AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರಿದು ನಿತಿನ್ ರಾಜು? ಪ್ರಣಿತಾ ಪ್ರೇಮ ಕಥೆ ಆರಂಭವಾಗಿದ್ದು ಹೇಗೆ? ಇಲ್ಲಿದೆ ಉತ್ತರ

Pranitha Subash - Nitin Raju: ಕೆಲ ಆಂಗ್ಲ ಮಾಧ್ಯಮಗಳ ವರದಿ ಪ್ರಕಾರ, ಕೆಲವು ವರ್ಷಗಳ ಹಿಂದೆ ಮ್ಯೂಚುವಲ್​ ಫ್ರೆಂಡ್​​​​ ಮೂಲಕ ನಿತೀನ್​ ರಾಜು ಅವರ ಗೆಳೆತನ ಪ್ರಣಿತಾಗೆ ಆಗಿತ್ತು. ಆ ನಂತರ ಇಬ್ಬರ ನಡುವೆ ಒಳ್ಳೆಯ ಫ್ರೆಂಡ್​ಶಿಪ್​ ಬೆಳೆದಿದೆ.

ಯಾರಿದು ನಿತಿನ್ ರಾಜು? ಪ್ರಣಿತಾ ಪ್ರೇಮ ಕಥೆ ಆರಂಭವಾಗಿದ್ದು ಹೇಗೆ? ಇಲ್ಲಿದೆ ಉತ್ತರ
ಉದ್ಯಮಿ ನಿತಿನ್​ ರಾಜು ಜೊತೆ ಪ್ರಣಿತಾ ಸುಭಾಷ್​ ಮದುವೆ
ರಾಜೇಶ್ ದುಗ್ಗುಮನೆ
| Edited By: |

Updated on:May 31, 2021 | 8:02 PM

Share

ಕನ್ನಡದ ನಟಿ ಪ್ರಣಿತಾ ಸುಭಾಷ್​ ಮದುವೆ ವಿಚಾರ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ. ಅವರು ಮದುವೆ ಆದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ. ಪ್ರಣಿತಾ ಉದ್ಯಮಿ ನಿತಿನ್​ ರಾಜು ಅವರನ್ನು ವರಿಸಿದ್ದಾರೆ. ಅಷ್ಟಕ್ಕೂ ಯಾರು ಈ ನಿತಿನ್​ ರಾಜು? ಇವರ ಪ್ರೇಮ ಶುರುವಾಗಿದ್ದು ಹೇಗೆ ಎಂಬುದಕ್ಕೆ ಇಲ್ಲಿದೆ ಉತ್ತರ.

2010ರಲ್ಲಿ ಪೊರ್ಕಿ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪ್ರಣಿತಾ ಪದಾರ್ಪಣೆ ಮಾಡಿದರು. ಮೊದಲ ಸಿನಿಮಾದಲ್ಲಿಯೇ ಅವರಿಗೆ ದರ್ಶನ್​ ಜೊತೆ ನಟಿಸುವ ಅವಕಾಶ ಸಿಕ್ಕಿತ್ತು. ಬಳಿಕ ತಮಿಳು ಮತ್ತು ತೆಲುಗಿನಲ್ಲಿಯೂ ಅವರು ಗುರುತಿಸಿಕೊಂಡರು. ನಟನೆ ಮಾತ್ರವಲ್ಲದೇ ಅನೇಕ ಸಮಾಜಮುಖಿ ಕೆಲಸಗಳಲ್ಲೂ ಪ್ರಣಿತಾ ತೊಡಗಿಕೊಂಡಿದ್ದಾರೆ.

ಕೆಲ ಆಂಗ್ಲ ಮಾಧ್ಯಮಗಳ ವರದಿ ಪ್ರಕಾರ, ಕೆಲವು ವರ್ಷಗಳ ಹಿಂದೆ ಮ್ಯೂಚುವಲ್​ ಫ್ರೆಂಡ್​​​​ ಮೂಲಕ ನಿತೀನ್​ ರಾಜು ಅವರ ಗೆಳೆತನ ಪ್ರಣಿತಾಗೆ ಆಗಿತ್ತು. ಆ ನಂತರ ಇಬ್ಬರ ನಡುವೆ ಒಳ್ಳೆಯ ಫ್ರೆಂಡ್​ಶಿಪ್​ ಬೆಳೆದಿದೆ. ಆ ನಂತರ ಗೆಳೆತನ ಪ್ರೀತಿಯಾಗಿದೆ. ಈಗ ಇಬ್ಬರೂ ಪ್ರೀತಿಗೆ ಹೊಸ ಅರ್ಥ ನೀಡಿದ್ದಾರೆ. ಕನಕಪುರ ರಸ್ತೆಯಲ್ಲಿ ಇರುವ ರೆಸಾರ್ಟ್​ವೊಂದರಲ್ಲಿ ಪ್ರಣಿತಾ ಮದುವೆ ನಡೆದಿದೆ. ನಿತಿನ್​ ರಾಜು​ ಜತೆ ಅವರು ವೈವಾಹಿಕ ಜೀವನ ಆರಂಭಿಸಿದ್ದಾರೆ.

ಹಾಗಾದರೆ, ನಿತಿನ್​ ರಾಜು ಯಾರು? ಆ ಪ್ರಶ್ನೆಗೂ ಉತ್ತರವಿದೆ. ನಿತಿನ್​ ಅವರು ಹಾಸ್ಪಿಟಲ್​ ಮ್ಯಾನೇಜ್​ಮೆಂಟ್​ ಕೋರ್ಸ್​ ಮುಗಿಸಿದ್ದಾರಂತೆ. ಇವರು 2018ರಿಂದ ಬ್ಲ್ಯೂ ಹಾರಿಜೋನ್​ ಹೋಟೆಲ್ಸ್​ ಪ್ರೈವೇಟ್​ ಲಿಮಿಟೆಡ್​ನ ನಿರ್ದೇಶಕರಾಗಿದ್ದಾರೆ. ಇದಲ್ಲದೆ, ಕೆಲ ಕಂಪನಿಯ ನಿರ್ದೇಶಕ ಜವಾಬ್ದಾರಿ ಇವರ ಮೇಲಿದೆ. 2011ರಲ್ಲಿ ವೆಂಚರ್ ಒಂದನ್ನು ಆರಂಭಿಸಿದ್ದು, ಇದು ಉತ್ತಮ ಏಳ್ಗೆ ಕಾಣುತ್ತಿದೆ.

2010ರಲ್ಲಿ ದರ್ಶನ್ ಜೊತೆ ‘ಪೊರ್ಕಿ’ ಸಿನಿಮಾದಲ್ಲಿ ನಟಿಸುವ ಮೂಲಕ ಬಣ್ಣದ ಲೋಕಕ್ಕೆ ಪ್ರಣಿತಾ ಕಾಲಿಟ್ಟರು. ಚೊಚ್ಚಲ ಚಿತ್ರದಲ್ಲಿಯೇ ದರ್ಶನ್ಗೆ ನಾಯಕಿಯಾಗುವ ಅವಕಾಶ ಸಿಕ್ಕಿದ್ದರಿಂದ ಅವರಿಗೆ ದೊಡ್ಡಮಟ್ಟದ ಜನಪ್ರಿಯತೆ ಸಿಕ್ಕಿತ್ತು. ನಂತರ ತಮಿಳು ಮತ್ತು ತೆಲುಗಿನಲ್ಲಿಯೂ ಅವರು ಗುರುತಿಸಿಕೊಂಡರು. ಭೀಮ ತೀರದಲ್ಲಿ, ಬ್ರಹ್ಮ, ಮಾಸ್ ಲೀಡರ್ ಮುಂತಾದ ಸಿನಿಮಾಗಳಲ್ಲಿ ಸ್ಟಾರ್ ನಟರ ಜೊತೆ ತೆರೆ ಹಂಚಿಕೊಂಡರು. ನಟನೆ ಮಾತ್ರವಲ್ಲದೇ ಅನೇಕ ಸಮಾಜಮುಖಿ ಕೆಲಸಗಳಲ್ಲೂ ಪ್ರಣಿತಾ ತೊಡಗಿಕೊಂಡಿದ್ದಾರೆ. ಆ ಮೂಲಕ ಅವರು ತಮ್ಮದೇ ಆದ ಅಭಿಮಾನಿ ಬಳಗವನ್ನು ಸೃಷ್ಟಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ‘ನಮ್ಮನ್ನು ಕ್ಷಮಿಸಿ’; ಮದುವೆ ಬೆನ್ನಲ್ಲೇ ಅಭಿಮಾನಿಗಳಿಗೆ ಬಹಿರಂಗ ಪತ್ರ ಬರೆದ ಪ್ರಣಿತಾ ಮತ್ತು ನಿತಿನ್

Published On - 5:51 pm, Mon, 31 May 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್