Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ನೋಡೋದೂ ಇಲ್ಲ’; ಅಶ್ಲೀಲ ಕಮೆಂಟ್​ಗಳಿಗೆ ಡೋಂಟ್ ಕೇರ್ ಎಂದ ನಿವೇದಿತಾ

ನಿವೇದಿತಾ ಗೌಡ ಅವರು ಚಂದನ್ ಶೆಟ್ಟಿಯವರೊಂದಿಗಿನ ವಿಚ್ಛೇದನದ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದಾರೆ. ಅವರ ಮೇಲೆ ನಡೆಯುತ್ತಿರುವ ಟ್ರೋಲಿಂಗ್‌ಗೆ ಅವರು ಪ್ರತಿಕ್ರಿಯಿಸಿ, ನಕಾರಾತ್ಮಕ ಅಭಿಪ್ರಾಯಗಳನ್ನು ಅವರು ಗಮನಿಸುವುದಿಲ್ಲ ಎಂದು ಹೇಳಿದ್ದಾರೆ. ಪ್ರತಿಯೊಬ್ಬ ಮಹಿಳೆಯೂ ಆರ್ಥಿಕವಾಗಿ ಸ್ವಾವಲಂಬಿಗಳಾಗಿರಬೇಕು ಎಂಬುದನ್ನು ಅವರು ಒತ್ತಿ ಹೇಳಿದ್ದಾರೆ.

‘ನಾನು ನೋಡೋದೂ ಇಲ್ಲ’; ಅಶ್ಲೀಲ ಕಮೆಂಟ್​ಗಳಿಗೆ ಡೋಂಟ್ ಕೇರ್ ಎಂದ ನಿವೇದಿತಾ
ಚಂದನ್​-ನಿವೇದಿತಾ
Follow us
ರಾಜೇಶ್ ದುಗ್ಗುಮನೆ
|

Updated on:Mar 12, 2025 | 7:36 AM

ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ (Chandan Shetty) ವಿಚ್ಛೇದನ ಪಡೆದು ಬೇರೆ ಆಗಿದ್ದಾರೆ. ಇದಾದ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ನಿವೇದಿತಾ ಸಖತ್ ಆ್ಯಕ್ಟೀವ್ ಆಗಿದ್ದು, ಸಾಕಷ್ಟು ರೀಲ್ಸ್ ಮಾಡುತ್ತಿದ್ದಾರೆ. ಕೆಲವು ಫೋಟೋ ಹಾಗೂ ವಿಡಿಯೋಗಳಲ್ಲಿ ಅವರು ಬೋಲ್ಡ್ ಆಗಿ ಕಾಣಿಸಿಕೊಂಡರು ಎಂದು ಕೆಲವರು ಅವರನ್ನು ಟ್ರೋಲ್ ಮಾಡಿದ್ದೂ ಇದೆ. ಇದಕ್ಕೆ ಅವರು ಬೇಸರ ಮಾಡಿಕೊಂಡಿಲ್ಲ. ಬದಲಿಗೆ, ನೀವು ಟ್ರೋಲ್ ಮಾಡೋದಾದರೆ ಮಾಡಿ ನನಗೇನೂ ಬೇಸರ ಇಲ್ಲ ಎಂದು ಅವರು ಹೇಳಿದ್ದಾರೆ.

‘ಮುದ್ದು ರಾಕ್ಷಸಿ’ ಚಿತ್ರದಲ್ಲಿ ಚಂದನ್ ಹಾಗೂ ನಿವೇದಿತಾ ಒಟ್ಟಾಗಿ ನಟಿಸಿದ್ದಾರೆ. ವಿಚ್ಛೇದನದ ಬಳಿಕವೂ ಇವರು ಒಟ್ಟಾಗಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದ ಸುದ್ದಿಗೋಷ್ಠಿಯಲ್ಲಿ ನಿವೇದಿತಾ ಅವರು ಮಾತನಾಡಿದರು. ತಮ್ಮ ಬಗ್ಗೆ ಬರುತ್ತಿರೋ ಟ್ರೋಲ್​ಗಳ ಬಗ್ಗೆ ಅವರು ಮುಕ್ತವಾಗಿ ಮಾತನಾಡಿದರು.

‘ಬ್ಲೇಮ್ ಗೇಮ್ ನಡೆಯುತ್ತಲೇ ಇರುತ್ತದೆ. ಈ ರೀತಿ ಕೆಟ್ಟದಾಗಿ ಕಮೆಂಟ್ ಮಾಡಬಾರದು ಎಂದು ಅವರಿಗೇ ಅನಿಸಬೇಕು. ಏಕೆಂದರೆ, ಮಾನವೀಯತೆ ಎಲ್ಲರಲ್ಲೂ ಇರಲ್ಲ. ನನ್ನ ಕೆಲಸದ ಮೇಲೆ ಗಮನ ಹರಿಸುತ್ತೇನೆ. ಈ ಮೂಲಕ ನಾನು ನಾನು ಇದರಿಂದ ಓವರ್​ಕಮ್ ಮಾಡುತ್ತೇನೆ. ಯಾರಾದರೂ ನನ್ನ ಬಗ್ಗೆ ಏನಾದರೂ ತಿಳಿದುಕೊಂಡರೆ ಅದು ಅವರ ಪ್ರಾಬ್ಲಂ. ಇದಕ್ಕೆ ನಾನು ಕುಗ್ಗಲ್ಲ. ಏಕೆಂದರೆ ನಾನು ಅಷ್ಟು ವೀಕ್ ಅಲ್ಲ. ನನ್ನ ಕೆಲಸವನ್ನು ಪ್ಯಾಷನೇಟ್ ಆಗಿ ಮಾಡುತ್ತೇನೆ’ ಎಂದು ನಿವೇದಿತಾ ಹೇಳಿದ್ದಾರೆ.

ಇದನ್ನೂ ಓದಿ
Image
ಸುಮಲತಾ-ದರ್ಶನ್ ಮಧ್ಯೆ ಬಿರುಕು? ಈ ಬೆಳವಣಿಗೆ ನೋಡಿದ್ರೆ ನೀವೂ ಒಪ್ತೀರಿ
Image
ಅಕ್ಕನ ಮಗನನ್ನೇ ‘ಡೆವಿಲ್’ ಚಿತ್ರದಿಂದ ಹೊರಗಿಟ್ಟ ದರ್ಶನ್; ಕಾರಣ ನೀಡಿದ ನಟ
Image
ಚಂದನ್ ಶೆಟ್ಟಿ ಜೊತೆ ಮತ್ತೆ ಬಾಳುತ್ತೀರಾ? ನೇರವಾಗಿ ಉತ್ತರ ನೀಡಿದ ನಿವೇದಿತಾ
Image
ಮತ್ತೆ ಚಂದನ್ ಶೆಟ್ಟಿ ತಬ್ಬಿಕೊಂಡು ಕಣ್ಣೀರು ಹಾಕಿದ ನಿವೇದಿತಾ ಗೌಡ

‘ಕಮೆಂಟ್ ಮಾಡುವವರು ಮಾಡಿಕೊಳ್ಳಳಿ. ನಾನು ಅದನ್ನು ಓದೋದೂ ಇಲ್ಲ. ಬೇರೆಯವರಿಗೆ ಕೆಟ್ಟದ್ದು ಬಯಸಿದರೆ ಅವರಿಗೆ ಖುಷಿ ಸಿಗುತ್ತದೆ ಎಂದರೆ ಕಮೆಂಟ್ ಮಾಡಿಕೊಳ್ಳಲಿ. ಇದೆಲ್ಲವನ್ನೂ ದೇವರು ನೋಡಿಕೊಳ್ಳುತ್ತಾನೆ. ಒಂದಷ್ಟು ನೆಗೆಟಿವ್ ಇದ್ದರೂ ತುಂಬಾ ಇಷ್ಟಪಡುವವರು ಇದ್ದಾರೆ. ಪ್ರೀತಿಯಿಂದ ಮಾತನಾಡುವವರು ಜಾಸ್ತಿ ಜನ ಇದ್ದಾರೆ. ಅದನ್ನು ನೋಡಿದಾಗ ಖುಷಿ ಆಗುತ್ತದೆ’ ಎಂಬುದು ನಿವೇದಿತಾ ಮಾತು.

ಇದನ್ನೂ ಓದಿ:

‘ಪ್ರತಿ ಹೆಣ್ಣು ಮಗುವಿಗೂ ಅವರದ್ದೇ ಆದ ಸಂಪಾದನೆ ಇರಬೇಕು. ಆಗ ಅವರು ಯಶಸ್ಸು ಕಾಣಬಹುದು. ಎಲ್ಲರ ಜೀವನದಲ್ಲೂ ಕಷ್ಟ ಇರುತ್ತದೆ. ಫ್ರೀಡಂ ಆಫ್ ಸ್ಪೀಚ್ ಇದೆ ಅನ್ನೋ ಕಾರಣಕ್ಕೆ ಏನೂ ಕಮೆಂಟ್ ಮಾಡಬೇಡಿ. ನನಗೆ ಅದರಿಂದ ಬೇಸರ ಇಲ್ಲ. ನನ್ನ ಟ್ರೋಲ್ ಮಾಡಿ, ನಾನು ತಲೆಕೆಡಿಸಿಕೊಳ್ಳಲ್ಲ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:35 am, Wed, 12 March 25

ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!