AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂತೋಷ್ ಚಿತ್ರಮಂದಿರದಲ್ಲಿ ತಾಂತ್ರಿಕ ಸಮಸ್ಯೆ, ಶೋ ಸ್ಥಗಿತ; ಬಿಡುಗಡೆಯ ಸಂಭ್ರಮದಲ್ಲಿದ್ದ ‘ನಿನ್ನ ಸನಿಹಕೆ’ ಚಿತ್ರತಂಡಕ್ಕೆ ನಿರಾಸೆ

Ninna Sanihake: ಬಿಡುಗಡೆಯ ಸಂದರ್ಭದಲ್ಲಿದ್ದ ‘ನಿನ್ನ ಸನಿಹಕೆ’ ಚಿತ್ರ ತಂಡಕ್ಕೆ ನಿರಾಸೆ ಎದುರಾಗಿದೆ. ಪ್ರಮುಖ ಚಿತ್ರಮಂದಿರವಾದ ‘ಸಂತೋಷ್’ನಲ್ಲಿ ತಾಂತ್ರಿಕ ದೋಷದಿಂದ ಪ್ರದರ್ಶನ ಸ್ಥಗಿತಗೊಂಡಿದೆ. ಈ ಕುರಿತ ಮಾಹಿತಿ ಇಲ್ಲಿದೆ.

ಸಂತೋಷ್ ಚಿತ್ರಮಂದಿರದಲ್ಲಿ ತಾಂತ್ರಿಕ ಸಮಸ್ಯೆ, ಶೋ ಸ್ಥಗಿತ; ಬಿಡುಗಡೆಯ ಸಂಭ್ರಮದಲ್ಲಿದ್ದ ‘ನಿನ್ನ ಸನಿಹಕೆ’ ಚಿತ್ರತಂಡಕ್ಕೆ ನಿರಾಸೆ
ಸಂತೋಷ್ ಚಿತ್ರಮಂದಿರ
shivaprasad.hs
|

Updated on:Oct 08, 2021 | 11:39 AM

Share

ಇಂದು (ಅಕ್ಟೋಬರ್ 8) ಸೂರಜ್ ಗೌಡ ಹಾಗೂ ಧನ್ಯಾ ರಾಮ್​ಕುಮಾರ್ ಅಭಿನಯದ ‘ನಿನ್ನ ಸನಿಹಕೆ’ ಚಿತ್ರದ ಬಿಡುಗಡೆ. ಚಿತ್ರತಂಡ ಇದರ ಸಂತಸದಲ್ಲಿರುವಾಗಲೇ ನಿರಾಸೆ ಎದುರಾಗಿದೆ. ಕಾರಣ, ಮುಖ್ಯ ಚಿತ್ರಮಂದಿರವಾದ ಸಂತೋಷ್ ಚಿತ್ರಮಂದಿರದಲ್ಲಿ ತಾಂತ್ರಿಕ ದೋಷದಿಂದ ಪ್ರದರ್ಶನ ಸ್ಥಗಿತವಾಗಿದೆ. ಇದರಿಂದಾಗಿ ಚಿತ್ರಮಂದಿರಕ್ಕೆ ಅಲಂಕರಿಸಿ, ಪ್ರೇಕ್ಷಕರನ್ನು ಸ್ವಾಗತಿಸಲು ತಯಾರಾಗಿದ್ದ ಚಿತ್ರತಂಡ ಹಾಗೂ ಚಿತ್ರದ ಕುರಿತು ನಿರೀಕ್ಷೆಯಿಂದ ಆಗಮಿಸಿದ್ದ ಪ್ರೇಕ್ಷಕರಿಗೆ ನಿರಾಸೆ ಎದುರಾಗಿದೆ.

ಸಂತೋಷ್ ಚಿತ್ರಮಂದಿರದಲ್ಲಿ ಪ್ರದರ್ಶನ ಸ್ಥಗಿತಗೊಂಡಿದ್ದರಿಂದಾಗಿ ಪ್ರೇಕ್ಷಕರು ಮಧ್ಯಾಹ್ನದ ಶೋಗೆ ‘ನವರಂಗ್ ಚಿತ್ರಮಂದಿರ’ದತ್ತ ತೆರಳುತ್ತಿದ್ದಾರೆ. ಚಿತ್ರಮಂದಿರದ ಅಡಚಣೆಯಿಂದ ಚಿತ್ರತಂಡ ಬೇಸರಗೊಂಡಿದೆ. ಮೂರು ದಿನದಿಂದ ಸಮಸ್ಯೆ ಇದ್ದರೂ ಕೂಡ ಥಿಯೇಟರ್ ಮಾಲಿಕರಿಂದ ಚಿತ್ರತಂಡಕ್ಕೆ ಯಾವುದೇ ಮಾಹಿತಿ ನೀಡಿಲ್ಲ. ಚಿತ್ರತಂಡ ಅಲಂಕಾರ ಮಾಡಿಕೊಂಡು ಪ್ರೇಕ್ಷಕರು ಕಿಕ್ಕಿರಿದು ನೆರದಾಗಾಲೂ ಯಾವುದೇ ಮಾಹಿತಿ ನೀಡದಿರುವುದು ಚಿತ್ರತಂಡದ ಬೇಸರಕ್ಕೆ ಕಾರಣವಾಗಿದೆ.

ತಾಂತ್ರಿಕ ಸಮಸ್ಯೆಗೆ ಕಾರಣವೇನು? ಕಳೆದ ಮೂರುದಿನಗಳಿಂದ ಸಂತೋಷ್ ಚಿತ್ರಮಂದಿರದಲ್ಲಿ ಕರೆಂಟ್ ಇಲ್ಲ. ಟ್ರಾನ್ಸ್ ಫಾರ್ಮರ್ ಸಮಸ್ಯೆ ಜೊತೆಗೆ ಜನರೇಟರ್ ಕೂಡ ವರ್ಕ್ ಆಗುತ್ತಿಲ್ಲ. ಆದರೂ ಕೂಡ ಸಿನಿಮಾ ರಿಲೀಸ್​ಗೆ ಚಿತ್ರಮಂದಿರದವರು ಕಮಿಟ್ ಆಗಿದ್ದರು. ಆದರೆ ತಾಂತ್ರಿಕ ದೋಷ ಸರಿಯಾಗದ ಹಿನ್ನೆಲೆಯಲ್ಲಿ ಚಿತ್ರ ನೋಡಲು ಬಂದ ಪ್ರೇಕ್ಷಕರನ್ನು ಚಿತ್ರತಂಡ ವಾಪಸ್ ಕಳುಹಿಸುತ್ತಿದೆ.

 ಹಾಡು ಹಾಗೂ ಟ್ರೈಲರ್​ನಿಂದ ಗಮನ ಸೆಳೆದಿರುವ ‘ನಿನ್ನ ಸನಿಹಕೆ’ ಚಿತ್ರ:

ಇಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿರುವ ‘ನಿನ್ನ ಸನಿಹಕೆ’ ಚಿತ್ರದಲ್ಲಿ ಡಾ.ರಾಜ್​ಕುಮಾರ್ ಮೊಮ್ಮಗಳು ಧನ್ಯಾ ರಾಮ್​ಕುಮಾರ್ ನಾಯಕಿಯಾಗಿ ಕಾಣಿಸಿಕೊಂಡಿದ್ಧಾರೆ. ಸೂರಜ್ ಗೌಡ ನಾಯಕನೊಂದಿಗೆ ನಿರ್ದೇಶನದ ಜವಾಬ್ದಾರಿಯನ್ನು ಹೊತ್ತಿದ್ದಾರೆ. ರಘು ದೀಕ್ಷಿತ್ ಸಂಗೀತ ನೀಡಿದ್ಧಾರೆ.

ಇದನ್ನೂ ಓದಿ:

ನಿನ್ನ ಸನಿಹಕೆ: ಸೂರಜ್​ ಜತೆ ಲಿವ್​ ಇನ್ ರಿಲೇಷನ್​ಶಿಪ್​ ಕಥೆ ಹೇಳ್ತಾರೆ ಡಾ. ರಾಜ್​ ಮೊಮ್ಮಗಳು ಧನ್ಯಾ

Janhvi Kapoor: ಅಮ್ಮನ ಕೈ ಬರಹವನ್ನು ಹಚ್ಚೆ ಹಾಕಿಸಿಕೊಂಡ ಜಾಹ್ನವಿ ಕಪೂರ್; ಖ್ಯಾತ ನಟಿ ಶ್ರೀದೇವಿ ಬರಹದಲ್ಲಿ ಏನಿತ್ತು?

Published On - 11:33 am, Fri, 8 October 21

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!