AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ ಸಿನಿಮಾದ ಮೊದಲ‌ ಹಂತದ ಚಿತ್ರೀಕರಣ ಮುಕ್ತಾಯ

Niveditha Shiva Rajkumar: ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಶಿವರಾಜ್ ಕುಮಾರ್ ಸಿನಿಮಾ ನಿರ್ಮಾಣ ಮಾಡುತ್ತಿದ್ದು, ಸಿನಿಮಾ ಈಗ ಯಾವ ಹಂತದಲ್ಲಿದೆ?

ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ 'ಫೈರ್ ಫ್ಲೈ' ಸಿನಿಮಾದ ಮೊದಲ‌ ಹಂತದ ಚಿತ್ರೀಕರಣ ಮುಕ್ತಾಯ
ನಿವೇದಿತಾ ಶಿವರಾಜ್ ಕುಮಾರ್
ಮಂಜುನಾಥ ಸಿ.
|

Updated on: Sep 24, 2023 | 6:58 PM

Share

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ (Shiva Rajkumar) ಮಗಳು ನಿವೇದಿತಾ ಶಿವರಾಜ್‌ಕುಮಾರ್ ಚಿತ್ರರಂಗಕ್ಕೆ ಕಾಲಿರಿಸಿದ್ದಾರೆ. ನಟಿಯಾಗಿ ಅಲ್ಲ ಬದಲಿಗೆ ನಿರ್ಮಾಪಕಿಯಾಗಿ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲೆಂದು ಶ್ರೀ ಮುತ್ತು ಸಿನಿ ಸರ್ವೀಸ್‌ ಆರಂಭಿಸಿ ಸಿನಿಮಾಗಳನ್ನು ಮಾಡಲು ಮುಂದಾಗಿದ್ದಾರೆ. ನಿವೇದಿತಾರ ಸಂಸ್ಥೆಯ ಮೊದಲ ಸಿನಿಮಾ ಆಗಿ ‘ಫೈರ್ ಫ್ಲೈ’ ತೆರೆಗೆ ಬರಲಿದೆ. ಸಿನಿಮಾದ ಪೋಸ್ಟರ್ ಈಗಾಗಲೇ ಬಿಡುಗಡೆ ಆಗಿದೆ. ಈ ಸಿನಿಮಾದ ಮೊದಲ ಹಂತದ ಚಿತ್ರೀಕರಣ ಪೂರ್ಣಗೊಂಡಿದೆ. ಮೈಸೂರು, ಬೆಂಗಳೂರು ಇನ್ನೂ ಕೆಲವು ಕಡೆಗಳಲ್ಲಿ ಚಿತ್ರೀಕರಣ ಮಾಡಲಾಗಿದೆ. ಅಕ್ಟೋಬರ್ ತಿಂಗಳ ಮೂರನೇ ವಾರದಿಂದ ಎರಡನೇ ಹಂತದ ಶೂಟಿಂಗ್ ಶುರು ಆಗಲಿದೆ.

‘ಫೈರ್ ಫ್ಲೈ’ ಸಿನಿಮಾವನ್ನು ಯುವ ನಟ ವಂಶಿ ನಿರ್ದೇಶನ ಮಾಡುತ್ತಿದ್ದಾರೆ. ನಟ ವಂಶಿ, ಪೂರ್ಣ ಪ್ರಮಾಣದ ನಾಯಕ ನಟನಾಗಿ ಕನ್ನಡ ಚಿತ್ರರಂಗಕ್ಕೆ ಇದೇ ಸಿನಿಮಾ ಮೂಲಕ ಪರಿಚಯ ಆಗುತ್ತಿದ್ದಾರೆ. ಅಭಿಲಾಷ್ ಕಲ್ಲಟ್ಟಿ ಈ ಸಿನಿಮಾದ ಸಿನಿಮಾಟೊಗ್ರಾಫರ್. ತಮ್ಮ ಮಧುರವಾದ ಮೆಲೋಡಿಗಳ ಮೂಲಕ ಹೆಸರು ಮಾಡಿರುವ ಚರಣ್ ರಾಜ್ ಈ ಚಿತ್ರಕ್ಕೆ ಹಿನ್ನೆಲೆ ಸಂಗೀತ ನೀಡುತ್ತಿದ್ದಾರೆ. ಜನಪ್ರಿಯ ಸಂಭಾಷಣೆಕಾರ ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ.

ಇದನ್ನೂ ಓದಿ:ಬಾಲಿವುಡ್​ನಲ್ಲಿ ಹವಾ ಎಬ್ಬಿಸಲು ಶಿವರಾಜ್ ಕುಮಾರ್ ರೆಡಿ: ಏನಿದು ಹೊಸ ಸುದ್ದಿ?

ಚಿತ್ರದ ನಾಯಕ-ನಿರ್ದೇಶಕ ವಂಶಿ ಈ ಹಿಂದೆ ಪಿ.ಆರ್‌.ಕೆ ಸಂಸ್ಥೆಯ ‘ಮಾಯಾಬಜಾರ್’ ಸಿನಿಮಾಕ್ಕೆ ಸಹಾಯಕ ನಿರ್ದೇಶಕರಾಗಿ ಕೆಲಸ ನಿರ್ವಹಿಸಿದ್ದರು. ಗುರು ದೇಶಪಾಂಡೆ ಅವರ ‘ಪೆಂಟಗನ್’ ಸಿನಿಮಾದಲ್ಲೂ ಪ್ರಮುಖ ಪಾತ್ರ ನಿರ್ವಹಿಸಿದ್ದರು. ನಾಯಕ-ನಿರ್ದೇಶಕ ವಂಶಿಗೆ ಇಲ್ಲಿ ಜಯ್ ರಾಮ್ ಸಹ ನಿರ್ದೇಶಕರಾಗಿಯೇ ಕೆಲಸ ಮಾಡುತ್ತಿದ್ದಾರೆ. ಸಿನಿಮಾ ನಿರ್ಮಾಣ ಸಂಸ್ಥೆ ಶ್ರೀ ಮುತ್ತು ಸಿನಿ ಸರ್ವಿಸ್ ಸಂಸ್ಥೆ ಈ ಮೂಲಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ಕೂಡ ಕೊಡುತ್ತಿದೆ.

ನಿವೇದಿತಾ ಶಿವರಾಜ್ ಕುಮಾರ್ ಅವರು ಸಿನಿಮಾಗಳಲ್ಲಿ ಆಸಕ್ತಿ ಇರಿಸಿಕೊಂಡಿದ್ದು ಸಿನಿಮಾ ಜೊತೆಗೆ ಹಿಂದೆ ಕೆಲವು ವೆಬ್ ಸರಣಿಗಳನ್ನು ನಿರ್ಮಾಣ ಮಾಡಿದ್ದಾರೆ. ‘ಹನಿಮೂನ್’, ‘ಬೈ ಮಿಸ್ಟೆಕ್’, ‘ಹೇಟ್ ಯು ರೋಮಿಯೋ’ ವೆಬ್ ಸರಣಿಗಳನ್ನು ನಿರ್ಮಾಣ ಮಾಡಿದ್ದಾರೆ. ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಸಹ ನಿರ್ಮಾಪಕಿ ಆಗಿದ್ದು ತಮ್ಮದೇ ಒಡೆತನದ ನಿರ್ಮಾಣ ಸಂಸ್ಥೆಯನ್ನು ಹೊಂದಿದ್ದಾರೆ. ಇತ್ತೀಚೆಗೆ ಸೂಪರ್ ಹಿಟ್ ಆದ ‘ವೇದ’ ಸಿನಿಮಾವನ್ನು ಗೀತಾ ಶಿವರಾಜ್ ಕುಮಾರ್ ಅವರೇ ನಿರ್ಮಾಣ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಡಿಕೆಶಿ ದಿಟ್ಟ ಹೆಜ್ಜೆ
ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಡಿಕೆಶಿ ದಿಟ್ಟ ಹೆಜ್ಜೆ
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಪ್ರಧಾನಿ ಮೋದಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ, ಬಿಗಿ ಭದ್ರತೆ
ಪ್ರಧಾನಿ ಮೋದಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ, ಬಿಗಿ ಭದ್ರತೆ
ಮಗಳ ಕೊನೆಯ ಕ್ಷಣ ನೆನೆದು ಕಣ್ಣೀರಿಟ್ಟ ತಂದೆ
ಮಗಳ ಕೊನೆಯ ಕ್ಷಣ ನೆನೆದು ಕಣ್ಣೀರಿಟ್ಟ ತಂದೆ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್