AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೋಲ್ಡ್​ ಸೀನ್​ ಇರೋದಲ್ಲ, ತುರುಕೋದು; ಸಿನಿಮಾ ಸೆಲ್​ ಆಗೋಕೆ ಈ ರೀತಿ ಮಾಡ್ತಾರೆ ಎಂದ ‘ನಿನ್ನಿಂದಲೇ’ ಚಿತ್ರದ ನಟಿ

‘555’ ಸಿನಿಮಾ ಮೂಲಕ ಬಣ್ಣದ ಬದುಕು ಆರಂಭಿಸಿದರು ಎರಿಕಾ. 2014ರಲ್ಲಿ ತೆರೆಗೆ ಬಂದ ‘ನಿನ್ನಿಂದಲೇ’ ಸಿನಿಮಾದಲ್ಲಿ ಪುನೀತ್​ ​ರಾಜ್​ಕುಮಾರ್​ಗೆ ಜತೆಯಾಗಿ ಎರಿಕಾ ನಟಿಸಿದ್ದರು.

ಬೋಲ್ಡ್​ ಸೀನ್​ ಇರೋದಲ್ಲ, ತುರುಕೋದು; ಸಿನಿಮಾ ಸೆಲ್​ ಆಗೋಕೆ ಈ ರೀತಿ ಮಾಡ್ತಾರೆ ಎಂದ ‘ನಿನ್ನಿಂದಲೇ’ ಚಿತ್ರದ ನಟಿ
ಎರಿಕಾ
ರಾಜೇಶ್ ದುಗ್ಗುಮನೆ
|

Updated on: May 29, 2021 | 7:07 PM

Share

 ಸಿನಿಮಾದಲ್ಲಿ ಬರುವ ಬೋಲ್ಡ್​ ದೃಶ್ಯಗಳನ್ನು ಮಾಡೋಕೆ ಕೆಲ ನಟಿಯರು ಮುಜುಗರಪಟ್ಟುಕೊಳ್ಳುವುದೇ ಇಲ್ಲ. ಆದರೆ, ಕೆಲವರು ಈ ಬಗ್ಗೆ ಅಸಮಾಧಾನ ಹೊರ ಹಾಕುತ್ತಾರೆ. ನಾವು ಆ ರೀತಿಯ ದೃಶ್ಯಗಳಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ಕಡ್ಡಿಮುರಿದಂತೆ ಹೇಳಿಬಿಡುತ್ತಾರೆ. ಈಗ ಪುನೀತ್​ ನಟನೆಯ ‘ನಿನ್ನಿಂದಲೇ’ ಸಿನಿಮಾ ನಟಿ ಎರಿಕಾ ಫರ್ನಾಂಡಿಸ್​ ಬೋಲ್ಡ್​ ದೃಶ್ಯಗಳ ಬಗ್ಗೆ ಮಾತನಾಡಿದ್ದಾರೆ.

ನನಗೆ ಬೋಲ್ಡ್​ ದೃಶ್ಯಗಳನ್ನು ಮಾಡೋಕೆ ಇಷ್ಟವಿಲ್ಲ. ನಾನು ಆ ಬಗ್ಗೆ ಮುಕ್ತವಾಗಿಯೇ ಹೇಳಿದ್ದೇನೆ. ಈ ರೀತಿಯ ಕೆಲ ಶೋಗಳಲ್ಲಿ ಪಾಲ್ಗೊಳ್ಳೋಕೆ ಅವಕಾಶ ಬಂದಿತ್ತು. ಆದರೆ, ನಾನು ಅದಕ್ಕೆ ನೋ ಎಂದಿದ್ದೇನೆ. ಜನರು ಶೋ ನೋಡಬೇಕು ಎನ್ನುವ ಕಾರಣಕ್ಕೆ ಈ ರೀತಿಯ ಬೋಲ್ಡ್​ ಕಂಟೆಂಟ್​ಗಳನ್ನು ತುರುಕುತ್ತಾರೆ ಎಂದೆನಿಸುತ್ತದೆ ಎಂದಿದ್ದಾರೆ ಎರಿಕಾ.

ನಾನು ಏನೇ ಮಾಡುತ್ತೀನಿ ಎಂದರೂ ಅದಕ್ಕೊಂದು ಲಾಜಿಕ್​ ಬೇಕು. ಈ ರೀತಿಯ ವಿಚಾರಗಳು ಶೋನಲ್ಲಿ ಬೇಕು ಎಂದು ಹೇಳಿದಾಗ ಅದಕ್ಕೆ ಕಾರಣ ಕೇಳುತ್ತೇನೆ. ಅದಕ್ಕೆ ಅವರಿಂದ ಸರಿಯಾದ ಉತ್ತರ ಸಿಕ್ಕರೆ ನಾನು ಅದನ್ನು ಮಾಡುತ್ತೇನೆ. ಆದರೆ, ಜನರು ನೋಡುತ್ತಾರೆ ಎನ್ನುವ ಕಾರಣಕ್ಕೆ ಬೋಲ್ಡ್​ ಕಂಟೆಂಟ್​​ಗಳನ್ನು ಮಾಡಲಾಗುತ್ತಿದೆ ಎಂದಿದ್ದಾರೆ.

‘555’ ಸಿನಿಮಾ ಮೂಲಕ ಬಣ್ಣದ ಬದುಕು ಆರಂಭಿಸಿದರು ಎರಿಕಾ. 2014ರಲ್ಲಿ ತೆರೆಗೆ ಬಂದ ‘ನಿನ್ನಿಂದಲೇ’ ಸಿನಿಮಾದಲ್ಲಿ ಪುನೀತ್​ ​ರಾಜ್​ಕುಮಾರ್​ಗೆ ಜತೆಯಾಗಿ ಎರಿಕಾ ನಟಿಸಿದ್ದರು. ವಿಜಯ್​ ಕಿರಗಂದೂರು ನಿರ್ಮಾಣದ ಈ ಸಿನಿಮಾ ಪ್ಲಾಫ್​ ಆಗಿತ್ತು. ‘ಬುಗುರಿ’ ಚಿತ್ರದಲ್ಲಿಯೂ ಎರಿಕಾ ನಟಿಸಿದ್ದರು. 2017ರ ಬಳಿಕ ಅವರು ಚಿತ್ರರಂಗದಲ್ಲಿ ಕಾಣಿಸಿಕೊಂಡಿಲ್ಲ. ಸದ್ಯ ಅವರು ಧಾರಾವಾಹಿಗಳಲ್ಲಿ ನಟಿಸುತ್ತಿದ್ದಾರೆ.

ಎರಿಕಾ ಅಲ್ಲದೆ, ಸಾಕಷ್ಟು ನಟಿಯರು ಇದೇ ರೀತಿಯ ಆರೋಪ ಮಾಡಿದ್ದಿದೆ. ಅನೇಕ ನಿರ್ದೇಶಕರು ಸೊಂಟ ಬಳುಕಿಸೋಕೆ ಮಾತ್ರ ಹೀರೋಯಿನ್​ಗಳನ್ನು ಬಳಕೆ ಮಾಡಿಕೊಳ್ಳುತ್ತಾರೆ ಎಂದು ಆರೋಪಿಸಿದ ಉದಾಹರಣೆ ಕೂಡ ಇದೆ.

ಇದನ್ನೂ ಓದಿ: ‘ಬುಲ್​ಬುಲ್’​ ಸಿನಿಮಾ ನಟಿ ಜತೆ ಅನುಷ್ಕಾ ಶರ್ಮಾ ಸಹೋದರನ ಡೇಟಿಂಗ್

ಮತ್ತೊಂದು ಸಿಡಿ ಪ್ರಕರಣ; ನಟಿ ಜತೆ ಮಾಜಿ ಸಚಿವನ ಲಿವ್​​ ಇನ್​ ರಿಲೇಶನ್​ಶಿಪ್, ಠಾಣೆ ಮೆಟ್ಟಿಲೇರಿದ ಕೇಸ್​

Follow Us
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ