AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಖಿಲ್​ ನನಗೆ ಮೋಸ ಮಾಡಿದ್ದಾನೆ; ಪೊಲೀಸ್​ ಠಾಣೆ ಮೆಟ್ಟಿಲೇರಿದ ನಿಕ್ಕಿ ಗಲ್ರಾನಿ

ನಿಕ್ಕಿ ಗಲ್ರಾನಿ ಇತ್ತೀಚೆಗೆ ಪೊಲೀಸ್​ ಠಾಣೆ ಮೆಟ್ಟಿಲೇರಿ ತಮಗೆ ನ್ಯಾಯ ಕೊಡಿಸುವಂತೆ ಕೇಳಿದ್ದಾರೆ. ಪರಿಚಯದ ವ್ಯಕ್ತಿ ನಿಖಿಲ್​ ತಮಗೆ ಮೋಸ ಮಾಡಿದ್ದಾರೆ ಎಂದು ಅವರು ದೂರು ನೀಡಿದ್ದಾರೆ.

ನಿಖಿಲ್​ ನನಗೆ ಮೋಸ ಮಾಡಿದ್ದಾನೆ; ಪೊಲೀಸ್​ ಠಾಣೆ ಮೆಟ್ಟಿಲೇರಿದ ನಿಕ್ಕಿ ಗಲ್ರಾನಿ
ನಿಕ್ಕಿ ಗಲ್ರಾನಿ
ರಾಜೇಶ್ ದುಗ್ಗುಮನೆ
| Edited By: |

Updated on: Apr 17, 2021 | 4:06 PM

Share

ಸ್ಯಾಂಡಲ್​ವುಡ್​ ಡ್ರಗ್​ ಕೇಸ್​ನಲ್ಲಿ ನಟಿ ಸಂಜನಾ ಗಲ್ರಾನಿ ಸುದ್ದಿಯಾಗಿದ್ದರು. ಅವರು ಜೈಲಿಗೆ ಕೂಡ ಹೋಗಿ ಬಂದಿದ್ದರು. ಈಗ ಅವರ ಸಹೋದರಿ ನಿಕ್ಕಿ ಗಲ್ರಾನಿ ಸುದ್ದಿಯಾಗಿದ್ದಾರೆ. ಹಣ ಪಡೆದು ಅದನ್ನು ಹಿಂದಿರುಗಿಸದೇ ಮೋಸ ಮಾಡಿರುವುದಾಗಿ ನಿಖಿಲ್​ ಹೆಗ್ಡೆ ವಿರುದ್ಧ ಅವರು ಕೋರ್ಟ್​ ಮೆಟ್ಟಿಲೇರಿದ್ದಾರೆ. ನಿಕ್ಕಿ ಗಲ್ರಾನಿ ಇತ್ತೀಚೆಗೆ ಪೊಲೀಸ್​ ಠಾಣೆ ಮೆಟ್ಟಿಲೇರಿ ತಮಗೆ ನ್ಯಾಯ ಕೊಡಿಸುವಂತೆ ಕೇಳಿದ್ದಾರೆ. ಪರಿಚಯದ ವ್ಯಕ್ತಿ ನಿಖಿಲ್​ ತಮಗೆ ಮೋಸ ಮಾಡಿದ್ದಾರೆ ಎಂದು ಅವರು ದೂರು ನೀಡಿದ್ದಾರೆ. ಅದು 2016ರ ಸಮಯ. ನಿಖಿಲ್​ ಕೆಫೆ ಒಂದನ್ನು ತೆರೆಯಲು ಮುಂದಾಗಿದ್ದರು. ಇದಕ್ಕೆ ದೊಡ್ಡ ಮೊತ್ತದ ಹಣ ಬೇಕಿತ್ತು. ಹೀಗಾಗಿ, ನಿಕ್ಕಿ ಬಳಿ ನಿಖಿಲ್​ ಹಣ ಕೇಳಿದ್ದರು. ಅಂತೆಯೇ, ನಿಕ್ಕಿ ಬರೋಬ್ಬರಿ 50 ಲಕ್ಷ ರೂಪಾಯಿ ಹಣವನ್ನು ನಿಖಿಲ್​ಗೆ ವರ್ಗಾಯಿಸಿದ್ದರು. ಹಣ ವರ್ಗಾವಣೆ ವೇಳೆ ಒಪ್ಪಂದ ಕೂಡ ಆಗಿತ್ತು.

ಈ ಒಪ್ಪಂದದ ಪ್ರಕಾರ ನಿಖಿಲ್​ ಪ್ರತಿ ತಿಂಗಳು 1 ಲಕ್ಷ ರೂಪಾಯಿ ಹಣವನ್ನು ನಿಕ್ಕಿಗೆ ನೀಡಬೇಕು. ಇದಕ್ಕೆ ನಿಖಿಲ್​ ಒಪ್ಪಿದ್ದರು. ಆದರೆ, ಈವರೆಗೆ ಒಂದು ರೂಪಾಯಿ ಹಣವನ್ನು ಕೂಡ ಅವರು ನಿಕ್ಕಿಗೆ ಹಿಂದಿರುಗಿಸಿಲ್ಲ. ಇನ್ನು, ನಿಕ್ಕಿ ಕರೆ ಮಾಡಿದರೂ ಕೂಡ ನಿಖಿಲ್​ ಕಾಲ್​ ಸ್ವೀಕರಿಸುತ್ತಿಲ್ಲವಂತೆ. ಪೊಲೀಸರು ಕೇಸ್​ ದಾಖಲಿಸಿಕೊಂಡಿದ್ದು, ನೋಟಿಸ್​ ನೀಡಿದ್ದಾರೆ.

ನಿಕ್ಕಿ ಗಲ್ರಾನಿ 2014ರಲ್ಲಿ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟಿದ್ದರು. ಕನ್ನಡ ತಮಿಳು, ಮಲಯಾಳಂ ಸೇರಿ 30ಕ್ಕೂ ಅಧಿಕ ಸಿನಿಮಾಗಳಲ್ಲಿ ನಿಕ್ಕಿ ನಟಿಸಿದ್ದಾರೆ. ತೆಲುಗು ಇಂಡಸ್ಟ್ರಿಯಲ್ಲಿ ನಿಕ್ಕಿ ಹೆಚ್ಚು ಪರಿಚಿತರಾಗಿದ್ದಾರೆ.

ಸ್ಯಾಂಡಲ್​ವುಡ್​ನಲ್ಲಿ ಸಂಜನಾ ಗಲ್ರಾನಿ ಹೆಸರು ಮಾಡಿದ್ದಾರೆ. ಆದರೆ, ಅವರು ಡ್ರಗ್​ ಕೇಸ್​ನಲ್ಲಿ ಜೈಲಿಗೆ ಹೋಗಿ ಬಂದಿದ್ದಾರೆ. ಇದು ಅವರ ಸಿನಿಮಾ ಕೆರಿಯರ್​ಗೆ ದೊಡ್ಡ ಹೊಡೆತ ನೀಡಿತ್ತು.

ಇದನ್ನೂ ಓದಿ: ಯುಗಾದಿ ಹಬ್ಬದಲ್ಲೂ ರಾಗಿಣಿ, ಸಂಜನಾಗೆ ತಪ್ಪಲಿಲ್ಲ ಕಣ್ಣೀರು! ಕಿರುತೆರೆಗೆ ಬಂದ ನಟಿಯರು

ಹೇಗಿದ್ದೆ, ಹೇಗಾದೆ; ಟಮ್ಮಿ ಫ್ಯಾಟ್​ ತೋರಿಸಿ ಸಂಜನಾ ಗಲ್ರಾನಿ ಹೇಳಿದ್ದೇನು?

Follow Us
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು