AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆ.2ಕ್ಕೆ ಬರ್ತಾನೆ ‘ಸಪ್ಲೆಯರ್ ಶಂಕರ’; ಟೀಸರ್​ ಮೂಲಕ ಕೌತುಕ ಮೂಡಿಸಿದ ನಿಶ್ಚಿತ್ ಕರೋಡಿ

ಚಿತ್ರದ ಶೀರ್ಷಿಕೆಯೇ ಹೇಳುವಂತೆ ಒಬ್ಬ ಬಾರ್ ಸಪ್ಲೆಯರ್ ಹುಡುಗನ ಸುತ್ತ ನಡೆಯುವ ಕಥೆಯನ್ನು ಇಟ್ಟುಕೊಂಡು ಮಾಡಿರುವ ಸಿನಿಮಾ ಇದು. ನಿಶ್ಚಿತ್ ಕರೋಡಿ ಅವರು ಸಪ್ಲೆಯರ್ ಶಂಕರನಾಗಿ ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ದೀಪಿಕಾ ಆರಾಧ್ಯ ನಾಯಕಿ ಆಗಿದ್ದಾರೆ. ಫೆ.2ಕ್ಕೆ ಈ ಸಿನಿಮಾ ಬಿಡುಗಡೆ ಆಗಲಿದೆ.

ಫೆ.2ಕ್ಕೆ ಬರ್ತಾನೆ ‘ಸಪ್ಲೆಯರ್ ಶಂಕರ’; ಟೀಸರ್​ ಮೂಲಕ ಕೌತುಕ ಮೂಡಿಸಿದ ನಿಶ್ಚಿತ್ ಕರೋಡಿ
ನಿಶ್ಚಿತ್​ ಕರೋಡಿ
Follow us
ಮದನ್​ ಕುಮಾರ್​
|

Updated on: Jan 03, 2024 | 6:53 PM

2024ರಲ್ಲಿ ಬಿಡುಗಡೆ ಆಗಲು ಅನೇಕ ಸಿನಿಮಾಗಳು ಸಿದ್ಧವಾಗಿವೆ. ಈ ವರ್ಷ ಕನ್ನಡ ಚಿತ್ರರಂಗದ ಪಾಲಿಗೆ ಲಾಭ ಆಗಲಿದೆ ಎಂಬ ನಂಬಿಕೆಯೊಂದಿಗೆ ಹಲವು ಚಿತ್ರತಂಡಗಳು ಸಕ್ರಿಯವಾಗಿವೆ. ರಿಲೀಸ್​ ಡೇಟ್​ ಅನೌನ್ಸ್​ ಮಾಡುವ ಮೂಲಕ ತಮ್ಮ ಆಗಮನವನ್ನು ಖಚಿತಪಡಿಸಲಾಗುತ್ತಿದೆ. ಆ ಸಾಲಿನಲ್ಲಿ ನಿಶ್ಚಿತ್ ಕರೋಡಿ (Nischith Korodi) ಅಭಿನಯದ ‘ಸಪ್ಲೆಯರ್​ ಶಂಕರ’ ಸಿನಿಮಾ ಕೂಡ ಇದೆ. ಟೀಸರ್​ ಮೂಲಕ ಭಾರಿ ಕೌತುಕ ಮೂಡಿಸಿರುವ ಈ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದೆ. ಮರ್ಡರ್ ಮಿಸ್ಟರಿ ಕಥಾಹಂದರ ಹೊಂದಿರುವ ‘ಸಪ್ಲೆಯರ್​ ಶಂಕರ’ (Supplier Shankara) ಚಿತ್ರ ಫೆಬ್ರವರಿ 2ರಂದು ತೆರೆಕಾಣಲಿದೆ.

ಹಲವು ಕಾರಣಗಳಿಂದ ‘ಸಪ್ಲೆಯರ್​ ಶಂಕರ’ ಸಿನಿಮಾ ನಿರೀಕ್ಷೆ ಮೂಡಿಸಿದೆ. ಈ ಸಿನಿಮಾದ ಟೀಸರ್ ತುಂಬ ರಗಡ್​ ಆಗಿ ಮೂಡಿಬಂದಿದೆ. ‘ತ್ರಿನೇತ್ರ ಫಿಲ್ಮ್ಸ್​’ ಸಂಸ್ಥೆಯ ಮೂಲಕ ಎಂ. ಚಂದ್ರಶೇಖರ್ ಮತ್ತು ಎಂ. ನಾಗೇಂದ್ರ ಸಿಂಗ್ ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ರಂಜಿತ್​ ಸಿಂಗ್ ರಜಪೂತ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಅವರೇ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ.

ಇದನ್ನೂ ಓದಿ: ‘ಕ್ಯಾಪ್ಟನ್ ಮಿಲ್ಲರ್’ ಹಾಡು ಬಿಡುಗಡೆ: ಈರಪ್ಪನ ನೆನೆಯುತ ಧನುಶ್ ಜೊತೆ ಶಿವಣ್ಣನ ಕುಣಿತ

ಈ ಹಿಂದೆ ‘ಗಂಟು ಮೂಟೆ’, ‘ಟಾಮ್ ಆ್ಯಂಡ್​ ಜರ್ರಿ’ ಸಿನಿಮಾಗಳಲ್ಲಿ ಅಭಿನಯಿಸಿದ್ದ ನಟ ನಿಶ್ಚಿತ್ ಕರೋಡಿ ಅವರಿಗೆ ‘ಸಪ್ಲೆಯರ್​ ಶಂಕರ್​’ ಒಂದು ಡಿಫರೆಂಟ್​ ಸಿನಿಮಾ ಆಗಲಿದೆ. ‘ಆನಂದ್ ಆಡಿಯೋ’ ಮೂಲಕ ಈ ಸಿನಿಮಾದ ಹೊಸ ಟೀಸರ್ ಮತ್ತು ಪೋಸ್ಟರ್ ರಿಲೀಸ್​ ಮಾಡಿ ಬಿಡುಗಡೆ ದಿನಾಂಕದ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ. ಸತೀಶ್ ಕುಮಾರ್ ಅವರ ಛಾಯಾಗ್ರಹಣ, ಸತೀಶ್ ಚಂದ್ರಯ್ಯ ಅವರ ಸಂಕಲನ ಮತ್ತು ಬಾಲಾಜಿ ಅವರ ಕಲಾ ನಿರ್ದೇಶನ ಈ ಸಿನಿಮಾಗಿದೆ.

ಇದನ್ನೂ ಓದಿ: ‘ರಂಗಸಮುದ್ರ’ ಟ್ರೈಲರ್ ಬಿಡುಗಡೆ, ಅಪ್ಪು ನಟಿಸಬೇಕಿದ್ದ ಸಿನಿಮಾ ಇದು

ಚಿತ್ರದ ಶೀರ್ಷಿಕೆಯೇ ಹೇಳುವಂತೆ ಒಬ್ಬ ಬಾರ್ ಸಪ್ಲೆಯರ್ ಹುಡುಗನ ಸುತ್ತ ನಡೆಯುವ ಕಥೆಯನ್ನು ಇಟ್ಟುಕೊಂಡು ಮಾಡಿರುವ ಸಿನಿಮಾ ಇದು.

ನಿಶ್ಚಿತ್ ಕರೋಡಿ ಅವರು ಸಪ್ಲೆಯರ್ ಶಂಕರನಾಗಿ ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಅವರಿಗೆ ದೀಪಿಕಾ ಆರಾಧ್ಯ ಜೋಡಿ ಆಗಿದ್ದಾರೆ. ಇನ್ನುಳಿದ ಮುಖ್ಯ ಪಾತ್ರಗಳಲ್ಲಿ ಗೋಪಾಲಕೃಷ್ಣ ದೇಶಪಾಂಡೆ, ಜ್ಯೋತಿ ರೈ, ನವೀನ್ ಪಡೀಲ್ ಮುಂತಾದವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವೇಗದ ಶತಕ ಸಿಡಿಸಿ ಹೆಡ್ ದಾಖಲೆ ಮುರಿದ ಕ್ಲಾಸೆನ್
ವೇಗದ ಶತಕ ಸಿಡಿಸಿ ಹೆಡ್ ದಾಖಲೆ ಮುರಿದ ಕ್ಲಾಸೆನ್
ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್
ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ