AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮೆಲ್ಲರ ಆರ್ಶೀರ್ವಾದ’ ಶೀಘ್ರದಲ್ಲಿಯೇ ಹೊಸಬರ ಸಿನಿಮಾ ಆಗಲಿದೆ ಬಿಡುಗಡೆ

New Comers: ಚಿತ್ರರಂಗದಲ್ಲಿ ಹೊಸಬರ ಸಿನಿಮಾಗಳು ಗಮನ ಸೆಳೆಯುವಾಗ ನಿಮ್ಮೆಲ್ಲರ ಆಶೀರ್ವಾದ ಹೆಸರಿನ ಹೊಸಬರ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ.

'ನಿಮ್ಮೆಲ್ಲರ ಆರ್ಶೀರ್ವಾದ' ಶೀಘ್ರದಲ್ಲಿಯೇ ಹೊಸಬರ ಸಿನಿಮಾ ಆಗಲಿದೆ ಬಿಡುಗಡೆ
ನಿಮ್ಮೆಲ್ಲರ ಆಶೀರ್ವಾದ
ಮಂಜುನಾಥ ಸಿ.
|

Updated on: Jul 02, 2023 | 10:37 PM

Share

ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ (Sandalwood) ಹೊಸಬರ ಅಬ್ಬರ ಜೋರಾಗಿದೆ. ಹಲವು ಹೊಸಬರು ಗುಣಮಟ್ಟದ, ಕಂಟೆಂಟ್ ವುಳ್ಳ ಸಿನಿಮಾ ಮೂಲಕ ಚಿತ್ರರಂಗಕ್ಕೆ ಬರುತ್ತಿದ್ದಾರೆ. ದೊಡ್ಡ ಗೆಲುವು ಸಾಧಿಸದಿದ್ದರೂ ಪ್ರಶಂಸೆಯನ್ನು ಪಡೆದು ಪ್ರೇಕ್ಷಕರ ಆದರಣೆಗೆ ಪಾತ್ರರಾಗುತ್ತಿದ್ದಾರೆ. ಹೊಸ ಅವಕಾಶಗಳನ್ನು ಗಿಟ್ಟಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಕಂಬ್ಳಿ ಹುಳ (Kambli Hula), ಡೇರ್​ಡೆವಿಲ್ ಮುಸ್ತಫಾ (Daredevil Mustafa) ಇನ್ನೂ ಕೆಲವು ಹೊಸಬರ ಸಿನಿಮಾಗಳು ಗಮನ ಸೆಳೆದಿವೆ. ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿರುವ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಸಹ ಗಮನ ಸೆಳೆದಿದೆ. ಈ ನಡುವೆ ಮತ್ತೊಂದು ಹೊಸಬರ ಸಿನಿಮಾ ಬಿಡುಗಡೆಗೆ ತಯಾರಾಗಿದೆ.

ವರುಣ್ ಸಿನಿ ಕ್ರಿಯೇಷನ್ಸ್ ಚೊಚ್ಚಲ ಹೆಜ್ಜೆ ನಿಮ್ಮೆಲ್ಲರ ಆರ್ಶೀರ್ವಾದ ಸಿನಿಮಾ ಪೋಸ್ಟ್ ಪ್ರೊಡಕ್ಷನ್ಸ್ ಕೆಲಸ ಮುಗಿಸಿ ಬಿಡುಗಡೆಗೆ ಹಂತಕ್ಕೆ ಬಂದಿದೆ. ಯುವ ಸಿನಿ ಸಿನಿಮೋತ್ಸಾಹಿಗಳೇ ಸೇರಿಕೊಂಡು ತಯಾರಿಸಿರುವ ಈ ಚಿತ್ರಕ್ಕೆ ವರುಣ್ ಹೆಗ್ಡೆ ಹಣ ಹಾಕಿದ್ದು, ಇದು ಇವರ ಮೊದಲ ಪ್ರಯತ್ನವಾಗಿದೆ. ಚಿತ್ರರಂಗದ ಮೇಲಿನ ಅಪಾರ ಅಭಿಮಾನ ಹಾಗೂ ಆಸಕ್ತಿಯಿಂದಾಗಿ ವರುಣ್ ಹೆಗ್ಡೆ ಸಿನಿಮಾ ನಿರ್ಮಾಣಕ್ಕಿಳಿದಿದ್ದಾರೆ. ಈ ಚಿತ್ರದ ಹೊಸ ಪೋಸ್ಟರ್ ರಿಲೀಸ್ ಆಗಿದ್ದು,‌ ನೋಡುಗರ ಗಮನಸೆಳೆಯುತ್ತಿದೆ.

ಇದನ್ನೂ ಓದಿ:Rakshit Shetty: ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರಕ್ಕೆ ರಕ್ಷಿತ್ ಶೆಟ್ಟಿ ಬೆಂಬಲ; ‘ಪರಂವಃ’ ಮೂಲಕ ರಿಲೀಸ್

ಕೌಟುಂಬಿಕ ಕಥಾಹಂದರದ ನಿಮ್ಮೆಲ್ಲರ ಆಶೀರ್ವಾದ ಸಿನಿಮಾದಲ್ಲಿ ಪೊಲೀಸ್‌ ಅಧಿಕಾರಿಯೊಬ್ಬರ ವೃತ್ತಿ ಬದುಕು ಮತ್ತು ವೈಯಕ್ತಿಕ ಬದುಕಿನ ದಿನಚರಿಯನ್ನು ವಿಭಿನ್ನವಾಗಿ ಕಟ್ಟಿಕೊಡಲಾಗಿದೆ. ಈ ಚಿತ್ರದ ಮೂಲಕ ಪ್ರತೀಕ್‌ ಶೆಟ್ಟಿ ನಾಯಕನಾಗಿ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡಿದ್ದು, ಭಿನ್ನ ಸಿನಿಮಾ ಖ್ಯಾತಿಯ ಪಾಯಲ್‌ ರಾಧಾಕೃಷ್ಣ ನಾಯಕಿಯಾಗಿ ನಟಿಸಿದ್ದಾರೆ. ಎಂ. ಎನ್‌.ಲಕ್ಷ್ಮೀದೇವಿ, ಅರವಿಂದ ಬೋಳಾರ್‌, ಗೋವಿಂದೇಗೌಡ, ಸ್ವಾತಿ ಗುರುದತ್‌, ದಿನೇಶ್‌ ಮಂಗಳೂರು ಸೇರಿದಂತೆ ಹಿರಿಯ ಹಾಗೂ ಅನುಭವಿ ಕಲಾದಂಡು ಚಿತ್ರದಲ್ಲಿದೆ.

ಯುವ ನಿರ್ದೇಶಕ ರವಿಕಿರಣ್‌ ಆಕ್ಷನ್ ಕಟ್ ಹೇಳಿದ್ದು, ಸರವಣನ್‌ ಜಿ.ಎನ್‌.ಛಾಯಾಗ್ರಹಣ, ರಘು ನಿಡುವಳ್ಳಿ ಡೈಲಾಗ್, ರೂಪೇಂದ್ರ ಆಚಾರ್‌ ಕಲಾ ನಿರ್ದೇಶನ, ಸುನಾದ್‌ ಗೌತಮ್‌ ಸಂಗೀತ ಮತ್ತು ವಿವೇಕ್‌ ಚಕ್ರವರ್ತಿ ಹಿನ್ನೆಲೆ ಸಂಗೀತ, ಸುರೇಶ್‌ ಆರುಮುಗಂ ಸಂಕಲನ ಸಿನಿಮಾದ ಶ್ರೀಮಂತಿಕೆ ಹೆಚ್ಚಿಸಿದೆ. ಕರಾವಳಿಯ ವಿವಿಧ ಭಾಗಗಳಲ್ಲಿ ಸಿನಿಮಾವನ್ನು ಚಿತ್ರೀಕರಿಸಲಾಗಿದೆ. ಈಗಾಗಲೇ ಒಂದಷ್ಟು ಪೋಸ್ಟರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ನಿಮ್ಮೆಲ್ಲರ ಆಶೀರ್ವಾದ ಚಿತ್ರ ಇದೇ ತಿಂಗಳು ರಾಜ್ಯಾದ್ಯಂತ ತೆರೆಗಪ್ಪಳಿಸಲಿದೆ. ಅದಕ್ಕೂ ಮುನ್ನ ಚಿತ್ರತಂಡ ಇದೇ ವಾರ ಆಡಿಯೋ ಬಿಡುಗಡೆಗೆ ತಯಾರಿ ನಡೆಸಿದೆ. ಈಗ ಬಿಡುಗಡೆ ಆಗಿರುವ ಪೋಸ್ಟರ್ ಗಮನಿಸಿದರೆ ಕರಾವಳಿ ಭಾಗದ ಒಂದು ಹಳ್ಳಿಯ ಒಂದು ಪೊಲೀಸ್ ಠಾಣೆಯಲ್ಲಿ ನಡೆಯುವ ಕತೆಯನ್ನು ಸಿನಿಮಾ ಒಳಗೊಂಡಿದೆ ಎಂಬುದಾಗಿ ಊಹಿಸಬಹುದಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್