Kichcha Sudeep: ‘ಕನ್ನಡ್​’ ಎಂದರೆ ಸಹಿಸಲ್ಲ ಸುದೀಪ್​; ಹಿಂದಿ ಮಂದಿಗೆ ಕಿಚ್ಚ ಖಡಕ್​ ತಿರುಗೇಟು ನೀಡಿದ ವಿಡಿಯೋ ವೈರಲ್​

Kichcha Sudeep Viral Video: ಭಾಷಾಭಿಮಾನದ ವಿಷಯದಲ್ಲಿ ಕಿಚ್ಚ ಸುದೀಪ್​ ಅವರು ಸದಾ ಮುಂದಿರುತ್ತಾರೆ. ಯಾವುದೇ ವೇದಿಕೆಯಲ್ಲೂ ಆ ಬಗ್ಗೆ ಧ್ವನಿ ಎತ್ತಲು ಅವರು ಹಿಂದೇಟು ಹಾಕುವುದಿಲ್ಲ.

Kichcha Sudeep: ‘ಕನ್ನಡ್​’ ಎಂದರೆ ಸಹಿಸಲ್ಲ ಸುದೀಪ್​; ಹಿಂದಿ ಮಂದಿಗೆ ಕಿಚ್ಚ ಖಡಕ್​ ತಿರುಗೇಟು ನೀಡಿದ ವಿಡಿಯೋ ವೈರಲ್​
ಕಿಚ್ಚ ಸುದೀಪ್
Follow us
| Updated By: Digi Tech Desk

Updated on:Aug 03, 2022 | 10:29 AM

ಪ್ಯಾನ್​ ಇಂಡಿಯಾ ಹೀರೋ ಆಗಿ ಕಿಚ್ಚ ಸುದೀಪ್​ (Kichcha Sudeep) ಅವರು ಮಿಂಚುತ್ತಿದ್ದಾರೆ. ದೇಶಾದ್ಯಂತ ಅವರ ಜನಪ್ರಿಯತೆ ಹೆಚ್ಚಿದೆ. ಜುಲೈ 28ರಂದು ರಿಲೀಸ್​ ಆದ ‘ವಿಕ್ರಾಂತ್​ ರೋಣ’ (Vikrant Rona) ಸಿನಿಮಾ ಎಲ್ಲೆಡೆ ಉತ್ತಮ ಪ್ರದರ್ಶನ ಕಂಡಿದೆ. ಕರ್ನಾಟಕ ಮಾತ್ರವಲ್ಲದೇ ಹೊರರಾಜ್ಯದ ಸಿನಿಪ್ರಿಯರು ಕೂಡ ಈ ಚಿತ್ರಕ್ಕೆ ಉತ್ತಮ ಸ್ಪಂದನೆ ನೀಡಿದ್ದಾರೆ. ಈ ಚಿತ್ರದ ಪ್ರಚಾರದ ವೇಳೆ ಸುದೀಪ್​ ಅವರು ಅನೇಕ ಮಾಧ್ಯಮಗಳಿಗೆ ಸಂದರ್ಶನ ನೀಡಿದ್ದಾರೆ. ಉತ್ತರ ಭಾರತದ ಹಲವು ಮಾಧ್ಯಮಗಳು ಕಿಚ್ಚನ ಸಂದರ್ಶನ ನಡೆಸಿವೆ. ಈ ವೇಳೆ ‘ಕನ್ನಡ’ (Kannada) ಎನ್ನುವ ಬದಲು ‘ಕನ್ನಡ್​’ ಎಂದ ನಿರೂಪಕಿಗೆ ಸುದೀಪ್​ ಅವರು ಕೂಡಲೇ ಖಡಕ್​ ಉತ್ತರ ನೀಡಿದ್ದಾರೆ. ಸದ್ಯ ಈ ವಿಡಿಯೋ ವೈರಲ್​ ಆಗುತ್ತಿದೆ.

ಭಾಷಾಭಿಮಾನದ ವಿಷಯದಲ್ಲಿ ಕಿಚ್ಚ ಸುದೀಪ್​ ಅವರು ಸದಾ ಮುಂದಿರುತ್ತಾರೆ. ಯಾವುದೇ ವೇದಿಕೆಯಲ್ಲೂ ಆ ಬಗ್ಗೆ ಧ್ವನಿ ಎತ್ತಲು ಅವರು ಹಿಂದೇಟು ಹಾಕುವುದಿಲ್ಲ. ಉತ್ತರ ಭಾರತದ ಮಂದಿ ಮೊದಲಿನಿಂದಲೂ ಕನ್ನಡವನ್ನು ‘ಕನ್ನಡ್​’ ಎಂದು ಹೇಳುವ ಚಾಳಿ ಬೆಳೆಸಿಕೊಂಡಿದ್ದಾರೆ. ಇದು ಸುದೀಪ್​ಗೆ ಕಿಂಚಿತ್ತೂ ಇಷ್ಟ ಆಗುವುದಿಲ್ಲ. ಈ ಹಿಂದೆ ಹಲವು ಬಾರಿ ಅವರು ಈ ಬಗ್ಗೆ ಮಾತನಾಡಿದ್ದುಂಟು. ಈಗ ಅವರ ಒಂದು ಹೊಸ ವಿಡಿಯೋ ವೈರಲ್​ ಆಗಿದೆ. ‘ಕನ್ನಡ್​’ ಎಂದು ಹೇಳಿದ ನಿರೂಪಕಿಗೆ ಸುದೀಪ್​ ಅವರು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ
Image
Bigg Boss OTT: ಬಿಗ್​​ ಬಾಸ್​ ಶೋ ಹಿಂದೆ ಸುದೀಪ್​ಗೆ ಹಲವು ಚಾಲೆಂಜ್​; ವೇದಿಕೆಯಲ್ಲಿ ಎಲ್ಲವನ್ನೂ ವಿವರಿಸಿದ ಕಿಚ್ಚ
Image
Kichcha Sudeep: ಕಿಚ್ಚನ ಹೃದಯವಂತಿಕೆ; ಹಾರ್ಟ್​ ಸಮಸ್ಯೆ ಹೊಂದಿರುವ ಪುಟ್ಟ ಬಾಲಕನನ್ನು ಭೇಟಿಯಾದ ಸುದೀಪ್​
Image
‘ವಿಕ್ರಾಂತ್​ ರೋಣ’ ಸೂಪರ್​ ಹಿಟ್​; ಕಿಚ್ಚ ಸುದೀಪ್​ ಅಭಿಮಾನಿಗಳಿಗೆ ‘ಕಬ್ಜ’ ಮೇಲೆ ಹೆಚ್ಚಿತು ನಿರೀಕ್ಷೆ
Image
ಕ್ರಿಕೆಟ್​ ದಿಗ್ಗಜರಿಂದ ಸಿಕ್ಕ ಗಿಫ್ಟ್​​ಗಳ ಪೂರ್ತಿ ಪಟ್ಟಿ ನೀಡಿದ ಕಿಚ್ಚ ಸುದೀಪ್​; ಇವುಗಳಿಗೆ ಬೆಲೆ ಕಟ್ಟೋಕಾಗಲ್ಲ

ನಿರೂಪಕಿ ‘ಕನ್ನಡ್​’ ಎಂದಾಗ ‘ಅದು ಕನ್ನಡ್​ ಅಲ್ಲ.. ಕನ್ನಡ’ ಎಂದು ಸುದೀಪ್​ ತಿದ್ದಿ ಹೇಳಿದ್ದಾರೆ. ಆ ನಿರೂಪಕಿ ‘ಕ್ಷಮಿಸಿ ಸರ್​..’ ಎಂದು ಕ್ಷಮೆ ಕೇಳಿದರಾದರೂ ತಮ್ಮ ಮಾತನ್ನು ಕೊಂಚ ಸಮರ್ಥಿಸಿಕೊಳ್ಳಲು ಮುಂದಾದರು. ‘ನಾವು ಈಗ ತಾನೇ ಕಲಿಯುತ್ತಿದ್ದೇವೆ ಸರ್​’ ಎಂದು ನಿರೂಪಕಿ ಹೇಳಿದರು. ‘ಹಿಂದಿ ಎಂದಿಗೂ ಹಿಂದ್​ ಆಗುವುದಿಲ್ಲ. ಅದೇ ರೀತಿ ಕನ್ನಡ ಕೂಡ ಕನ್ನಡ್​ ಆಗುವುದಿಲ್ಲ. ನೀವು ತಮಿಳು, ತೆಲುಗು ಎಲ್ಲವನ್ನೂ ಸರಿಯಾಗಿ ಹೇಳಿತ್ತೀರಿ. ಕನ್ನಡದ ವಿಚಾರ ಬಂದಾಗ ಕನ್ನಡ್​ ಎನ್ನುತ್ತೀರಿ. ಭಾಷೆ ಬಿಟ್ಟುಬಿಡಿ, ಕೊನೇ ಪಕ್ಷ ಭಾಷೆಯ ಹೆಸರನ್ನಾದರೂ ಸರಿಯಾಗಿ ಹೇಳಿ’ ಎಂದಿ ಸುದೀಪ್​ ಕ್ಲಾಸ್​ ತೆಗೆದುಕೊಂಡಿದ್ದಾರೆ.

ಯಾವುದೇ ಮುಲಾಜಿಲ್ಲದೇ ಆ ನಿರೂಪಕಿಗೆ ಸ್ಥಳದಲ್ಲೇ ಖಡಕ್​ ಉತ್ತರ ನೀಡಿದ ಕಿಚ್ಚ ಸುದೀಪ್​ ಅವರಿಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸದ್ಯ ಅವರು ‘ವಿಕ್ರಾಂತ್​ ರೋಣ’ ಸಿನಿಮಾದ ಗೆಲುವಿನ ಖುಷಿಯಲ್ಲಿದ್ದಾರೆ. ಕೆಲವೇ ದಿನಗಳ ಹಿಂದೆ ಈ ಚಿತ್ರದ ಸುದ್ದಿಗೋಷ್ಠಿಯಲ್ಲಿ ಪರಭಾಷೆ ವ್ಯಕ್ತಿಯೊಬ್ಬರು ‘ಕನ್ನಡ್​’ ಎಂದಾಗಲೂ ಸುದೀಪ್ ಅವರು ಕೂಡಲೇ ಎಚ್ಚರಿಸಿದ್ದರು.

Published On - 7:21 am, Wed, 3 August 22