AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರಿದು ನಿತಿನ್ ರಾಜು? ಪ್ರಣಿತಾ ಪ್ರೇಮ ಕಥೆ ಆರಂಭವಾಗಿದ್ದು ಹೇಗೆ? ಇಲ್ಲಿದೆ ಉತ್ತರ

Pranitha Subash - Nitin Raju: ಕೆಲ ಆಂಗ್ಲ ಮಾಧ್ಯಮಗಳ ವರದಿ ಪ್ರಕಾರ, ಕೆಲವು ವರ್ಷಗಳ ಹಿಂದೆ ಮ್ಯೂಚುವಲ್​ ಫ್ರೆಂಡ್​​​​ ಮೂಲಕ ನಿತೀನ್​ ರಾಜು ಅವರ ಗೆಳೆತನ ಪ್ರಣಿತಾಗೆ ಆಗಿತ್ತು. ಆ ನಂತರ ಇಬ್ಬರ ನಡುವೆ ಒಳ್ಳೆಯ ಫ್ರೆಂಡ್​ಶಿಪ್​ ಬೆಳೆದಿದೆ.

ಯಾರಿದು ನಿತಿನ್ ರಾಜು? ಪ್ರಣಿತಾ ಪ್ರೇಮ ಕಥೆ ಆರಂಭವಾಗಿದ್ದು ಹೇಗೆ? ಇಲ್ಲಿದೆ ಉತ್ತರ
ಉದ್ಯಮಿ ನಿತಿನ್​ ರಾಜು ಜೊತೆ ಪ್ರಣಿತಾ ಸುಭಾಷ್​ ಮದುವೆ
Follow us
ರಾಜೇಶ್ ದುಗ್ಗುಮನೆ
| Updated By: Digi Tech Desk

Updated on:May 31, 2021 | 8:02 PM

ಕನ್ನಡದ ನಟಿ ಪ್ರಣಿತಾ ಸುಭಾಷ್​ ಮದುವೆ ವಿಚಾರ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ. ಅವರು ಮದುವೆ ಆದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ. ಪ್ರಣಿತಾ ಉದ್ಯಮಿ ನಿತಿನ್​ ರಾಜು ಅವರನ್ನು ವರಿಸಿದ್ದಾರೆ. ಅಷ್ಟಕ್ಕೂ ಯಾರು ಈ ನಿತಿನ್​ ರಾಜು? ಇವರ ಪ್ರೇಮ ಶುರುವಾಗಿದ್ದು ಹೇಗೆ ಎಂಬುದಕ್ಕೆ ಇಲ್ಲಿದೆ ಉತ್ತರ.

2010ರಲ್ಲಿ ಪೊರ್ಕಿ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪ್ರಣಿತಾ ಪದಾರ್ಪಣೆ ಮಾಡಿದರು. ಮೊದಲ ಸಿನಿಮಾದಲ್ಲಿಯೇ ಅವರಿಗೆ ದರ್ಶನ್​ ಜೊತೆ ನಟಿಸುವ ಅವಕಾಶ ಸಿಕ್ಕಿತ್ತು. ಬಳಿಕ ತಮಿಳು ಮತ್ತು ತೆಲುಗಿನಲ್ಲಿಯೂ ಅವರು ಗುರುತಿಸಿಕೊಂಡರು. ನಟನೆ ಮಾತ್ರವಲ್ಲದೇ ಅನೇಕ ಸಮಾಜಮುಖಿ ಕೆಲಸಗಳಲ್ಲೂ ಪ್ರಣಿತಾ ತೊಡಗಿಕೊಂಡಿದ್ದಾರೆ.

ಕೆಲ ಆಂಗ್ಲ ಮಾಧ್ಯಮಗಳ ವರದಿ ಪ್ರಕಾರ, ಕೆಲವು ವರ್ಷಗಳ ಹಿಂದೆ ಮ್ಯೂಚುವಲ್​ ಫ್ರೆಂಡ್​​​​ ಮೂಲಕ ನಿತೀನ್​ ರಾಜು ಅವರ ಗೆಳೆತನ ಪ್ರಣಿತಾಗೆ ಆಗಿತ್ತು. ಆ ನಂತರ ಇಬ್ಬರ ನಡುವೆ ಒಳ್ಳೆಯ ಫ್ರೆಂಡ್​ಶಿಪ್​ ಬೆಳೆದಿದೆ. ಆ ನಂತರ ಗೆಳೆತನ ಪ್ರೀತಿಯಾಗಿದೆ. ಈಗ ಇಬ್ಬರೂ ಪ್ರೀತಿಗೆ ಹೊಸ ಅರ್ಥ ನೀಡಿದ್ದಾರೆ. ಕನಕಪುರ ರಸ್ತೆಯಲ್ಲಿ ಇರುವ ರೆಸಾರ್ಟ್​ವೊಂದರಲ್ಲಿ ಪ್ರಣಿತಾ ಮದುವೆ ನಡೆದಿದೆ. ನಿತಿನ್​ ರಾಜು​ ಜತೆ ಅವರು ವೈವಾಹಿಕ ಜೀವನ ಆರಂಭಿಸಿದ್ದಾರೆ.

ಹಾಗಾದರೆ, ನಿತಿನ್​ ರಾಜು ಯಾರು? ಆ ಪ್ರಶ್ನೆಗೂ ಉತ್ತರವಿದೆ. ನಿತಿನ್​ ಅವರು ಹಾಸ್ಪಿಟಲ್​ ಮ್ಯಾನೇಜ್​ಮೆಂಟ್​ ಕೋರ್ಸ್​ ಮುಗಿಸಿದ್ದಾರಂತೆ. ಇವರು 2018ರಿಂದ ಬ್ಲ್ಯೂ ಹಾರಿಜೋನ್​ ಹೋಟೆಲ್ಸ್​ ಪ್ರೈವೇಟ್​ ಲಿಮಿಟೆಡ್​ನ ನಿರ್ದೇಶಕರಾಗಿದ್ದಾರೆ. ಇದಲ್ಲದೆ, ಕೆಲ ಕಂಪನಿಯ ನಿರ್ದೇಶಕ ಜವಾಬ್ದಾರಿ ಇವರ ಮೇಲಿದೆ. 2011ರಲ್ಲಿ ವೆಂಚರ್ ಒಂದನ್ನು ಆರಂಭಿಸಿದ್ದು, ಇದು ಉತ್ತಮ ಏಳ್ಗೆ ಕಾಣುತ್ತಿದೆ.

2010ರಲ್ಲಿ ದರ್ಶನ್ ಜೊತೆ ‘ಪೊರ್ಕಿ’ ಸಿನಿಮಾದಲ್ಲಿ ನಟಿಸುವ ಮೂಲಕ ಬಣ್ಣದ ಲೋಕಕ್ಕೆ ಪ್ರಣಿತಾ ಕಾಲಿಟ್ಟರು. ಚೊಚ್ಚಲ ಚಿತ್ರದಲ್ಲಿಯೇ ದರ್ಶನ್ಗೆ ನಾಯಕಿಯಾಗುವ ಅವಕಾಶ ಸಿಕ್ಕಿದ್ದರಿಂದ ಅವರಿಗೆ ದೊಡ್ಡಮಟ್ಟದ ಜನಪ್ರಿಯತೆ ಸಿಕ್ಕಿತ್ತು. ನಂತರ ತಮಿಳು ಮತ್ತು ತೆಲುಗಿನಲ್ಲಿಯೂ ಅವರು ಗುರುತಿಸಿಕೊಂಡರು. ಭೀಮ ತೀರದಲ್ಲಿ, ಬ್ರಹ್ಮ, ಮಾಸ್ ಲೀಡರ್ ಮುಂತಾದ ಸಿನಿಮಾಗಳಲ್ಲಿ ಸ್ಟಾರ್ ನಟರ ಜೊತೆ ತೆರೆ ಹಂಚಿಕೊಂಡರು. ನಟನೆ ಮಾತ್ರವಲ್ಲದೇ ಅನೇಕ ಸಮಾಜಮುಖಿ ಕೆಲಸಗಳಲ್ಲೂ ಪ್ರಣಿತಾ ತೊಡಗಿಕೊಂಡಿದ್ದಾರೆ. ಆ ಮೂಲಕ ಅವರು ತಮ್ಮದೇ ಆದ ಅಭಿಮಾನಿ ಬಳಗವನ್ನು ಸೃಷ್ಟಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ‘ನಮ್ಮನ್ನು ಕ್ಷಮಿಸಿ’; ಮದುವೆ ಬೆನ್ನಲ್ಲೇ ಅಭಿಮಾನಿಗಳಿಗೆ ಬಹಿರಂಗ ಪತ್ರ ಬರೆದ ಪ್ರಣಿತಾ ಮತ್ತು ನಿತಿನ್

Published On - 5:51 pm, Mon, 31 May 21

Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?