Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ವೈಯಕ್ತಿಕ ಜೀವನದಲ್ಲಿ ಭಾವನಾತ್ಮಕವಾಗಿ ಕೆಲವು ಏರುಪೇರುಗಳಾಗಿವೆ’; ನಿಶ್ವಿಕಾ ನಾಯ್ಡು

‘ಈ ವರ್ಷ ನನ್ನ ವೈಯಕ್ತಿಕ ಜೀವನದಲ್ಲಿ ಭಾವನಾತ್ಮಕವಾಗಿ ಕೆಲವು ಏರುಪೇರುಗಳು ಆಗಿವೆ. ನನ್ನ ಪ್ರೀತಿಯ ಲಿಯೋ ಇತ್ತೀಚೆಗೆ ನಮ್ಮನ್ನೆಲ್ಲ ಬಿಟ್ಟು ಹೋದ. ಈ ಆಕಸ್ಮಿಕ ಘಟನೆ ನನ್ನ ಜೀವನಕ್ಕೆ ಮತ್ತು ಮನಸಿಗೆ ತುಂಬಾ ಆಳವಾದ ನೋವನ್ನುಂಟು ಮಾಡಿದೆ’ ಎಂದಿದ್ದಾರೆ ಅವರು.

‘ನನ್ನ ವೈಯಕ್ತಿಕ ಜೀವನದಲ್ಲಿ ಭಾವನಾತ್ಮಕವಾಗಿ ಕೆಲವು ಏರುಪೇರುಗಳಾಗಿವೆ’; ನಿಶ್ವಿಕಾ ನಾಯ್ಡು
ನಿಶ್ವಿಕಾ
Follow us
ರಾಜೇಶ್ ದುಗ್ಗುಮನೆ
|

Updated on: May 18, 2024 | 10:38 AM

ಕುಟುಂಬದಲ್ಲಿ ಯಾವುದಾದರೂ ದುರ್ಘಟನೆ ನಡೆದಿದ್ದರೆ ಅಥವಾ ವೈಯಕ್ತಿಕವಾಗಿ ನೋವಾಗಿದ್ದರೆ ಸೆಲೆಬ್ರಿಟಿಗಳು ಬರ್ತ್​ಡೇ ಆಚರಿಸಿಕೊಳ್ಳುವುದಿಲ್ಲ. ಈಗ ನಿಶ್ವಿಕಾ ನಾಯ್ಡು (Nishvika Naidu) ಕೂಡ ಇದೇ ರೀತಿಯ ನಿರ್ಧಾರ ಮಾಡಿದ್ದಾರೆ. ಮೇ 19ರಂದು ಅವರ ಬರ್ತ್​ಡೇ. ಅವರು 28ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಆದರೆ, ಈ ಸಂದರ್ಭದಲ್ಲಿ ಬರ್ತ್​ಡೇ ಆಚರಿಸಿಕೊಳ್ಳದಿರಲು ಅವರು ನಿರ್ಧರಿಸಿದ್ದಾರೆ. ಇದಕ್ಕೆ ಅವರು ಕಾರಣ ಕೂಡ ನೀಡಿದ್ದಾರೆ.

‘ಈ ವರ್ಷ ನನ್ನ ವೈಯಕ್ತಿಕ ಜೀವನದಲ್ಲಿ ಭಾವನಾತ್ಮಕವಾಗಿ ಕೆಲವು ಏರುಪೇರುಗಳು ಆಗಿವೆ. ನನ್ನ ಪ್ರೀತಿಯ ಲಿಯೋ ಇತ್ತೀಚೆಗೆ ನಮ್ಮನ್ನೆಲ್ಲ ಬಿಟ್ಟು ಹೋದ. ಈ ಆಕಸ್ಮಿಕ ಘಟನೆ ನನ್ನ ಜೀವನಕ್ಕೆ ಮತ್ತು ಮನಸಿಗೆ ತುಂಬಾ ಆಳವಾದ ನೋವನ್ನುಂಟು ಮಾಡಿದೆ. ಅದರಿಂದ ಈ ವರ್ಷ ನನ್ನ ಜನ್ಮದಿನವನ್ನು ಆಚರಿಸದಿರಲು ನಾನು ನಿರ್ಧರಿಸಿದ್ದೇನೆ’ ಎಂದು ಬರೆದುಕೊಂಡಿದ್ದಾರೆ ಅವರು.

ಇದನ್ನೂ ಓದಿ: ಭಟ್ಟರು ಹೊಡೆದ ‘ಹಲಗಿ’ ಸೂಪರ್ ಹಿಟ್; ಲಕ್ಷ ಲಕ್ಷ ವೀಕ್ಷಣೆ ಪಡೆದ ನಿಶ್ವಿಕಾ ನಾಯ್ಡು ಡ್ಯಾನ್ಸ್ 

‘ಲಿಯೋ ನಮ್ಮ ಕುಟುಂಬದಲ್ಲಿ ಒಬ್ಬನ್ನಾಗಿದ್ದ ಮತ್ತು ಅವನ ಅನುಪಸ್ಥಿತಿಯು ನಮ್ಮ ಕುಟುಂಬದ ಮನಸ್ಸುಗಳ ಮೇಲೆ ಬಹಳ ದೊಡ್ಡ ಗಾಯ ಮಾಡಿದೆ. ದಯವಿಟ್ಟು ನನ್ನ ಭಾವನೆಗಳಿಗೆ ಬೆಲೆ ಕೊಟ್ಟು ಈ ಬಾರಿ ನನ್ನ ಹುಟ್ಟುಹಬ್ಬದ ದಿನದಂದು ಯಾರೂ ಕೂಡ ನನ್ನನ್ನು ಭೇಟಿ ಮಾಡಲು ಬರಬೇಡಿ ಅಥವಾ ಉಡುಗೊರೆಗಳನ್ನು ತರಬೇಡಿ ಎಂದು ಈ ಮೂಲಕ ಕೇಳಿಕೊಳ್ಳುತ್ತೇನೆ’ ಎಂದು ನಿಶ್ವಿಕಾ ಕೋರಿಕೊಂಡಿದ್ದಾರೆ.

View this post on Instagram

A post shared by Nishvika Naidu (@nishvika_)

‘ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ನಾನು ಎಂದಿಗೂ ಚಿರಋಣಿಯಾಗಿ ಇರುತ್ತೆನೆ. ಈ ಕಷ್ಟದ ಸಮಯದಲ್ಲಿ, ನಾನು ಒಂಟಿಯಾಗಿ ಇರಲು ಬಯಸಿದ್ದು ನನ್ನ ಈ ನಿರ್ಧಾರಕ್ಕೆ ನೀವೆಲ್ಲರು ಒಪ್ಪಿ, ನೀವು ಇರುವ ಜಾಗದಿಂದಲೇ ನನ್ನ ಹುಟ್ಟುಹಬ್ಬಕ್ಕೆ ನನ್ನನ್ನು ಹರಸಿ ಆಶಿರ್ವದಿಸಿ’ ಎಂದು ಕೋರಿದ್ದಾರೆ ನಿಶ್ವಿಕಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ