AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಟ್ ಲ್ಯಾಗ್ ಪಾರ್ಟಿ ಪ್ರಕರಣ: ದರ್ಶನ್, ಅಭಿಷೇಕ್​ಗೆ ಪೊಲೀಸರ ನೋಟಿಸ್

ಇತ್ತೀಚೆಗೆ ‘ಕಾಟೇರ’ ಸಿನಿಮಾ ರಿಲೀಸ್ ಆಗಿ ಗೆದ್ದಿತು. ಅದರ‌ ಸಕ್ಸಸ್ ಸೆಲೆಬ್ರೇಷನ್ ಬಳಿಕ ದರ್ಶನ್, ಅಭಿಷೇಕ್ ಅಂಬರೀಷ್, ಧನಂಜಯ್ ಸೇರಿ ಅನೇಕರು ಬೆಂಗಳೂರಿನ ಒರಾಯನ್‌ ಮಾಲ್ ಬಳಿ ಇರುವ ಜೆಟ್ ಲ್ಯಾಗ್ ಪಬ್​​ನಲ್ಲಿ ಪಾರ್ಟಿ ಮಾಡಿದ್ದರು.

ಜೆಟ್ ಲ್ಯಾಗ್ ಪಾರ್ಟಿ ಪ್ರಕರಣ: ದರ್ಶನ್, ಅಭಿಷೇಕ್​ಗೆ ಪೊಲೀಸರ ನೋಟಿಸ್
ದರ್ಶನ್​
Jagadisha B
| Edited By: |

Updated on:Jan 08, 2024 | 12:26 PM

Share

ಇತ್ತೀಚೆಗೆ ಜೆಟ್​ ​ಲ್ಯಾಗ್ ಪಬ್​ನಲ್ಲಿ ದರ್ಶನ್ (Darshan), ಅಭಿಷೇಕ್ ಅಂಬರೀಷ್ ಸೇರಿ ಅನೇಕ ಸೆಲೆಬ್ರೆಟಿಗಳು ಮುಂಜಾನೆವರೆಗೆ ಪಾರ್ಟಿ ಮಾಡಿದ್ದರು. ಈ ಪ್ರಕರಣ ಸಾಕಷ್ಟು ಸುದ್ದಿ ಆಗಿತ್ತು. ಈ ಪ್ರಕರಣದಲ್ಲಿ ಪಬ್ ವಿರುದ್ಧ ಕೇಸ್ ದಾಖಲಾಗಿತ್ತು. ಈ ಪಾರ್ಟಿಯಲ್ಲಿ ಭಾಗಿ ಆದ ನಟ ದರ್ಶನ್, ಅಭಿಷೇಕ್, ನಿರ್ಮಾಪಕ ರಾಕ್​ಲೈನ್ ವೆಂಕಟೇಶ್​ಗೆ ನೋಟಿಸ್ ಜಾರಿ ಆಗಿದೆ. ಸುಬ್ರಹ್ಮಣ್ಯನಗರ ಇನ್ಸ್​ಪೆಕ್ಟರ್​ ಸುರೇಶ್ ಅವ​ರಿಂದ ಮೂವರಿಗೂ ನೋಟಿಸ್ ಜಾರಿ ಆಗಿದೆ. ನಟರಾದ ಡಾಲಿ ಧನಂಜಯ್, ಚಿಕ್ಕಣ್ಣ, ನಿನಾಸಂ ಸತೀಶ್ ಹಾಗೂ ನಿರ್ದೇಶಕ ತರುಣ್ ಸುಧೀರ್​ಗೆ ನೋಟಿಸ್​ ನೀಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಏನಿದು ಪ್ರಕರಣ?

ಇತ್ತೀಚೆಗೆ ‘ಕಾಟೇರ’ ಸಿನಿಮಾ ರಿಲೀಸ್ ಆಗಿ ಗೆದ್ದಿತು. ಅದರ‌ ಸಕ್ಸಸ್ ಸೆಲೆಬ್ರೇಷನ್ ಬಳಿಕ ದರ್ಶನ್, ಅಭಿಷೇಕ್ ಅಂಬರೀಷ್, ಧನಂಜಯ್ ಸೇರಿ ಅನೇಕರು ಬೆಂಗಳೂರಿನ ಒರಾಯನ್‌ ಮಾಲ್ ಬಳಿ ಇರುವ ಜೆಟ್ ಲ್ಯಾಗ್ ಪಬ್​​ನಲ್ಲಿ ಪಾರ್ಟಿ ಮಾಡಿದ್ದರು. ಜನವರಿ‌ 3ರಂದು‌ ರಾತ್ರಿ‌ ಪಬ್​ಗೆ ಇವರು ಬೆಳಗಿನಜಾವದವರೆಗೆ ಪಾರ್ಟಿ ಮಾಡಿದ್ದರು. ನಿಯಮದ ಪ್ರಕಾರ ತಡರಾತ್ರಿ 1 ಗಂಟೆವರೆಗೆ ಮಾತ್ರ ಪಬ್ ಓಪನ್ ಇಡಲು ಅವಕಾಶ ಇದೆ. ಆದರೆ, ನಿಯಮವನ್ನು ಇಲ್ಲಿ ಮೀರಲಾಗಿದೆ.

ಇದನ್ನೂ ಓದಿ: ಸಿನಿಮಾ ಸಕ್ಸಸ್​​ ಖುಷಿಯಲ್ಲಿ ಮುಂಜಾನೆವರೆಗೂ ಸ್ಟಾರ್ ಹೀರೋ ಪಾರ್ಟಿ; ಪಬ್ ವಿರುದ್ಧ ಎಫ್​ಐಆರ್  

ಯಾರಿಗೆ ನೋಟಿಸ್?

ಈಗಾಗಲೇ ದರ್ಶನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನಟ ಅಭಿಷೇಕ್ ಅಂಬರೀಷ್​ಗೆ ನೋಟಿಸ್ ತಲುಪಿದೆ. ಪಾರ್ಟಿಯಲ್ಲಿ ಭಾಗಿ ಆಗಿದ್ದ ನಟ ಡಾಲಿ ಧನುಂಜಯ್, ನಟ ಚಿಕ್ಕಣ್ಣ, ನಿನಾಸಂ ಸತೀಶ್, ಡೈರಕ್ಟರ್ ತರುಣ್ ಸುಧೀರ್, ಸಂಗೀತ ನಿರ್ದೇಶಕ ಹರಿಕೃಷ್ಣ ಅವರಿಗೆ ನೋಟಿಸ್ ನೀಡಲು ಸಿದ್ಧತೆ ನಡೆದಿದೆ. ಸದ್ಯ ಚಿತ್ರತಂಡ ವಿದೇಶದಲ್ಲಿದೆ ಎನ್ನಲಾಗಿದೆ.

ಸಂಚಾರಕ್ಕೆ ಅಡಚಣೆ

ಅಭಿಮಾನಿಗಳು ಸ್ಟಾರ್ ನಟನ ನೋಡಲು ಮುಂಜಾನೆಯೂ ಆಗಮಿಸಿದ್ದರು. ಹೀರೋಗಳು ರಸ್ತೆ ಮೇಲೆಯೇ‌ ಕಾರು ನಿಲ್ಲಿಸಿ ಸಂಚಾರಕ್ಕೆ ಅಡಚಣೆ ಮಾಡಿದ್ದರು ಎನ್ನಲಾಗಿದೆ. ಸ್ಟಾರ್ಸ್ ಚಲನವಲನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ ಆಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:23 pm, Mon, 8 January 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್