AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೋಲ್ಡ್​ ಸೀನ್​ ಇರೋದಲ್ಲ, ತುರುಕೋದು; ಸಿನಿಮಾ ಸೆಲ್​ ಆಗೋಕೆ ಈ ರೀತಿ ಮಾಡ್ತಾರೆ ಎಂದ ‘ನಿನ್ನಿಂದಲೇ’ ಚಿತ್ರದ ನಟಿ

‘555’ ಸಿನಿಮಾ ಮೂಲಕ ಬಣ್ಣದ ಬದುಕು ಆರಂಭಿಸಿದರು ಎರಿಕಾ. 2014ರಲ್ಲಿ ತೆರೆಗೆ ಬಂದ ‘ನಿನ್ನಿಂದಲೇ’ ಸಿನಿಮಾದಲ್ಲಿ ಪುನೀತ್​ ​ರಾಜ್​ಕುಮಾರ್​ಗೆ ಜತೆಯಾಗಿ ಎರಿಕಾ ನಟಿಸಿದ್ದರು.

ಬೋಲ್ಡ್​ ಸೀನ್​ ಇರೋದಲ್ಲ, ತುರುಕೋದು; ಸಿನಿಮಾ ಸೆಲ್​ ಆಗೋಕೆ ಈ ರೀತಿ ಮಾಡ್ತಾರೆ ಎಂದ ‘ನಿನ್ನಿಂದಲೇ’ ಚಿತ್ರದ ನಟಿ
ಎರಿಕಾ
ರಾಜೇಶ್ ದುಗ್ಗುಮನೆ
|

Updated on: May 29, 2021 | 7:07 PM

Share

 ಸಿನಿಮಾದಲ್ಲಿ ಬರುವ ಬೋಲ್ಡ್​ ದೃಶ್ಯಗಳನ್ನು ಮಾಡೋಕೆ ಕೆಲ ನಟಿಯರು ಮುಜುಗರಪಟ್ಟುಕೊಳ್ಳುವುದೇ ಇಲ್ಲ. ಆದರೆ, ಕೆಲವರು ಈ ಬಗ್ಗೆ ಅಸಮಾಧಾನ ಹೊರ ಹಾಕುತ್ತಾರೆ. ನಾವು ಆ ರೀತಿಯ ದೃಶ್ಯಗಳಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ಕಡ್ಡಿಮುರಿದಂತೆ ಹೇಳಿಬಿಡುತ್ತಾರೆ. ಈಗ ಪುನೀತ್​ ನಟನೆಯ ‘ನಿನ್ನಿಂದಲೇ’ ಸಿನಿಮಾ ನಟಿ ಎರಿಕಾ ಫರ್ನಾಂಡಿಸ್​ ಬೋಲ್ಡ್​ ದೃಶ್ಯಗಳ ಬಗ್ಗೆ ಮಾತನಾಡಿದ್ದಾರೆ.

ನನಗೆ ಬೋಲ್ಡ್​ ದೃಶ್ಯಗಳನ್ನು ಮಾಡೋಕೆ ಇಷ್ಟವಿಲ್ಲ. ನಾನು ಆ ಬಗ್ಗೆ ಮುಕ್ತವಾಗಿಯೇ ಹೇಳಿದ್ದೇನೆ. ಈ ರೀತಿಯ ಕೆಲ ಶೋಗಳಲ್ಲಿ ಪಾಲ್ಗೊಳ್ಳೋಕೆ ಅವಕಾಶ ಬಂದಿತ್ತು. ಆದರೆ, ನಾನು ಅದಕ್ಕೆ ನೋ ಎಂದಿದ್ದೇನೆ. ಜನರು ಶೋ ನೋಡಬೇಕು ಎನ್ನುವ ಕಾರಣಕ್ಕೆ ಈ ರೀತಿಯ ಬೋಲ್ಡ್​ ಕಂಟೆಂಟ್​ಗಳನ್ನು ತುರುಕುತ್ತಾರೆ ಎಂದೆನಿಸುತ್ತದೆ ಎಂದಿದ್ದಾರೆ ಎರಿಕಾ.

ನಾನು ಏನೇ ಮಾಡುತ್ತೀನಿ ಎಂದರೂ ಅದಕ್ಕೊಂದು ಲಾಜಿಕ್​ ಬೇಕು. ಈ ರೀತಿಯ ವಿಚಾರಗಳು ಶೋನಲ್ಲಿ ಬೇಕು ಎಂದು ಹೇಳಿದಾಗ ಅದಕ್ಕೆ ಕಾರಣ ಕೇಳುತ್ತೇನೆ. ಅದಕ್ಕೆ ಅವರಿಂದ ಸರಿಯಾದ ಉತ್ತರ ಸಿಕ್ಕರೆ ನಾನು ಅದನ್ನು ಮಾಡುತ್ತೇನೆ. ಆದರೆ, ಜನರು ನೋಡುತ್ತಾರೆ ಎನ್ನುವ ಕಾರಣಕ್ಕೆ ಬೋಲ್ಡ್​ ಕಂಟೆಂಟ್​​ಗಳನ್ನು ಮಾಡಲಾಗುತ್ತಿದೆ ಎಂದಿದ್ದಾರೆ.

‘555’ ಸಿನಿಮಾ ಮೂಲಕ ಬಣ್ಣದ ಬದುಕು ಆರಂಭಿಸಿದರು ಎರಿಕಾ. 2014ರಲ್ಲಿ ತೆರೆಗೆ ಬಂದ ‘ನಿನ್ನಿಂದಲೇ’ ಸಿನಿಮಾದಲ್ಲಿ ಪುನೀತ್​ ​ರಾಜ್​ಕುಮಾರ್​ಗೆ ಜತೆಯಾಗಿ ಎರಿಕಾ ನಟಿಸಿದ್ದರು. ವಿಜಯ್​ ಕಿರಗಂದೂರು ನಿರ್ಮಾಣದ ಈ ಸಿನಿಮಾ ಪ್ಲಾಫ್​ ಆಗಿತ್ತು. ‘ಬುಗುರಿ’ ಚಿತ್ರದಲ್ಲಿಯೂ ಎರಿಕಾ ನಟಿಸಿದ್ದರು. 2017ರ ಬಳಿಕ ಅವರು ಚಿತ್ರರಂಗದಲ್ಲಿ ಕಾಣಿಸಿಕೊಂಡಿಲ್ಲ. ಸದ್ಯ ಅವರು ಧಾರಾವಾಹಿಗಳಲ್ಲಿ ನಟಿಸುತ್ತಿದ್ದಾರೆ.

ಎರಿಕಾ ಅಲ್ಲದೆ, ಸಾಕಷ್ಟು ನಟಿಯರು ಇದೇ ರೀತಿಯ ಆರೋಪ ಮಾಡಿದ್ದಿದೆ. ಅನೇಕ ನಿರ್ದೇಶಕರು ಸೊಂಟ ಬಳುಕಿಸೋಕೆ ಮಾತ್ರ ಹೀರೋಯಿನ್​ಗಳನ್ನು ಬಳಕೆ ಮಾಡಿಕೊಳ್ಳುತ್ತಾರೆ ಎಂದು ಆರೋಪಿಸಿದ ಉದಾಹರಣೆ ಕೂಡ ಇದೆ.

ಇದನ್ನೂ ಓದಿ: ‘ಬುಲ್​ಬುಲ್’​ ಸಿನಿಮಾ ನಟಿ ಜತೆ ಅನುಷ್ಕಾ ಶರ್ಮಾ ಸಹೋದರನ ಡೇಟಿಂಗ್

ಮತ್ತೊಂದು ಸಿಡಿ ಪ್ರಕರಣ; ನಟಿ ಜತೆ ಮಾಜಿ ಸಚಿವನ ಲಿವ್​​ ಇನ್​ ರಿಲೇಶನ್​ಶಿಪ್, ಠಾಣೆ ಮೆಟ್ಟಿಲೇರಿದ ಕೇಸ್​

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?