AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೋಲ್ಡ್​ ಸೀನ್​ ಇರೋದಲ್ಲ, ತುರುಕೋದು; ಸಿನಿಮಾ ಸೆಲ್​ ಆಗೋಕೆ ಈ ರೀತಿ ಮಾಡ್ತಾರೆ ಎಂದ ‘ನಿನ್ನಿಂದಲೇ’ ಚಿತ್ರದ ನಟಿ

‘555’ ಸಿನಿಮಾ ಮೂಲಕ ಬಣ್ಣದ ಬದುಕು ಆರಂಭಿಸಿದರು ಎರಿಕಾ. 2014ರಲ್ಲಿ ತೆರೆಗೆ ಬಂದ ‘ನಿನ್ನಿಂದಲೇ’ ಸಿನಿಮಾದಲ್ಲಿ ಪುನೀತ್​ ​ರಾಜ್​ಕುಮಾರ್​ಗೆ ಜತೆಯಾಗಿ ಎರಿಕಾ ನಟಿಸಿದ್ದರು.

ಬೋಲ್ಡ್​ ಸೀನ್​ ಇರೋದಲ್ಲ, ತುರುಕೋದು; ಸಿನಿಮಾ ಸೆಲ್​ ಆಗೋಕೆ ಈ ರೀತಿ ಮಾಡ್ತಾರೆ ಎಂದ ‘ನಿನ್ನಿಂದಲೇ’ ಚಿತ್ರದ ನಟಿ
ಎರಿಕಾ
ರಾಜೇಶ್ ದುಗ್ಗುಮನೆ
|

Updated on: May 29, 2021 | 7:07 PM

Share

 ಸಿನಿಮಾದಲ್ಲಿ ಬರುವ ಬೋಲ್ಡ್​ ದೃಶ್ಯಗಳನ್ನು ಮಾಡೋಕೆ ಕೆಲ ನಟಿಯರು ಮುಜುಗರಪಟ್ಟುಕೊಳ್ಳುವುದೇ ಇಲ್ಲ. ಆದರೆ, ಕೆಲವರು ಈ ಬಗ್ಗೆ ಅಸಮಾಧಾನ ಹೊರ ಹಾಕುತ್ತಾರೆ. ನಾವು ಆ ರೀತಿಯ ದೃಶ್ಯಗಳಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ಕಡ್ಡಿಮುರಿದಂತೆ ಹೇಳಿಬಿಡುತ್ತಾರೆ. ಈಗ ಪುನೀತ್​ ನಟನೆಯ ‘ನಿನ್ನಿಂದಲೇ’ ಸಿನಿಮಾ ನಟಿ ಎರಿಕಾ ಫರ್ನಾಂಡಿಸ್​ ಬೋಲ್ಡ್​ ದೃಶ್ಯಗಳ ಬಗ್ಗೆ ಮಾತನಾಡಿದ್ದಾರೆ.

ನನಗೆ ಬೋಲ್ಡ್​ ದೃಶ್ಯಗಳನ್ನು ಮಾಡೋಕೆ ಇಷ್ಟವಿಲ್ಲ. ನಾನು ಆ ಬಗ್ಗೆ ಮುಕ್ತವಾಗಿಯೇ ಹೇಳಿದ್ದೇನೆ. ಈ ರೀತಿಯ ಕೆಲ ಶೋಗಳಲ್ಲಿ ಪಾಲ್ಗೊಳ್ಳೋಕೆ ಅವಕಾಶ ಬಂದಿತ್ತು. ಆದರೆ, ನಾನು ಅದಕ್ಕೆ ನೋ ಎಂದಿದ್ದೇನೆ. ಜನರು ಶೋ ನೋಡಬೇಕು ಎನ್ನುವ ಕಾರಣಕ್ಕೆ ಈ ರೀತಿಯ ಬೋಲ್ಡ್​ ಕಂಟೆಂಟ್​ಗಳನ್ನು ತುರುಕುತ್ತಾರೆ ಎಂದೆನಿಸುತ್ತದೆ ಎಂದಿದ್ದಾರೆ ಎರಿಕಾ.

ನಾನು ಏನೇ ಮಾಡುತ್ತೀನಿ ಎಂದರೂ ಅದಕ್ಕೊಂದು ಲಾಜಿಕ್​ ಬೇಕು. ಈ ರೀತಿಯ ವಿಚಾರಗಳು ಶೋನಲ್ಲಿ ಬೇಕು ಎಂದು ಹೇಳಿದಾಗ ಅದಕ್ಕೆ ಕಾರಣ ಕೇಳುತ್ತೇನೆ. ಅದಕ್ಕೆ ಅವರಿಂದ ಸರಿಯಾದ ಉತ್ತರ ಸಿಕ್ಕರೆ ನಾನು ಅದನ್ನು ಮಾಡುತ್ತೇನೆ. ಆದರೆ, ಜನರು ನೋಡುತ್ತಾರೆ ಎನ್ನುವ ಕಾರಣಕ್ಕೆ ಬೋಲ್ಡ್​ ಕಂಟೆಂಟ್​​ಗಳನ್ನು ಮಾಡಲಾಗುತ್ತಿದೆ ಎಂದಿದ್ದಾರೆ.

‘555’ ಸಿನಿಮಾ ಮೂಲಕ ಬಣ್ಣದ ಬದುಕು ಆರಂಭಿಸಿದರು ಎರಿಕಾ. 2014ರಲ್ಲಿ ತೆರೆಗೆ ಬಂದ ‘ನಿನ್ನಿಂದಲೇ’ ಸಿನಿಮಾದಲ್ಲಿ ಪುನೀತ್​ ​ರಾಜ್​ಕುಮಾರ್​ಗೆ ಜತೆಯಾಗಿ ಎರಿಕಾ ನಟಿಸಿದ್ದರು. ವಿಜಯ್​ ಕಿರಗಂದೂರು ನಿರ್ಮಾಣದ ಈ ಸಿನಿಮಾ ಪ್ಲಾಫ್​ ಆಗಿತ್ತು. ‘ಬುಗುರಿ’ ಚಿತ್ರದಲ್ಲಿಯೂ ಎರಿಕಾ ನಟಿಸಿದ್ದರು. 2017ರ ಬಳಿಕ ಅವರು ಚಿತ್ರರಂಗದಲ್ಲಿ ಕಾಣಿಸಿಕೊಂಡಿಲ್ಲ. ಸದ್ಯ ಅವರು ಧಾರಾವಾಹಿಗಳಲ್ಲಿ ನಟಿಸುತ್ತಿದ್ದಾರೆ.

ಎರಿಕಾ ಅಲ್ಲದೆ, ಸಾಕಷ್ಟು ನಟಿಯರು ಇದೇ ರೀತಿಯ ಆರೋಪ ಮಾಡಿದ್ದಿದೆ. ಅನೇಕ ನಿರ್ದೇಶಕರು ಸೊಂಟ ಬಳುಕಿಸೋಕೆ ಮಾತ್ರ ಹೀರೋಯಿನ್​ಗಳನ್ನು ಬಳಕೆ ಮಾಡಿಕೊಳ್ಳುತ್ತಾರೆ ಎಂದು ಆರೋಪಿಸಿದ ಉದಾಹರಣೆ ಕೂಡ ಇದೆ.

ಇದನ್ನೂ ಓದಿ: ‘ಬುಲ್​ಬುಲ್’​ ಸಿನಿಮಾ ನಟಿ ಜತೆ ಅನುಷ್ಕಾ ಶರ್ಮಾ ಸಹೋದರನ ಡೇಟಿಂಗ್

ಮತ್ತೊಂದು ಸಿಡಿ ಪ್ರಕರಣ; ನಟಿ ಜತೆ ಮಾಜಿ ಸಚಿವನ ಲಿವ್​​ ಇನ್​ ರಿಲೇಶನ್​ಶಿಪ್, ಠಾಣೆ ಮೆಟ್ಟಿಲೇರಿದ ಕೇಸ್​

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​