AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sreeleela: ಟಾಲಿವುಡ್​ಗೆ ಹೋಗಿ ರಶ್ಮಿಕಾ ಮಂದಣ್ಣ ಮಾಡಿದ ತಪ್ಪು ಮಾಡಲಿಲ್ಲ ಕನ್ನಡತಿ ಶ್ರೀಲೀಲಾ

ಇಂದು (ಡಿಸೆಂಬರ್ 23) ಅವರ ನಟನೆಯ ‘ಧಮಾಕಾ’ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರದ ಪ್ರಚಾರಕ್ಕಾಗಿ ಸಾಕಷ್ಟು ಮಾಧ್ಯಮಗಳಿಗೆ ಶ್ರೀಲೀಲಾ ಸಂದರ್ಶನ ನೀಡಿದ್ದಾರೆ. ಈ ವೇಳೆ ಅವರಿಗೆ ‘ಕಾಂತಾರ’ ಬಗ್ಗೆ ಪ್ರಶ್ನೆ ಎದುರಾಗಿದೆ.

Sreeleela: ಟಾಲಿವುಡ್​ಗೆ ಹೋಗಿ ರಶ್ಮಿಕಾ ಮಂದಣ್ಣ ಮಾಡಿದ ತಪ್ಪು ಮಾಡಲಿಲ್ಲ ಕನ್ನಡತಿ ಶ್ರೀಲೀಲಾ
ರಶ್ಮಿಕಾ-ಶ್ರೀಲೀಲಾ
TV9 Web
| Edited By: |

Updated on: Dec 23, 2022 | 6:30 AM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಸದ್ಯಕ್ಕಂತೂ ಕನ್ನಡ ಚಿತ್ರರಂಗಕ್ಕೆ ಮರಳೋದು ಅನುಮಾನವೇ. ಇದಕ್ಕೆ ಪ್ರಮುಖ ಕಾರಣ ಕನ್ನಡ ಸಿನಿಮಾ ಬಗ್ಗೆ ಹಾಗೂ ಕನ್ನಡ ಭಾಷೆ ಬಗ್ಗೆ ಅವರು ಆಡಿದ ಮಾತುಗಳು. ಇನ್ನು, ರಶ್ಮಿಕಾ ಮಂದಣ್ಣ ಸಂಭಾವನೆ ಹೆಚ್ಚಿಸಿಕೊಂಡಿದ್ದಾರೆ. ಪ್ರತಿ ಚಿತ್ರಕ್ಕೆ ಕೋಟಿ ಕೋಟಿ ಹಣ ಪಡೆಯುತ್ತಾರೆ. ಅವರನ್ನು ಆಯ್ಕೆ ಮಾಡಿಕೊಂಡರೆ ಸಿನಿಮಾ ಬಜೆಟ್ ಹೆಚ್ಚಲಿದೆ. ಕನ್ನಡದ ನಟಿ ಶ್ರೀಲೀಲಾ (Sreeleela) ಕೂಡ ಟಾಲಿವುಡ್​​ಗೆ ಹಾರಿದ್ದಾರೆ. ಆದರೆ, ಅವರು ರಶ್ಮಿಕಾ ಮಂದಣ್ಣ ಮಾಡಿದ ತಪ್ಪನ್ನು ಮಾಡಿಲ್ಲ.

ಶ್ರೀಲೀಲಾ ಅವರು ಕನ್ನಡದ ‘ಕಿಸ್​’ ಚಿತ್ರದಲ್ಲಿ ನಟಿಸಿ ಫೇಮಸ್ ಆದರು. ಬಳಿಕ ‘ಭರಾಟೆ’ ಚಿತ್ರಕ್ಕೆ ಹೀರೋಯಿನ್ ಆದರು. ತೆಲುಗಿನಲ್ಲಿ ನಟಿಸಿದ ಮೊದಲ ಸಿನಿಮಾ ‘ಪೆಳ್ಳಿ ಸಂದಡಿ’ ಸೂಪರ್ ಹಿಟ್ ಆಯಿತು. ಇಂದು (ಡಿಸೆಂಬರ್ 23) ಅವರ ನಟನೆಯ ‘ಧಮಾಕಾ’ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರದ ಪ್ರಚಾರಕ್ಕಾಗಿ ಸಾಕಷ್ಟು ಮಾಧ್ಯಮಗಳಿಗೆ ಶ್ರೀಲೀಲಾ ಸಂದರ್ಶನ ನೀಡಿದ್ದಾರೆ. ಈ ವೇಳೆ ಅವರಿಗೆ ‘ಕಾಂತಾರ’ ಬಗ್ಗೆ ಪ್ರಶ್ನೆ ಎದುರಾಗಿದೆ. ಈ ಪ್ರಶ್ನೆಗೆ ಖುಷಿಯಿಂದಲೇ ಉತ್ತರಿಸಿದ್ದಾರೆ ಅವರು.

‘ನೀವು ಕಾಂತಾರ ನೋಡಿದ್ದೀರಾ’ ಎಂದು ಶ್ರೀಲೀಲಾಗೆ ಪ್ರಶ್ನೆ ಮಾಡಲಾಯಿತು. ‘ನಾನು ಕಾಂತಾರ ಚಿತ್ರವನ್ನು ವೀಕ್ಷಿಸಿದ್ದೇನೆ. ಸಿನಿಮಾ ಅದ್ಭುತವಾಗಿದೆ. ನಾನು ಕರ್ನಾಟಕದವಳು. ಕನ್ನಡ ಸಿನಿಮಾಗಳ ವ್ಯಾಪ್ತಿ ಹೆಚ್ಚಿರುವ ಬಗ್ಗೆ ನನಗೆ ತುಂಬಾ ಸಂತಸ ಇದೆ. ಅದು ಹೆಮ್ಮೆಯ ಕ್ಷಣ. ನಾವು ವಿಶಾಲ ಹೃದಯದವರು’ ಎಂದು ‘ಧಮಾಕಾ’ ಚಿತ್ರದ ಪ್ರಚಾರದ ಸಂದರ್ಭದಲ್ಲಿ ಶ್ರೀಲೀಲಾ ಹೇಳಿದ್ದಾರೆ.

ಇದನ್ನೂ ಓದಿ
Image
ತೆಗೆದುಕೊಂಡ ತಪ್ಪು ನಿರ್ಧಾರದಿಂದ ಶ್ರೀಲೀಲಾಗೆ ಹಿನ್ನಡೆ; ಮಹೇಶ್ ಬಾಬು ಸಿನಿಮಾ ಒಪ್ಪಿಕೊಂಡಿದ್ದೇ ತಪ್ಪಾಯ್ತಾ?
Image
Sreeleela: ಅಲ್ಲು ಅರ್ಜುನ್​ ಜತೆ ತೆರೆ ಹಂಚಿಕೊಂಡ ಶ್ರೀಲೀಲಾ; ಇಲ್ಲಿದೆ ಇಂಟರೆಸ್ಟಿಂಗ್​ ಅಪ್​ಡೇಟ್​
Image
ಗಂಡನ ಮನೆಯ ಬೀಗ ಮುರಿದ ಶ್ರೀಲೀಲಾ ತಾಯಿ ಸ್ವರ್ಣಲತಾ; ಇಲ್ಲಿದೆ ವಿಡಿಯೋ

ಇದನ್ನೂ ಓದಿ:  ರಶ್ಮಿಕಾ ಮಂದಣ್ಣ ಇನ್​ಸ್ಟಾಗ್ರಾಮ್​ ಖಾತೆ ಹ್ಯಾಕ್​ ಆಯ್ತಾ? ಉಲ್ಟಾ ಅಕ್ಷರದ ಅಸಲಿ ವಿಷಯ ಇಲ್ಲಿದೆ..

ಈ ಮೊದಲು ರಶ್ಮಿಕಾಗೂ ‘ಕಾಂತಾರ’ ಚಿತ್ರದ ಬಗ್ಗೆ ಪ್ರಶ್ನೆ ಮಾಡಲಾಗಿತ್ತು. ಇದಕ್ಕೆ ಅವರು ‘ನಾನು ಕಾಂತಾರ ಸಿನಿಮಾ ನೋಡಿಲ್ಲ’ ಎಂದು ಧಿಮಾಕಿನ ಉತ್ತರ ನೀಡಿದ್ದರು. ‘ಪುಷ್ಪ’ ರಿಲೀಸ್ ಸಂದರ್ಭದಲ್ಲಿ ಕನ್ನಡ ಭಾಷೆಯಲ್ಲಿ ಏಕೆ ಡಬ್ ಮಾಡಿಲ್ಲ ಎಂದು ಕೇಳಿದ್ದಕ್ಕೆ ‘ಸಮಯ ಇಲ್ಲ’ ಎಂಬ ಉತ್ತರ ಅವರ ಕಡೆಯಿಂದ ಬಂದಿತ್ತು. ಯೂಟ್ಯೂಬ್​ಗೆ ನೀಡಿದ ಸಂದರ್ಶನದಲ್ಲಿ ‘ನನಗೆ ಕನ್ನಡ ಸರಿಯಾಗಿ ಬರುವುದಿಲ್ಲ’ ಎಂದು ರಶ್ಮಿಕಾ ಹೇಳಿದ್ದರು. ಇದಕ್ಕಾಗಿ ಅವರು ಟೀಕೆ ಅನುಭವಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ