AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಲ್ಲಿ ಪವಿತ್ರಾ ಗೌಡ ಮತ್ತು ಡಿ ಗ್ಯಾಂಗ್​ ಸಹಚರರಿಗೆ ಮಟನ್​ ಊಟ

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟಿ ಪವಿತ್ರಾ ಗೌಡ ಜೈಲು ಪಾಲಾಗಿದ್ದಾರೆ. ಅವರ ಜೊತೆ ಇನ್ನೂ ಕೆಲವು ಸಹಚರರು ಕೂಡ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪರಪ್ಪನ ಅಗ್ರಹಾರ ಜೈಲು ಸೇರಿಕೊಂಡಿರುವ ಪವಿತ್ರಾ ಗೌಡ ಮತ್ತು ಡಿ ಗ್ಯಾಂಗ್​ನ ಸಹಚರರಿಗೆ ಇಂದು (ಜೂನ್​ 21) ಬಾಡೂಟ ನೀಡಲಾಗಿದೆ. ಕಾರಾಗೃಹದ ಮೆನು ಅನುಸಾರ ಮಟನ್​, ಚಪಾತಿ, ಮುದ್ದೆ ಹಾಗೂ ಅನ್ನ ನೀಡಲಾಗಿದೆ.

ಜೈಲಿನಲ್ಲಿ ಪವಿತ್ರಾ ಗೌಡ ಮತ್ತು ಡಿ ಗ್ಯಾಂಗ್​ ಸಹಚರರಿಗೆ ಮಟನ್​ ಊಟ
ಪವಿತ್ರಾ ಗೌಡ
ರಾಮು, ಆನೇಕಲ್​
| Edited By: |

Updated on: Jun 21, 2024 | 10:30 PM

Share

ಇಷ್ಟು ದಿನ ಐಷಾರಾಮಿ ಜೀವನ ಸಾಗಿಸುತ್ತಿದ್ದ ನಟಿ ಪವಿತ್ರಾ ಗೌಡ (Pavithra Gowda) ಈಗ ಜೈಲು ವಾಸು ಅನುಭವಿಸುತ್ತಿದ್ದಾರೆ. ರೇಣುಕಾ ಸ್ವಾಮಿ (Renuka Swamy) ಕೊಲೆ ಕೇಸ್​ನಲ್ಲಿ ಪವಿತ್ರಾ ಗೌಡ ಎ1 ಆಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಅವರು ಜೈಲು ಸೇರಿ ಇಂದಿಗೆ ಎರಡು ದಿನ ಕಳೆದಿದೆ. ಎರಡನೇ ದಿನವಾದ ಇಂದು (ಜೂನ್​ 21) ಪವಿತ್ರಾ ಗೌಡ ಅವರ ಪರಪ್ಪನ ಅಗ್ರಹಾರ ಜೈಲಿಯಲ್ಲಿ ಮಟನ್​ ಊಟ (Non Veg Food) ಸೇವಿಸಿದ್ದಾರೆ! ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ..

ಪರಪ್ಪನ ಅಗ್ರಹಾರ ಜೈಲು ಮೆನುವಿನಂತೆ ಇಂದು (ಜೂನ್​ 21) ನಾನ್ ವೆಜ್ ಊಟ ನೀಡಲಾಗಿದೆ. ಆರೋಪಿಗಳಾಗಿರುವ ಪವಿತ್ರಾ ಗೌಡ ಹಾಗೂ ಇತರ ಸಹಚರರಿಗೆ ಜೈಲಿನಲ್ಲಿ ನಾನ್​-ವೆಜ್​ ಊಟ ಕೊಡಲಾಗಿದೆ. ಕಾರಾಗೃಹ ಸಿಬ್ಬಂದಿಯು ಮಟನ್ ಊಟ ನೀಡಿದ್ದಾರೆ. ಮೆನುವಿನ ಪ್ರಕಾರ ಮಟನ್, ಮುದ್ದೆ, ಚಪಾತಿ, ರೈಸ್ ನೀಡಲಾಗಿದೆ. ಪವಿತ್ರಾ ಗೌಡ ಮತ್ತು ಡಿ ಗ್ಯಾಂಗ್​ನವರು ಬಾಡೂಟ ಸೇವಿಸಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: ಪವಿತ್ರಾ ಗೌಡಗೆ ಸಿಕ್ಕ ವಿಚಾರಣಾಧೀನ ಕೈದಿ ನಂಬರ್ ಏನು?

ಸಂಜೆ 8 ಗಂಟೆಯ ಸುಮಾರಿಗೆ ಕಾರಾಗೃಹ ಸಿಬ್ಬಂದಿಯು ಊಟ ನೀಡಿದರು. ಊಟ ಮಾಡಿದ ಬಳಿಕ ಮಹಿಳಾ ವಿಭಾಗದ ಡಿ ಬ್ಯಾರಕ್​ನಲ್ಲಿ ಪವಿತ್ರಾ ಗೌಡ ಮೌನಕ್ಕೆ ಜಾರಿದರು. ತಮಗೆ ಎಂಥ ಪರಿಸ್ಥಿತಿ ಎದುರಾಯ್ತು ಎಂದು ಅವರು ಕಣ್ಣೀರು ಹಾಕಿದ್ದಾರೆ ಎನ್ನಲಾಗಿದೆ. ಇಂದು ಪವಿತ್ರಾ ಗೌಡ ಪೋಷಕರ ಜೈಲಿಗೆ ಭೇಟಿ ನೀಡಿದ್ದರು. ಆಗಲೂ ಕೂಡ ಪವಿತ್ರಾ ಅತ್ತರು. ಸರಿಯಾಗಿ ಊಟ, ನಿದ್ರೆ ಮಾಡದೇ ಅವರು ಚಡಪಡಿಸುತ್ತಿದ್ದಾರೆ.

ಇದನ್ನೂ ಓದಿ: ಮಾಧ್ಯಮಗಳ ಕ್ಯಾಮೆರಾ ಕಂಡು ಗರಂ ಆದ ಪವಿತ್ರಾ ಗೌಡ ಸಹೋದರ; ಇಲ್ಲಿದೆ ವಿಡಿಯೋ

ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನು ದರ್ಶನ್​ ಸ್ನೇಹಿತೆ ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್​ ಕಳಿಸಿದ್ದ ಎನ್ನಲಾಗಿದೆ. ಆ ಕಾರಣದಿಂದ ಆತನನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆದುಕೊಂಡು ಬಂದು ಪಟ್ಟಣಗೆರೆ ಶೆಡ್​ನಲ್ಲಿ ಚಿತ್ರಹಿಂಸೆ ನೀಡಿ ಸಾಯಿಸಲಾಯಿತು ಎಂಬ ಆರೋಪ ದರ್ಶನ್​, ಪವಿತ್ರಾ ಗೌಡ ಹಾಗೂ ಸಹಚರರ ಮೇಲಿದೆ. ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಮಲ್ಲನ ಮ್ಯಾಜಿಕ್​ಗೆ ಕರಗಿದ ಸಾಲ್ಟ್
ಮಲ್ಲನ ಮ್ಯಾಜಿಕ್​ಗೆ ಕರಗಿದ ಸಾಲ್ಟ್
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ
ಮನೆ ಮುಂದೆ ಸೈಕಲ್ ಓಡಿಸುತ್ತಿದ್ದ ಬಾಲಕನ ಮೇಲೆ ಹರೀತು ಕಾರು!
ಮನೆ ಮುಂದೆ ಸೈಕಲ್ ಓಡಿಸುತ್ತಿದ್ದ ಬಾಲಕನ ಮೇಲೆ ಹರೀತು ಕಾರು!
ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್
ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್
ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸಪ್ಪ ಗರಂ: ವಿಡಿಯೋ ವೈರಲ್​​
ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸಪ್ಪ ಗರಂ: ವಿಡಿಯೋ ವೈರಲ್​​