AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸು ಫ್ರಮ್ ಸೋ’ ಚಿತ್ರಕ್ಕೆ ಸೀಕ್ವೆಲ್ ಬರುತ್ತಾ? ರಾಜ್ ಬಿ ಶೆಟ್ಟಿ ಪ್ಲ್ಯಾನೇ ಬೇರೆ

ರಾಜ್ ಬಿ ಶೆಟ್ಟಿ ಅವರ ‘ಸು ಫ್ರಮ್ ಸೋ’ ಚಿತ್ರ ಭಾರೀ ಯಶಸ್ಸು ಕಂಡಿದೆ. ಆದರೂ, ಸೀಕ್ವೆಲ್ ಮಾಡಲು ರಾಜ್​ ಬಿ. ಶೆಟ್ಟಿ ಅವರು ನಿರಾಕರಿಸಿದ್ದಾರೆ. ಇದು ಅವರ ನೈತಿಕತೆಗೆ ವಿರುದ್ಧ ಎಂದು ಅವರು ನಂಬುತ್ತಾರೆ. ಗೆದ್ದ ಕುದುರೆಯ ಬಾಲ ಹಿಡಿದು ಓಡುವುದು ಅವರಿಗೆ ಇಷ್ಟವಿಲ್ಲ. ಹೊಸ ಮತ್ತು ವಿಭಿನ್ನ ಚಿತ್ರಗಳನ್ನು ನಿರ್ಮಿಸುವ ಯೋಜನೆಯಲ್ಲಿದ್ದಾರೆ.

‘ಸು ಫ್ರಮ್ ಸೋ’ ಚಿತ್ರಕ್ಕೆ ಸೀಕ್ವೆಲ್ ಬರುತ್ತಾ? ರಾಜ್ ಬಿ ಶೆಟ್ಟಿ ಪ್ಲ್ಯಾನೇ ಬೇರೆ
ಸು ಫ್ರಮ್ ಸೋ
ರಾಜೇಶ್ ದುಗ್ಗುಮನೆ
|

Updated on: Jul 29, 2025 | 3:08 PM

Share

ಯಾವುದೇ ಸಿನಿಮಾ ಹಿಟ್ ಆದರೆ ಅದಕ್ಕೆ ಸೀಕ್ವೆಲ್ ಅಥವಾ ಪ್ರಿಕ್ವೆಲ್ ಮಾಡೋದು ಟ್ರೆಂಡ್. ಮೊದಲ ಸಿನಿಮಾ ಹಿಟ್ ಆಗಿದೆ ಎಂಬ ಕಾರಣಕ್ಕೆ ಎರಡನೇ ಪಾರ್ಟ್​ ಮಾಡಿದರೆ ಜನರು ನೋಡಲು ಬಂದೇ ಬರುತ್ತಾರೆ. ಇದು ಬಿಸ್ನೆಸ್ ನಿಟ್ಟಿನಲ್ಲಿ ತುಂಬಾನೇ ಲಾಭ. ಈ ಕಾರಣಕ್ಕೆ ಅನೇಕರು ಈ ಬಗ್ಗೆ ಆಸಕ್ತಿ ಹೊರಹಾಕುತ್ತಾರೆ. ಆದರೆ, ರಾಜ್ ಬಿ. ಶೆಟ್ಟಿ ಮಾತ್ರ ಈ ಸಂಪ್ರದಾಯಕ್ಕೆ ಕಟ್ಟು ಬಿದ್ದವರಲ್ಲ. ಈ ಕಾರಣದಿಂದಲೇ ‘ಸು ಫ್ರಮ್ ಸೋ’ (Su From So) ಚಿತ್ರಕ್ಕೆ ಸೀಕ್ವೆಲ್ ಮಾಡಲು ಅವರು ರೆಡಿ ಇಲ್ಲ.

‘ಸು ಫ್ರಮ್ ಸೋ’ ಸಿನಿಮಾಗೆ ಸೀಕ್ವೆಲ್ ತರಬೇಕು ಎಂದು ಅನೇಕರು ಹೇಳಿದ್ದಾರೆ. ಸಿನಿಮಾ ಕ್ಲೈಮ್ಯಾಕ್ಸ್ ನೋಡಿದರೆ ಆ ರೀತಿಯ ಅವಕಾಶವೂ ಇದೆ ಎನಿಸುತ್ತದೆ. ಆದರೆ, ರಾಜ್ ಬಿ ಶೆಟ್ಟಿ ಇದಕ್ಕೆ ವಿರುದ್ಧ. ಅವರು ‘ಸು ಫ್ರಮ್ ಸೋ’ ಚಿತ್ರಕ್ಕೆ ಸೀಕ್ವೆಲ್ ಮಾಡಬಾರದು ಎಂದು ದಿಟ್ಟ ನಿರ್ಧಾರ ಮಾಡಿದ್ದಾರೆ. ಅವರು ಬೇರೆ ರೀತಿಯ ಚಿತ್ರಗಳನ್ನು ಮಾಡುವ ಪ್ಲ್ಯಾನ್​ನಲ್ಲಿ ಇದ್ದಾರೆ.

‘ಸು ಫ್ರಮ್ ಸೋ’ ಸಿನಿಮಾಗೆ ಸೀಕ್ವೆಲ್ ಮಾಡಬಹುದು ಎನ್ನುವ ಚರ್ಚೆಗಳು ನಡೆದಿದ್ದವು. ಆದರೆ, ಅದು ತಮ್ಮ ನೈತಿಕತೆಗೆ ವಿರುದ್ಧವಾಗಿದೆ ಎಂದು ನಂಬುತ್ತಾರೆ ರಾಜ್. ಜೊತೆಗೆ ಗೆದ್ದ ಕುದುರೆಯ ಬಾಲ ಹಿಡಿದು ಓಡುವವರು ಅವರಲ್ಲ. ಈ ಕಾರಣದಿಂದಲೇ ರಾಜ್ ಅವರು ‘ಸು ಫ್ರಮ್ ಸೋ’ ಚಿತ್ರಕ್ಕೆ ಸೀಕ್ವೆಲ್ ಮಾಡಬಾರದು ಎಂದು ನಿರ್ಧರಿಸಿದ್ದಾರೆ.

ಇದನ್ನೂ ಓದಿ
Image
ಶ್ರಾವಣದ ಉಪವಾಸ ಮಾಡಿ ಬಳಿಕ ಕುರಿ ಮರಿ ತಿಂದ ನಟಿ; ವ್ಯಕ್ತವಾಯಿತು ಟೀಕೆ
Image
ಜೀ ಕನ್ನಡದಲ್ಲಿ ‘ನಾವು ನಮ್ಮವರು’ ಶೋ; ತಾರಾ, ಶರಣ್, ಅಮೂಲ್ಯ ಜಡ್ಜ್
Image
ಸೋಮವಾರವೂ ಭಾನುವಾರದಷ್ಟೇ ಗಳಿಸಿದ ‘ಸು ಫ್ರಮ್ ಸೋ’
Image
‘ಕನಿಷ್ಠ ಸಭ್ಯತೆ ಇರಲಿ’; ದರ್ಶನ್ ಅಭಿಮಾನಿಗಳ ಬಳಿ ಕೋರಿದ್ರಾ ರಕ್ಷಿತಾ

‘ಮುಂದಿನ ಬಾರಿ ನಾವು ಹೊಸ ರೀತಿಯ ಸಿನಿಮಾ ಮಾಡುತ್ತೇವೆ. ಅದನ್ನು ನೋಡಲು ಬರುವಾಗ ಈ ಸಿನಿಮಾದ ಮೇಲಿದ್ದ ನಿರೀಕ್ಷೆ ಬೇಡ. ಅದು ಸಂಪೂರ್ಣವಾಗಿ ಹೊಸ ರೀತಿಯದ್ದೇ ಚಿತ್ರ ಆಗಿರಲಿದೆ. ಸಿನಿಮಾ ಗೆಲ್ಲುತ್ತದೆಯೋ ಅಥವಾ ಬಿಡುತ್ತದೆಯೋ ಎರಡನೇ ವಿಷಯ. ಪ್ರಾಮಾಣಿಕ ಪ್ರಯತ್ನವಂತೂ ಇರುತ್ತದೆ’ ಎನ್ನುತ್ತಾರೆ ರಾಜ್.

ಇದನ್ನೂ ಓದಿ: ಸೋಮವಾರವೂ ಭಾನುವಾರದಷ್ಟೇ ಗಳಿಸಿದ ‘ಸು ಫ್ರಮ್ ಸೋ’; ಕಲೆಕ್ಷನ್​​ನಲ್ಲಿ ರಾಜ್ ಬಿ. ಶೆಟ್ಟಿ ದಾಖಲೆ

‘ಸು ಫ್ರಮ್ ಸೋ’ ಚಿತ್ರ ಕರ್ನಾಟಕದಲ್ಲಿ 10 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ವಾರದ ದಿನಗಳಲ್ಲೂ ಸಿನಿಮಾ ಅಬ್ಬರಿಸುತ್ತಿದೆ. ಈ ವಿಚಾರ ಅವರಿಗೆ ಖುಷಿ ಕೊಟ್ಟಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ