದಾರೆ.

ಸ್ಯಾಂಡಲ್​ವುಡ್​ನಲ್ಲಿ ಸಂಜನಾ ಗಲ್ರಾನಿ ಹೆಸರು ಮಾಡಿದ್ದಾರೆ. ಆದರೆ, ಅವರು ಡ್ರಗ್​ ಕೇಸ್​ನಲ್ಲಿ ಜೈಲಿಗೆ ಹೋಗಿ ಬಂದಿದ್ದಾರೆ. ಇದು ಅವರ ಸಿನಿಮಾ ಕೆರಿಯರ್​ಗೆ ದೊಡ್ಡ ಹೊಡೆತ ನೀಡಿತ್ತು.

ಇದನ್ನೂ ಓದಿ: ಯುಗಾದಿ ಹಬ್ಬದಲ್ಲೂ ರಾಗಿಣಿ, ಸಂಜನಾಗೆ ತಪ್ಪಲಿಲ್ಲ ಕಣ್ಣೀರು! ಕಿರುತೆರೆಗೆ ಬಂದ ನಟಿಯರು

ಹೇಗಿದ್ದೆ, ಹೇಗಾದೆ; ಟಮ್ಮಿ ಫ್ಯಾಟ್​ ತೋರಿಸಿ ಸಂಜನಾ ಗಲ್ರಾನಿ ಹೇಳಿದ್ದೇನು?

ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್