ಸೈಲೆಂಟಾಗಿ ಕೆಜಿಎಫ್​-2 ಚಿತ್ರ ತಂಡ ಸೇರಿಕೊಂಡ ಮತ್ತೋರ್ವ ಬಾಲಿವುಡ್​ ನಟಿ

ಕೆಜಿಎಫ್​ ಮೊದಲ ಚಾಪ್ಟರ್​ನಲ್ಲಿ ಕನ್ನಡದಲ್ಲಿ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಹೆಜ್ಜೆ ಹಾಕಿದ್ದರು. ಬಾಲಿವುಡ್​ನಲ್ಲಿ ಮೌನಿ ರಾಯ್​ ಸೊಂಟ ಬಳುಕಿಸಿದ್ದರು.

ಸೈಲೆಂಟಾಗಿ ಕೆಜಿಎಫ್​-2 ಚಿತ್ರ ತಂಡ ಸೇರಿಕೊಂಡ ಮತ್ತೋರ್ವ ಬಾಲಿವುಡ್​ ನಟಿ
ನೂರಾ ಫತೇಹಿ-ಯಶ್
Follow us
|

Updated on: Apr 28, 2021 | 9:32 PM

ಕೆಜಿಎಫ್​-2 ಸಿನಿಮಾ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಈಗಾಗಲೇ ಶೂಟಿಂಗ್​ ಪೂರ್ಣಗೊಳಿಸಿರುವ ಚಿತ್ರತಂಡ ಪೋಸ್ಟ್​ ಪ್ರೊಡಕ್ಷನ್​ ಕೆಲಸದಲ್ಲಿ ತೊಡಗಿಕೊಂಡಿದೆ.ಈ ಮಧ್ಯೆ ಚಿತ್ರತಂಡದಿಂದ ಹೊಸ ವಿಚಾರವೊಂದು ಹೊರ ಬಿದ್ದಿದೆ. ಕೆಜಿಎಫ್​-2 ಚಿತ್ರದಲ್ಲಿ ಬಾಲಿವುಡ್​ ನಟಿ ಹೆಜ್ಜೆ ಹಾಕಲಿದ್ದಾರಂತೆ! ಅಚ್ಚರಿ ಎಂದರೆ ಈಗಾಗಲೇ ಹಾಡಿನ ಶೂಟಿಂಗ್​ ಕೂಡ ಪೂರ್ಣಗೊಂಡಿದೆ.

ಕೆಜಿಎಫ್​ ಮೊದಲ ಚಾಪ್ಟರ್​ನಲ್ಲಿ ಕನ್ನಡದಲ್ಲಿ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಹೆಜ್ಜೆ ಹಾಕಿದ್ದರು. ಬಾಲಿವುಡ್​ನಲ್ಲಿ ಮೌನಿ ರಾಯ್​ ಸೊಂಟ ಬಳುಕಿಸಿದ್ದರು. ಈ ವಿಶೇಷ ಹಾಡಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು. ಹೀಗಾಗಿ, ಚಾಪ್ಟರ್​ 2ನಲ್ಲೂ ಐಟಂ ಸಾಂಗ್ ಇಡೋ ಆಲೋಚನೆ ಚಿತ್ರತಂಡದ್ದು. ಇದಕ್ಕಾಗಿ, ಹಿಂದಿಯ ನೂರಾ ಫತೇಹಿ ಅವರನ್ನು ಕರೆಸಿದೆ ಚಿತ್ರತಂಡ.

ಫೆಬ್ರವರಿ ತಿಂಗಳಲ್ಲಿ ನೂರಾ ಹೈದರಾಬಾದ್​ಗೆ ಪ್ರಯಾಣ ಬೆಳೆಸಿದ್ದರು. ಈ ವೇಳೆ ಚಿತ್ರದ ವಿಶೇಷ ಹಾಡು ಶೂಟ್​ ಮಾಡಲಾಗಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಚಿತ್ರತಂಡ ಯಾವುದೇ ಮಾಹಿತಿಯನ್ನು ಹೊರ ಬಿಟ್ಟು ಕೊಟ್ಟಿಲ್ಲ. ಸದ್ಯ, ಈ ಹಾಡು ಹೇಗಿರಲಿದೆ? ಐದೂ ಭಾಷೆಗಳಿಗೆ ಇದೇ ಹಾಡನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆಯೇ ಎನ್ನುವ ಪ್ರಶ್ನೆ ಅಭಿಮಾನಿಗಳನ್ನು ಕಾಡುತ್ತಿದೆ.

ನೂರಾ ಫತೇಹಿ ಈಗಾಗಲೇ ಸಾಕಷ್ಟು ಬಾಲಿವುಡ್​ ವಿಶೇಷ ಹಾಡುಗಳಿಗೆ ಹೆಜ್ಜೆ ಹಾಕಿದ್ದಾರೆ. ಅವರು ಸೊಂಟ ಬಳುಕಿಸಿದ್ದು ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಅವರು ಈಗ ಕೆಜಿಎಫ್-2​ನಲ್ಲೂ ನಟಿಸುತ್ತಿದ್ದಾರೆ ಎನ್ನುವ ವಿಚಾರ ಸಾಕಷ್ಟು ಕುತೂಹಲ ಮೂಡಿಸಿದೆ.

ಕೊರೊನಾ ಅಬ್ಬರ ಹೀಗೆಯೇ ಮುಂದುವರಿದರೆ ಕೆಜಿಎಫ್​ 2 ರಿಲೀಸ್​ ದಿನಾಂಕ ಮುಂದೂಡಲ್ಪಡಲಿದೆ ಎನ್ನಲಾಗುತ್ತಿದೆ. ಯಶ್​ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡರೆ, ಶ್ರೀನಿಧಿ ಶೆಟ್ಟಿ ಚಿತ್ರದ ನಾಯಕಿ. ಈ ಸಿನಿಮಾದಲ್ಲಿ ಬಾಲಿವುಡ್​ ಸ್ಟಾರ್​ ನಟ ಸಂಜಯ್​ ದತ್​ ಮುಖ್ಯ ವಿಲನ್​ ಆಗಿ ನಟಿಸಿದ್ದಾರೆ. ಕೆಜಿಎಫ್​-2 ಬಾಕ್ಸ್​ ಆಫೀಸ್​ ಗಳಿಕೆಯಲ್ಲಿ ಹೊಸ ದಾಖಲೆ ಮಾಡುವ ಸಾಧ್ಯತೆ ಇದೆ.​​

ಇದನ್ನೂ ಓದಿ: KGF Release Date: ಕೆಜಿಎಫ್-2 ಬಿಡುಗಡೆಗೆ ಕೊರೊನಾ ಅಡ್ಡಗಾಲು; ರಿಲೀಸ್​ ದಿನಾಂಕ ಮುಂದೂಡೋದು ಖಚಿತ?

ಕೆಜಿಎಫ್​-2 ಹಿಂದಿ ಅವತರಣಿಕೆ​ಗೆ ಯಶ್​ ಡಬ್​ ಮಾಡ್ತಾರಾ?; ಇಲ್ಲಿದೆ ಉತ್ತರ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!