ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ ಸಿನಿಮಾದ ಮೊದಲ‌ ಹಂತದ ಚಿತ್ರೀಕರಣ ಮುಕ್ತಾಯ

Niveditha Shiva Rajkumar: ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಶಿವರಾಜ್ ಕುಮಾರ್ ಸಿನಿಮಾ ನಿರ್ಮಾಣ ಮಾಡುತ್ತಿದ್ದು, ಸಿನಿಮಾ ಈಗ ಯಾವ ಹಂತದಲ್ಲಿದೆ?

ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ 'ಫೈರ್ ಫ್ಲೈ' ಸಿನಿಮಾದ ಮೊದಲ‌ ಹಂತದ ಚಿತ್ರೀಕರಣ ಮುಕ್ತಾಯ
ನಿವೇದಿತಾ ಶಿವರಾಜ್ ಕುಮಾರ್
Follow us
|

Updated on: Sep 24, 2023 | 6:58 PM

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ (Shiva Rajkumar) ಮಗಳು ನಿವೇದಿತಾ ಶಿವರಾಜ್‌ಕುಮಾರ್ ಚಿತ್ರರಂಗಕ್ಕೆ ಕಾಲಿರಿಸಿದ್ದಾರೆ. ನಟಿಯಾಗಿ ಅಲ್ಲ ಬದಲಿಗೆ ನಿರ್ಮಾಪಕಿಯಾಗಿ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲೆಂದು ಶ್ರೀ ಮುತ್ತು ಸಿನಿ ಸರ್ವೀಸ್‌ ಆರಂಭಿಸಿ ಸಿನಿಮಾಗಳನ್ನು ಮಾಡಲು ಮುಂದಾಗಿದ್ದಾರೆ. ನಿವೇದಿತಾರ ಸಂಸ್ಥೆಯ ಮೊದಲ ಸಿನಿಮಾ ಆಗಿ ‘ಫೈರ್ ಫ್ಲೈ’ ತೆರೆಗೆ ಬರಲಿದೆ. ಸಿನಿಮಾದ ಪೋಸ್ಟರ್ ಈಗಾಗಲೇ ಬಿಡುಗಡೆ ಆಗಿದೆ. ಈ ಸಿನಿಮಾದ ಮೊದಲ ಹಂತದ ಚಿತ್ರೀಕರಣ ಪೂರ್ಣಗೊಂಡಿದೆ. ಮೈಸೂರು, ಬೆಂಗಳೂರು ಇನ್ನೂ ಕೆಲವು ಕಡೆಗಳಲ್ಲಿ ಚಿತ್ರೀಕರಣ ಮಾಡಲಾಗಿದೆ. ಅಕ್ಟೋಬರ್ ತಿಂಗಳ ಮೂರನೇ ವಾರದಿಂದ ಎರಡನೇ ಹಂತದ ಶೂಟಿಂಗ್ ಶುರು ಆಗಲಿದೆ.

‘ಫೈರ್ ಫ್ಲೈ’ ಸಿನಿಮಾವನ್ನು ಯುವ ನಟ ವಂಶಿ ನಿರ್ದೇಶನ ಮಾಡುತ್ತಿದ್ದಾರೆ. ನಟ ವಂಶಿ, ಪೂರ್ಣ ಪ್ರಮಾಣದ ನಾಯಕ ನಟನಾಗಿ ಕನ್ನಡ ಚಿತ್ರರಂಗಕ್ಕೆ ಇದೇ ಸಿನಿಮಾ ಮೂಲಕ ಪರಿಚಯ ಆಗುತ್ತಿದ್ದಾರೆ. ಅಭಿಲಾಷ್ ಕಲ್ಲಟ್ಟಿ ಈ ಸಿನಿಮಾದ ಸಿನಿಮಾಟೊಗ್ರಾಫರ್. ತಮ್ಮ ಮಧುರವಾದ ಮೆಲೋಡಿಗಳ ಮೂಲಕ ಹೆಸರು ಮಾಡಿರುವ ಚರಣ್ ರಾಜ್ ಈ ಚಿತ್ರಕ್ಕೆ ಹಿನ್ನೆಲೆ ಸಂಗೀತ ನೀಡುತ್ತಿದ್ದಾರೆ. ಜನಪ್ರಿಯ ಸಂಭಾಷಣೆಕಾರ ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ.

ಇದನ್ನೂ ಓದಿ:ಬಾಲಿವುಡ್​ನಲ್ಲಿ ಹವಾ ಎಬ್ಬಿಸಲು ಶಿವರಾಜ್ ಕುಮಾರ್ ರೆಡಿ: ಏನಿದು ಹೊಸ ಸುದ್ದಿ?

ಚಿತ್ರದ ನಾಯಕ-ನಿರ್ದೇಶಕ ವಂಶಿ ಈ ಹಿಂದೆ ಪಿ.ಆರ್‌.ಕೆ ಸಂಸ್ಥೆಯ ‘ಮಾಯಾಬಜಾರ್’ ಸಿನಿಮಾಕ್ಕೆ ಸಹಾಯಕ ನಿರ್ದೇಶಕರಾಗಿ ಕೆಲಸ ನಿರ್ವಹಿಸಿದ್ದರು. ಗುರು ದೇಶಪಾಂಡೆ ಅವರ ‘ಪೆಂಟಗನ್’ ಸಿನಿಮಾದಲ್ಲೂ ಪ್ರಮುಖ ಪಾತ್ರ ನಿರ್ವಹಿಸಿದ್ದರು. ನಾಯಕ-ನಿರ್ದೇಶಕ ವಂಶಿಗೆ ಇಲ್ಲಿ ಜಯ್ ರಾಮ್ ಸಹ ನಿರ್ದೇಶಕರಾಗಿಯೇ ಕೆಲಸ ಮಾಡುತ್ತಿದ್ದಾರೆ. ಸಿನಿಮಾ ನಿರ್ಮಾಣ ಸಂಸ್ಥೆ ಶ್ರೀ ಮುತ್ತು ಸಿನಿ ಸರ್ವಿಸ್ ಸಂಸ್ಥೆ ಈ ಮೂಲಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ಕೂಡ ಕೊಡುತ್ತಿದೆ.

ನಿವೇದಿತಾ ಶಿವರಾಜ್ ಕುಮಾರ್ ಅವರು ಸಿನಿಮಾಗಳಲ್ಲಿ ಆಸಕ್ತಿ ಇರಿಸಿಕೊಂಡಿದ್ದು ಸಿನಿಮಾ ಜೊತೆಗೆ ಹಿಂದೆ ಕೆಲವು ವೆಬ್ ಸರಣಿಗಳನ್ನು ನಿರ್ಮಾಣ ಮಾಡಿದ್ದಾರೆ. ‘ಹನಿಮೂನ್’, ‘ಬೈ ಮಿಸ್ಟೆಕ್’, ‘ಹೇಟ್ ಯು ರೋಮಿಯೋ’ ವೆಬ್ ಸರಣಿಗಳನ್ನು ನಿರ್ಮಾಣ ಮಾಡಿದ್ದಾರೆ. ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಸಹ ನಿರ್ಮಾಪಕಿ ಆಗಿದ್ದು ತಮ್ಮದೇ ಒಡೆತನದ ನಿರ್ಮಾಣ ಸಂಸ್ಥೆಯನ್ನು ಹೊಂದಿದ್ದಾರೆ. ಇತ್ತೀಚೆಗೆ ಸೂಪರ್ ಹಿಟ್ ಆದ ‘ವೇದ’ ಸಿನಿಮಾವನ್ನು ಗೀತಾ ಶಿವರಾಜ್ ಕುಮಾರ್ ಅವರೇ ನಿರ್ಮಾಣ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು