AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ವೈಯಕ್ತಿಕ ಜೀವನದಲ್ಲಿ ಭಾವನಾತ್ಮಕವಾಗಿ ಕೆಲವು ಏರುಪೇರುಗಳಾಗಿವೆ’; ನಿಶ್ವಿಕಾ ನಾಯ್ಡು

‘ಈ ವರ್ಷ ನನ್ನ ವೈಯಕ್ತಿಕ ಜೀವನದಲ್ಲಿ ಭಾವನಾತ್ಮಕವಾಗಿ ಕೆಲವು ಏರುಪೇರುಗಳು ಆಗಿವೆ. ನನ್ನ ಪ್ರೀತಿಯ ಲಿಯೋ ಇತ್ತೀಚೆಗೆ ನಮ್ಮನ್ನೆಲ್ಲ ಬಿಟ್ಟು ಹೋದ. ಈ ಆಕಸ್ಮಿಕ ಘಟನೆ ನನ್ನ ಜೀವನಕ್ಕೆ ಮತ್ತು ಮನಸಿಗೆ ತುಂಬಾ ಆಳವಾದ ನೋವನ್ನುಂಟು ಮಾಡಿದೆ’ ಎಂದಿದ್ದಾರೆ ಅವರು.

‘ನನ್ನ ವೈಯಕ್ತಿಕ ಜೀವನದಲ್ಲಿ ಭಾವನಾತ್ಮಕವಾಗಿ ಕೆಲವು ಏರುಪೇರುಗಳಾಗಿವೆ’; ನಿಶ್ವಿಕಾ ನಾಯ್ಡು
ನಿಶ್ವಿಕಾ
ರಾಜೇಶ್ ದುಗ್ಗುಮನೆ
|

Updated on: May 18, 2024 | 10:38 AM

Share

ಕುಟುಂಬದಲ್ಲಿ ಯಾವುದಾದರೂ ದುರ್ಘಟನೆ ನಡೆದಿದ್ದರೆ ಅಥವಾ ವೈಯಕ್ತಿಕವಾಗಿ ನೋವಾಗಿದ್ದರೆ ಸೆಲೆಬ್ರಿಟಿಗಳು ಬರ್ತ್​ಡೇ ಆಚರಿಸಿಕೊಳ್ಳುವುದಿಲ್ಲ. ಈಗ ನಿಶ್ವಿಕಾ ನಾಯ್ಡು (Nishvika Naidu) ಕೂಡ ಇದೇ ರೀತಿಯ ನಿರ್ಧಾರ ಮಾಡಿದ್ದಾರೆ. ಮೇ 19ರಂದು ಅವರ ಬರ್ತ್​ಡೇ. ಅವರು 28ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಆದರೆ, ಈ ಸಂದರ್ಭದಲ್ಲಿ ಬರ್ತ್​ಡೇ ಆಚರಿಸಿಕೊಳ್ಳದಿರಲು ಅವರು ನಿರ್ಧರಿಸಿದ್ದಾರೆ. ಇದಕ್ಕೆ ಅವರು ಕಾರಣ ಕೂಡ ನೀಡಿದ್ದಾರೆ.

‘ಈ ವರ್ಷ ನನ್ನ ವೈಯಕ್ತಿಕ ಜೀವನದಲ್ಲಿ ಭಾವನಾತ್ಮಕವಾಗಿ ಕೆಲವು ಏರುಪೇರುಗಳು ಆಗಿವೆ. ನನ್ನ ಪ್ರೀತಿಯ ಲಿಯೋ ಇತ್ತೀಚೆಗೆ ನಮ್ಮನ್ನೆಲ್ಲ ಬಿಟ್ಟು ಹೋದ. ಈ ಆಕಸ್ಮಿಕ ಘಟನೆ ನನ್ನ ಜೀವನಕ್ಕೆ ಮತ್ತು ಮನಸಿಗೆ ತುಂಬಾ ಆಳವಾದ ನೋವನ್ನುಂಟು ಮಾಡಿದೆ. ಅದರಿಂದ ಈ ವರ್ಷ ನನ್ನ ಜನ್ಮದಿನವನ್ನು ಆಚರಿಸದಿರಲು ನಾನು ನಿರ್ಧರಿಸಿದ್ದೇನೆ’ ಎಂದು ಬರೆದುಕೊಂಡಿದ್ದಾರೆ ಅವರು.

ಇದನ್ನೂ ಓದಿ: ಭಟ್ಟರು ಹೊಡೆದ ‘ಹಲಗಿ’ ಸೂಪರ್ ಹಿಟ್; ಲಕ್ಷ ಲಕ್ಷ ವೀಕ್ಷಣೆ ಪಡೆದ ನಿಶ್ವಿಕಾ ನಾಯ್ಡು ಡ್ಯಾನ್ಸ್ 

‘ಲಿಯೋ ನಮ್ಮ ಕುಟುಂಬದಲ್ಲಿ ಒಬ್ಬನ್ನಾಗಿದ್ದ ಮತ್ತು ಅವನ ಅನುಪಸ್ಥಿತಿಯು ನಮ್ಮ ಕುಟುಂಬದ ಮನಸ್ಸುಗಳ ಮೇಲೆ ಬಹಳ ದೊಡ್ಡ ಗಾಯ ಮಾಡಿದೆ. ದಯವಿಟ್ಟು ನನ್ನ ಭಾವನೆಗಳಿಗೆ ಬೆಲೆ ಕೊಟ್ಟು ಈ ಬಾರಿ ನನ್ನ ಹುಟ್ಟುಹಬ್ಬದ ದಿನದಂದು ಯಾರೂ ಕೂಡ ನನ್ನನ್ನು ಭೇಟಿ ಮಾಡಲು ಬರಬೇಡಿ ಅಥವಾ ಉಡುಗೊರೆಗಳನ್ನು ತರಬೇಡಿ ಎಂದು ಈ ಮೂಲಕ ಕೇಳಿಕೊಳ್ಳುತ್ತೇನೆ’ ಎಂದು ನಿಶ್ವಿಕಾ ಕೋರಿಕೊಂಡಿದ್ದಾರೆ.

View this post on Instagram

A post shared by Nishvika Naidu (@nishvika_)

‘ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ನಾನು ಎಂದಿಗೂ ಚಿರಋಣಿಯಾಗಿ ಇರುತ್ತೆನೆ. ಈ ಕಷ್ಟದ ಸಮಯದಲ್ಲಿ, ನಾನು ಒಂಟಿಯಾಗಿ ಇರಲು ಬಯಸಿದ್ದು ನನ್ನ ಈ ನಿರ್ಧಾರಕ್ಕೆ ನೀವೆಲ್ಲರು ಒಪ್ಪಿ, ನೀವು ಇರುವ ಜಾಗದಿಂದಲೇ ನನ್ನ ಹುಟ್ಟುಹಬ್ಬಕ್ಕೆ ನನ್ನನ್ನು ಹರಸಿ ಆಶಿರ್ವದಿಸಿ’ ಎಂದು ಕೋರಿದ್ದಾರೆ ನಿಶ್ವಿಕಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್