AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ‘ಕನ್ನಡ್​’ ಎಂದರೆ ಸಹಿಸಲ್ಲ ಸುದೀಪ್​; ಹಿಂದಿ ಮಂದಿಗೆ ಕಿಚ್ಚ ಖಡಕ್​ ತಿರುಗೇಟು ನೀಡಿದ ವಿಡಿಯೋ ವೈರಲ್​

Kichcha Sudeep Viral Video: ಭಾಷಾಭಿಮಾನದ ವಿಷಯದಲ್ಲಿ ಕಿಚ್ಚ ಸುದೀಪ್​ ಅವರು ಸದಾ ಮುಂದಿರುತ್ತಾರೆ. ಯಾವುದೇ ವೇದಿಕೆಯಲ್ಲೂ ಆ ಬಗ್ಗೆ ಧ್ವನಿ ಎತ್ತಲು ಅವರು ಹಿಂದೇಟು ಹಾಕುವುದಿಲ್ಲ.

Kichcha Sudeep: ‘ಕನ್ನಡ್​’ ಎಂದರೆ ಸಹಿಸಲ್ಲ ಸುದೀಪ್​; ಹಿಂದಿ ಮಂದಿಗೆ ಕಿಚ್ಚ ಖಡಕ್​ ತಿರುಗೇಟು ನೀಡಿದ ವಿಡಿಯೋ ವೈರಲ್​
ಕಿಚ್ಚ ಸುದೀಪ್
TV9 Web
| Edited By: |

Updated on:Aug 03, 2022 | 10:29 AM

Share

ಪ್ಯಾನ್​ ಇಂಡಿಯಾ ಹೀರೋ ಆಗಿ ಕಿಚ್ಚ ಸುದೀಪ್​ (Kichcha Sudeep) ಅವರು ಮಿಂಚುತ್ತಿದ್ದಾರೆ. ದೇಶಾದ್ಯಂತ ಅವರ ಜನಪ್ರಿಯತೆ ಹೆಚ್ಚಿದೆ. ಜುಲೈ 28ರಂದು ರಿಲೀಸ್​ ಆದ ‘ವಿಕ್ರಾಂತ್​ ರೋಣ’ (Vikrant Rona) ಸಿನಿಮಾ ಎಲ್ಲೆಡೆ ಉತ್ತಮ ಪ್ರದರ್ಶನ ಕಂಡಿದೆ. ಕರ್ನಾಟಕ ಮಾತ್ರವಲ್ಲದೇ ಹೊರರಾಜ್ಯದ ಸಿನಿಪ್ರಿಯರು ಕೂಡ ಈ ಚಿತ್ರಕ್ಕೆ ಉತ್ತಮ ಸ್ಪಂದನೆ ನೀಡಿದ್ದಾರೆ. ಈ ಚಿತ್ರದ ಪ್ರಚಾರದ ವೇಳೆ ಸುದೀಪ್​ ಅವರು ಅನೇಕ ಮಾಧ್ಯಮಗಳಿಗೆ ಸಂದರ್ಶನ ನೀಡಿದ್ದಾರೆ. ಉತ್ತರ ಭಾರತದ ಹಲವು ಮಾಧ್ಯಮಗಳು ಕಿಚ್ಚನ ಸಂದರ್ಶನ ನಡೆಸಿವೆ. ಈ ವೇಳೆ ‘ಕನ್ನಡ’ (Kannada) ಎನ್ನುವ ಬದಲು ‘ಕನ್ನಡ್​’ ಎಂದ ನಿರೂಪಕಿಗೆ ಸುದೀಪ್​ ಅವರು ಕೂಡಲೇ ಖಡಕ್​ ಉತ್ತರ ನೀಡಿದ್ದಾರೆ. ಸದ್ಯ ಈ ವಿಡಿಯೋ ವೈರಲ್​ ಆಗುತ್ತಿದೆ.

ಭಾಷಾಭಿಮಾನದ ವಿಷಯದಲ್ಲಿ ಕಿಚ್ಚ ಸುದೀಪ್​ ಅವರು ಸದಾ ಮುಂದಿರುತ್ತಾರೆ. ಯಾವುದೇ ವೇದಿಕೆಯಲ್ಲೂ ಆ ಬಗ್ಗೆ ಧ್ವನಿ ಎತ್ತಲು ಅವರು ಹಿಂದೇಟು ಹಾಕುವುದಿಲ್ಲ. ಉತ್ತರ ಭಾರತದ ಮಂದಿ ಮೊದಲಿನಿಂದಲೂ ಕನ್ನಡವನ್ನು ‘ಕನ್ನಡ್​’ ಎಂದು ಹೇಳುವ ಚಾಳಿ ಬೆಳೆಸಿಕೊಂಡಿದ್ದಾರೆ. ಇದು ಸುದೀಪ್​ಗೆ ಕಿಂಚಿತ್ತೂ ಇಷ್ಟ ಆಗುವುದಿಲ್ಲ. ಈ ಹಿಂದೆ ಹಲವು ಬಾರಿ ಅವರು ಈ ಬಗ್ಗೆ ಮಾತನಾಡಿದ್ದುಂಟು. ಈಗ ಅವರ ಒಂದು ಹೊಸ ವಿಡಿಯೋ ವೈರಲ್​ ಆಗಿದೆ. ‘ಕನ್ನಡ್​’ ಎಂದು ಹೇಳಿದ ನಿರೂಪಕಿಗೆ ಸುದೀಪ್​ ಅವರು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ
Image
Bigg Boss OTT: ಬಿಗ್​​ ಬಾಸ್​ ಶೋ ಹಿಂದೆ ಸುದೀಪ್​ಗೆ ಹಲವು ಚಾಲೆಂಜ್​; ವೇದಿಕೆಯಲ್ಲಿ ಎಲ್ಲವನ್ನೂ ವಿವರಿಸಿದ ಕಿಚ್ಚ
Image
Kichcha Sudeep: ಕಿಚ್ಚನ ಹೃದಯವಂತಿಕೆ; ಹಾರ್ಟ್​ ಸಮಸ್ಯೆ ಹೊಂದಿರುವ ಪುಟ್ಟ ಬಾಲಕನನ್ನು ಭೇಟಿಯಾದ ಸುದೀಪ್​
Image
‘ವಿಕ್ರಾಂತ್​ ರೋಣ’ ಸೂಪರ್​ ಹಿಟ್​; ಕಿಚ್ಚ ಸುದೀಪ್​ ಅಭಿಮಾನಿಗಳಿಗೆ ‘ಕಬ್ಜ’ ಮೇಲೆ ಹೆಚ್ಚಿತು ನಿರೀಕ್ಷೆ
Image
ಕ್ರಿಕೆಟ್​ ದಿಗ್ಗಜರಿಂದ ಸಿಕ್ಕ ಗಿಫ್ಟ್​​ಗಳ ಪೂರ್ತಿ ಪಟ್ಟಿ ನೀಡಿದ ಕಿಚ್ಚ ಸುದೀಪ್​; ಇವುಗಳಿಗೆ ಬೆಲೆ ಕಟ್ಟೋಕಾಗಲ್ಲ

ನಿರೂಪಕಿ ‘ಕನ್ನಡ್​’ ಎಂದಾಗ ‘ಅದು ಕನ್ನಡ್​ ಅಲ್ಲ.. ಕನ್ನಡ’ ಎಂದು ಸುದೀಪ್​ ತಿದ್ದಿ ಹೇಳಿದ್ದಾರೆ. ಆ ನಿರೂಪಕಿ ‘ಕ್ಷಮಿಸಿ ಸರ್​..’ ಎಂದು ಕ್ಷಮೆ ಕೇಳಿದರಾದರೂ ತಮ್ಮ ಮಾತನ್ನು ಕೊಂಚ ಸಮರ್ಥಿಸಿಕೊಳ್ಳಲು ಮುಂದಾದರು. ‘ನಾವು ಈಗ ತಾನೇ ಕಲಿಯುತ್ತಿದ್ದೇವೆ ಸರ್​’ ಎಂದು ನಿರೂಪಕಿ ಹೇಳಿದರು. ‘ಹಿಂದಿ ಎಂದಿಗೂ ಹಿಂದ್​ ಆಗುವುದಿಲ್ಲ. ಅದೇ ರೀತಿ ಕನ್ನಡ ಕೂಡ ಕನ್ನಡ್​ ಆಗುವುದಿಲ್ಲ. ನೀವು ತಮಿಳು, ತೆಲುಗು ಎಲ್ಲವನ್ನೂ ಸರಿಯಾಗಿ ಹೇಳಿತ್ತೀರಿ. ಕನ್ನಡದ ವಿಚಾರ ಬಂದಾಗ ಕನ್ನಡ್​ ಎನ್ನುತ್ತೀರಿ. ಭಾಷೆ ಬಿಟ್ಟುಬಿಡಿ, ಕೊನೇ ಪಕ್ಷ ಭಾಷೆಯ ಹೆಸರನ್ನಾದರೂ ಸರಿಯಾಗಿ ಹೇಳಿ’ ಎಂದಿ ಸುದೀಪ್​ ಕ್ಲಾಸ್​ ತೆಗೆದುಕೊಂಡಿದ್ದಾರೆ.

ಯಾವುದೇ ಮುಲಾಜಿಲ್ಲದೇ ಆ ನಿರೂಪಕಿಗೆ ಸ್ಥಳದಲ್ಲೇ ಖಡಕ್​ ಉತ್ತರ ನೀಡಿದ ಕಿಚ್ಚ ಸುದೀಪ್​ ಅವರಿಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸದ್ಯ ಅವರು ‘ವಿಕ್ರಾಂತ್​ ರೋಣ’ ಸಿನಿಮಾದ ಗೆಲುವಿನ ಖುಷಿಯಲ್ಲಿದ್ದಾರೆ. ಕೆಲವೇ ದಿನಗಳ ಹಿಂದೆ ಈ ಚಿತ್ರದ ಸುದ್ದಿಗೋಷ್ಠಿಯಲ್ಲಿ ಪರಭಾಷೆ ವ್ಯಕ್ತಿಯೊಬ್ಬರು ‘ಕನ್ನಡ್​’ ಎಂದಾಗಲೂ ಸುದೀಪ್ ಅವರು ಕೂಡಲೇ ಎಚ್ಚರಿಸಿದ್ದರು.

Published On - 7:21 am, Wed, 3 August 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ