AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಟ್ ಲ್ಯಾಗ್ ಪಾರ್ಟಿ ಪ್ರಕರಣ: ದರ್ಶನ್, ಅಭಿಷೇಕ್​ಗೆ ಪೊಲೀಸರ ನೋಟಿಸ್

ಇತ್ತೀಚೆಗೆ ‘ಕಾಟೇರ’ ಸಿನಿಮಾ ರಿಲೀಸ್ ಆಗಿ ಗೆದ್ದಿತು. ಅದರ‌ ಸಕ್ಸಸ್ ಸೆಲೆಬ್ರೇಷನ್ ಬಳಿಕ ದರ್ಶನ್, ಅಭಿಷೇಕ್ ಅಂಬರೀಷ್, ಧನಂಜಯ್ ಸೇರಿ ಅನೇಕರು ಬೆಂಗಳೂರಿನ ಒರಾಯನ್‌ ಮಾಲ್ ಬಳಿ ಇರುವ ಜೆಟ್ ಲ್ಯಾಗ್ ಪಬ್​​ನಲ್ಲಿ ಪಾರ್ಟಿ ಮಾಡಿದ್ದರು.

ಜೆಟ್ ಲ್ಯಾಗ್ ಪಾರ್ಟಿ ಪ್ರಕರಣ: ದರ್ಶನ್, ಅಭಿಷೇಕ್​ಗೆ ಪೊಲೀಸರ ನೋಟಿಸ್
ದರ್ಶನ್​
Jagadisha B
| Updated By: ರಾಜೇಶ್ ದುಗ್ಗುಮನೆ|

Updated on:Jan 08, 2024 | 12:26 PM

Share

ಇತ್ತೀಚೆಗೆ ಜೆಟ್​ ​ಲ್ಯಾಗ್ ಪಬ್​ನಲ್ಲಿ ದರ್ಶನ್ (Darshan), ಅಭಿಷೇಕ್ ಅಂಬರೀಷ್ ಸೇರಿ ಅನೇಕ ಸೆಲೆಬ್ರೆಟಿಗಳು ಮುಂಜಾನೆವರೆಗೆ ಪಾರ್ಟಿ ಮಾಡಿದ್ದರು. ಈ ಪ್ರಕರಣ ಸಾಕಷ್ಟು ಸುದ್ದಿ ಆಗಿತ್ತು. ಈ ಪ್ರಕರಣದಲ್ಲಿ ಪಬ್ ವಿರುದ್ಧ ಕೇಸ್ ದಾಖಲಾಗಿತ್ತು. ಈ ಪಾರ್ಟಿಯಲ್ಲಿ ಭಾಗಿ ಆದ ನಟ ದರ್ಶನ್, ಅಭಿಷೇಕ್, ನಿರ್ಮಾಪಕ ರಾಕ್​ಲೈನ್ ವೆಂಕಟೇಶ್​ಗೆ ನೋಟಿಸ್ ಜಾರಿ ಆಗಿದೆ. ಸುಬ್ರಹ್ಮಣ್ಯನಗರ ಇನ್ಸ್​ಪೆಕ್ಟರ್​ ಸುರೇಶ್ ಅವ​ರಿಂದ ಮೂವರಿಗೂ ನೋಟಿಸ್ ಜಾರಿ ಆಗಿದೆ. ನಟರಾದ ಡಾಲಿ ಧನಂಜಯ್, ಚಿಕ್ಕಣ್ಣ, ನಿನಾಸಂ ಸತೀಶ್ ಹಾಗೂ ನಿರ್ದೇಶಕ ತರುಣ್ ಸುಧೀರ್​ಗೆ ನೋಟಿಸ್​ ನೀಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಏನಿದು ಪ್ರಕರಣ?

ಇತ್ತೀಚೆಗೆ ‘ಕಾಟೇರ’ ಸಿನಿಮಾ ರಿಲೀಸ್ ಆಗಿ ಗೆದ್ದಿತು. ಅದರ‌ ಸಕ್ಸಸ್ ಸೆಲೆಬ್ರೇಷನ್ ಬಳಿಕ ದರ್ಶನ್, ಅಭಿಷೇಕ್ ಅಂಬರೀಷ್, ಧನಂಜಯ್ ಸೇರಿ ಅನೇಕರು ಬೆಂಗಳೂರಿನ ಒರಾಯನ್‌ ಮಾಲ್ ಬಳಿ ಇರುವ ಜೆಟ್ ಲ್ಯಾಗ್ ಪಬ್​​ನಲ್ಲಿ ಪಾರ್ಟಿ ಮಾಡಿದ್ದರು. ಜನವರಿ‌ 3ರಂದು‌ ರಾತ್ರಿ‌ ಪಬ್​ಗೆ ಇವರು ಬೆಳಗಿನಜಾವದವರೆಗೆ ಪಾರ್ಟಿ ಮಾಡಿದ್ದರು. ನಿಯಮದ ಪ್ರಕಾರ ತಡರಾತ್ರಿ 1 ಗಂಟೆವರೆಗೆ ಮಾತ್ರ ಪಬ್ ಓಪನ್ ಇಡಲು ಅವಕಾಶ ಇದೆ. ಆದರೆ, ನಿಯಮವನ್ನು ಇಲ್ಲಿ ಮೀರಲಾಗಿದೆ.

ಇದನ್ನೂ ಓದಿ: ಸಿನಿಮಾ ಸಕ್ಸಸ್​​ ಖುಷಿಯಲ್ಲಿ ಮುಂಜಾನೆವರೆಗೂ ಸ್ಟಾರ್ ಹೀರೋ ಪಾರ್ಟಿ; ಪಬ್ ವಿರುದ್ಧ ಎಫ್​ಐಆರ್  

ಯಾರಿಗೆ ನೋಟಿಸ್?

ಈಗಾಗಲೇ ದರ್ಶನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನಟ ಅಭಿಷೇಕ್ ಅಂಬರೀಷ್​ಗೆ ನೋಟಿಸ್ ತಲುಪಿದೆ. ಪಾರ್ಟಿಯಲ್ಲಿ ಭಾಗಿ ಆಗಿದ್ದ ನಟ ಡಾಲಿ ಧನುಂಜಯ್, ನಟ ಚಿಕ್ಕಣ್ಣ, ನಿನಾಸಂ ಸತೀಶ್, ಡೈರಕ್ಟರ್ ತರುಣ್ ಸುಧೀರ್, ಸಂಗೀತ ನಿರ್ದೇಶಕ ಹರಿಕೃಷ್ಣ ಅವರಿಗೆ ನೋಟಿಸ್ ನೀಡಲು ಸಿದ್ಧತೆ ನಡೆದಿದೆ. ಸದ್ಯ ಚಿತ್ರತಂಡ ವಿದೇಶದಲ್ಲಿದೆ ಎನ್ನಲಾಗಿದೆ.

ಸಂಚಾರಕ್ಕೆ ಅಡಚಣೆ

ಅಭಿಮಾನಿಗಳು ಸ್ಟಾರ್ ನಟನ ನೋಡಲು ಮುಂಜಾನೆಯೂ ಆಗಮಿಸಿದ್ದರು. ಹೀರೋಗಳು ರಸ್ತೆ ಮೇಲೆಯೇ‌ ಕಾರು ನಿಲ್ಲಿಸಿ ಸಂಚಾರಕ್ಕೆ ಅಡಚಣೆ ಮಾಡಿದ್ದರು ಎನ್ನಲಾಗಿದೆ. ಸ್ಟಾರ್ಸ್ ಚಲನವಲನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ ಆಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:23 pm, Mon, 8 January 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!