ದರ್ಶನ್ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆ ಆಗಿದ್ದ ನಿಶಾ ಯೋಗೇಶ್ವರ್; ಮುಂದೇನಾಯ್ತು?

‘ನಮ್ಮ ಕುಟುಂಬದ ಗುಟ್ಟನ್ನು ರಟ್ಟು ಮಾಡುತ್ತೇನೆ. ನನ್ನ ತಂದೆಯಿಂದ ನಾನು ಸಾಕಷ್ಟು ಅವಮಾನ ಅನುಭವಿಸಿದ್ದೇನೆ’ ಎಂದು ನಿಶಾ ಯೋಗೇಶ್ವರ್ ಹೇಳಿದ್ದರು. ನಿಶಾ ಒಮ್ಮೆ ಚಿತ್ರರಂಗಕ್ಕೆ ಬರಲು ಪ್ರಯತ್ನಿಸಿದ್ದರು. ತಂದೆಯ ರೀತಿಯೇ ತಾವೂ ಕಲಾವಿದರಾಗಿ ಮಿಂಚಬೇಕು ಎಂದು ಕನಸು ಕಂಡಿದ್ದರು.

ದರ್ಶನ್ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆ ಆಗಿದ್ದ ನಿಶಾ ಯೋಗೇಶ್ವರ್; ಮುಂದೇನಾಯ್ತು?
ದರ್ಶನ್-ನಿಶಾ
Follow us
|

Updated on:Oct 24, 2024 | 12:07 PM

ಸಿಪಿ ಯೋಗೇಶ್ವರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಅವರಿಗೆ ಚನ್ನಪಟ್ಟಣ ವಿಧಾನಸಭೆಯ ಉಪಚುನಾವಣೆಗೆ ಕಾಂಗ್ರೆಸ್​ನಿಂದ ಟಿಕೆಟ್ ಸಿಕ್ಕಿದೆ. ಈಗ ಅವರ ವಿರುದ್ಧ ಮಗಳು ನಿಶಾ ಯೋಗೇಶ್ವರ್ ಸಿಡಿದೆದ್ದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ತಂದೆ ವಿರುದ್ಧವೇ ಪೋಸ್ಟ್ ಹಾಕಿ ಸುದ್ದಿ ಆಗಿದ್ದಾರೆ. ಇಷ್ಟೊಂದು ಸದ್ದು ಮಾಡುತ್ತಿರುವ ನಿಶಾ ಒಮ್ಮೆ ಚಿತ್ರರಂಗಕ್ಕೆ ಬರಲು ಪ್ರಯತ್ನಿಸಿದ್ದರು. ತಂದೆಯ ರೀತಿಯೇ ತಾವೂ ಕಲಾವಿದರಾಗಿ ಮಿಂಚಬೇಕು ಎಂದು ಕನಸು ಕಂಡಿದ್ದರು.

ಸಿಪಿ ಯೋಗೇಶ್ವರ್ ಅವರು ‘ಸೈನಿಕ’, ‘ಉತ್ತರ ಧ್ರುವದಿಂ ದಕ್ಷಿಣ ಧ್ರುವಕು’, ‘ಬದ್ರಿ’, ‘ಕಂಬಾಲಹಳ್ಳಿ’, ‘ಪ್ರೀತಿ ನೀ ಇಲ್ಲದೆ ನಾ ಹೇಗಿರಲಿ’ ರೀತಿಯ ಸಿನಿಮಾ ಮಾಡಿ ಗಮನ ಸೆಳೆದಿದ್ದರು. ಅವರ ಕೊನೆಯ ಸಿನಿಮಾ ‘ಅಟ್ಟಹಾಸ’. ಈ ಚಿತ್ರದಲ್ಲಿ ಅವರು ಪೊಲೀಸ್ ಪಾತ್ರ ಮಾಡಿದ್ದರು. ವೀರಪ್ಪನ್ ಜೀವನ ಆಧರಿಸಿ ಸಿನಿಮಾ ಮಾಡಲಾಗಿತ್ತು. ಯೋಗೇಶ್ವರ್ ಅವರು ಸಿನಿಮಾಗಳಲ್ಲಿ ನಟಿಸಿದ್ದನ್ನು ನೋಡಿ ನಿಶಾ ಸಾಕಷ್ಟು ಪ್ರಭಾವಕ್ಕೆ ಒಳಗಾಗಿದ್ದರು.

‘ನನ್ನ ತಂದೆ ಶೂಟ್​ಗೆ ಹೋಗೋದನ್ನು ನಾನು ಬಾಲ್ಯದಲ್ಲಿ ನೋಡುತ್ತಿದ್ದೆ. ಆದರೆ, ನಾನು ಎಂದಿಗೂ ಸಿನಿಮಾ ಸೆಟ್​ಗೆ ಹೋಗಿಲ್ಲ. ನಾನು ನಾಚಿಕೆ ಸ್ವಭಾವದವಳು’ ಎಂದಿದ್ದರು ನಿಶಾ. ನಿಶಾ ಅವರು ಕಾಲೇಜಿಗೆ ಹೋಗುವ ಸಂದರ್ಭದಲ್ಲೇ ತೆಲುಗು ಹಾಗೂ ಕನ್ನಡ ಸಿನಿಮಾಗಳಿಂದ ಆಫರ್​ಗಳು ಬಂದಿದ್ದವು. ಆದರೆ, ಅದನ್ನು ರಿಜೆಕ್ಟ್ ಮಾಡಿ ಅವರು ವಿದೇಶಕ್ಕೆ ಓದಲು ತೆರಳಿದರು.

ಓದು ಮುಗಿಸಿ ಭಾರತಕ್ಕೆ ನಿಶಾ ಮರಳಿದರು. 2013ರ ಸಮಯದಲ್ಲಿ ಚಿತ್ರರಂಗಕ್ಕೆ ಬರಬೇಕು ಎಂದು ನಿಶಾ ಪ್ರಯತ್ನಿಸಿದರು. ಆಗ ಅವರು ದರ್ಶನ್ ನಟನೆಯ ‘ಅಂಬರೀಷ’ ಚಿತ್ರಕ್ಕೆ ನಾಯಕಿ ಆಗಿ ಆಯ್ಕೆ ಆಗಿದ್ದರು. ಈ ಚಿತ್ರದ ಮುಹೂರ್ತ ಕೂಡ ನಡೆದಿತ್ತು. ಈ ವೇಳೆ ನಿಶಾ ಕಾಲಿಗೆ ಏಟಾಗಿತ್ತು. ಅವರಿಗೆ 2 ತಿಂಗಳು ವಿಶ್ರಾಂತಿ ಪಡೆಯಬೇಕಾಗಿ ಬಂತು. ಆದರೆ, ತಂಡದವರು ಎರಡು ತಿಂಗಳು ಕಾಯೋ ಸ್ಥಿತಿಯಲ್ಲಿ ಇರಲಿಲ್ಲ. ಹೀಗಾಗಿ, ಅವರು ಸಿನಿಮಾದಿಂದ ಹೊರ ಬಂದರು.

ಇದನ್ನೂ ಓದಿ: ನನ್ನ ಕುಟುಂಬದ ಗುಟ್ಟು ಬಯಲಿಗೆಳೆಯುವೆ; ಅಪ್ಪ ಸಿ.ಪಿ ಯೋಗೇಶ್ವರ್ ಕುರಿತ ಶಾಕಿಂಗ್ ವಿಷಯ ಬಿಚ್ಚಿಟ್ಟ ನಿಶಾ

ಈ ಬೆಳವಣಿಗೆ ಬಗ್ಗೆ ನಿಶಾ ಮಾತನಾಡಿದ್ದರು. ‘ನನ್ನನ್ನು ಈ ಸಿನಿಮಾದಿಂದ ಹೊರಗೆ ಇಟ್ಟಿದ್ದಕ್ಕೆ ಯಾವುದೇ ಬೇಸರ ಇಲ್ಲ’ ಎಂದಿದ್ದರು ನಿಶಾ. ನಂತರ ತೆಲುಗು ಸಿನಿಮಾ ರಂಗಕ್ಕೆ ಕಾಲಿಡಲೂ ನಿಶಾ ಪ್ರಯತ್ನಿಸಿದ್ದರು. ಅವರು ‘ಶ್ರೀರಾಮರಕ್ಷ’ ಹೆಸರಿನ ತೆಲುಗು ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರದಲ್ಲಿ ಅವರು ರಂಜಿತ್ ಮೆನನ್ ಜೊತೆ ತೆರೆ ಹಂಚಿಕೊಂಡಿದ್ದರು. ಈ ಚಿತ್ರ ಕೂಡ ರಿಲೀಸ್ ಆಗಿಲ್ಲ. ನಿಶಾಗೆ ಬಾಲಿವುಡ್​ಗೆ ಕಾಲಿಡಬೇಕು ಎಂಬ ಆಸೆಯೂ ಇತ್ತು. ಈ ಆಸೆಯೂ ಇಡೇರಲೇ ಇಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:59 am, Thu, 24 October 24

ಬೆಂಗಳೂರು ನಗರ ಉಸ್ತುವಾರಿ ಸಚಿವ ಶಿವಕುಮಾರ್ ಚನ್ನಪಟ್ಟಣದಲ್ಲಿ ಬ್ಯೂಸಿ!
ಬೆಂಗಳೂರು ನಗರ ಉಸ್ತುವಾರಿ ಸಚಿವ ಶಿವಕುಮಾರ್ ಚನ್ನಪಟ್ಟಣದಲ್ಲಿ ಬ್ಯೂಸಿ!
ಹಾಸನಾಂಬಾ ಸನ್ನಿಧಾನದಲ್ಲಿ ಭರದ ಸಿದ್ಧತೆ
ಹಾಸನಾಂಬಾ ಸನ್ನಿಧಾನದಲ್ಲಿ ಭರದ ಸಿದ್ಧತೆ
ಬಿಬಿಎಂಪಿ ಭ್ರಷ್ಟ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದರೆ ಸಮಸ್ಯೆ ಕೊನೆಗೊಳ್ಳದು
ಬಿಬಿಎಂಪಿ ಭ್ರಷ್ಟ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದರೆ ಸಮಸ್ಯೆ ಕೊನೆಗೊಳ್ಳದು
ದೇವರ ಮುಂದೆ ಕಣ್ಣೀರು ಹಾಕಿದ್ರೆ ಏನಾಗುತ್ತೆ ಗೊತ್ತಾ?
ದೇವರ ಮುಂದೆ ಕಣ್ಣೀರು ಹಾಕಿದ್ರೆ ಏನಾಗುತ್ತೆ ಗೊತ್ತಾ?
ಬದುಕು ಬದಲಿಸಿದ ‘ಕೆಜಿಎಫ್’: ಪ್ರಶಾಂತ್ ನೀಲ್​ಗೆ ಗರುಡ ರಾಮ್ ಧನ್ಯವಾದ
ಬದುಕು ಬದಲಿಸಿದ ‘ಕೆಜಿಎಫ್’: ಪ್ರಶಾಂತ್ ನೀಲ್​ಗೆ ಗರುಡ ರಾಮ್ ಧನ್ಯವಾದ
ತುಂಗಭದ್ರಾ ಪೈಪ್‌ಲೈನ್ ಒಡೆದು 50 ಎಕರೆ ಬೆಳೆ ಮುಳುಗಡೆ
ತುಂಗಭದ್ರಾ ಪೈಪ್‌ಲೈನ್ ಒಡೆದು 50 ಎಕರೆ ಬೆಳೆ ಮುಳುಗಡೆ
ಕಟ್ಟಡ ಕುಸಿತ: ಅಧಿಕಾರಿಗಳನ್ನ ತರಾಟೆಗೆ ತಗೊಂಡ್ರು ಲೋಕಾಯುಕ್ತ ನ್ಯಾಯಮೂರ್ತಿ
ಕಟ್ಟಡ ಕುಸಿತ: ಅಧಿಕಾರಿಗಳನ್ನ ತರಾಟೆಗೆ ತಗೊಂಡ್ರು ಲೋಕಾಯುಕ್ತ ನ್ಯಾಯಮೂರ್ತಿ
‘ಬಘೀರ’ದಲ್ಲಿ ಹೇಗಿದೆ ಗರುಡಾ ರಾಮ್ ಪಾತ್ರ? ಕಥೆ ಬಗ್ಗೆ ಸುಳಿವು ನೀಡಿದ ನಟ
‘ಬಘೀರ’ದಲ್ಲಿ ಹೇಗಿದೆ ಗರುಡಾ ರಾಮ್ ಪಾತ್ರ? ಕಥೆ ಬಗ್ಗೆ ಸುಳಿವು ನೀಡಿದ ನಟ
ನಾಮಪತ್ರ ಸಲ್ಲಿಕೆಗೆ ಸಿದ್ದರಾಮಯ್ಯ, ಶಿವಕುಮಾರ್ ಬರಲಿದ್ದಾರೆ: ಯೋಗೇಶ್ವರ್
ನಾಮಪತ್ರ ಸಲ್ಲಿಕೆಗೆ ಸಿದ್ದರಾಮಯ್ಯ, ಶಿವಕುಮಾರ್ ಬರಲಿದ್ದಾರೆ: ಯೋಗೇಶ್ವರ್
ಕುಮಾರಸ್ವಾಮಿ ಸೂಚಿಸುವ ಅಭ್ಯರ್ಥಿಗೆ ಎನ್​ಡಿಎ ಒಮ್ಮತದ ಬೆಂಬಲ: ವಿಜಯೇಂದ್ರ
ಕುಮಾರಸ್ವಾಮಿ ಸೂಚಿಸುವ ಅಭ್ಯರ್ಥಿಗೆ ಎನ್​ಡಿಎ ಒಮ್ಮತದ ಬೆಂಬಲ: ವಿಜಯೇಂದ್ರ