ಜೆಟ್ ಲ್ಯಾಗ್ ಪಾರ್ಟಿ ಪ್ರಕರಣ: ದರ್ಶನ್, ಅಭಿಷೇಕ್​ಗೆ ಪೊಲೀಸರ ನೋಟಿಸ್

| Updated By: ರಾಜೇಶ್ ದುಗ್ಗುಮನೆ

Updated on: Jan 08, 2024 | 12:26 PM

ಇತ್ತೀಚೆಗೆ ‘ಕಾಟೇರ’ ಸಿನಿಮಾ ರಿಲೀಸ್ ಆಗಿ ಗೆದ್ದಿತು. ಅದರ‌ ಸಕ್ಸಸ್ ಸೆಲೆಬ್ರೇಷನ್ ಬಳಿಕ ದರ್ಶನ್, ಅಭಿಷೇಕ್ ಅಂಬರೀಷ್, ಧನಂಜಯ್ ಸೇರಿ ಅನೇಕರು ಬೆಂಗಳೂರಿನ ಒರಾಯನ್‌ ಮಾಲ್ ಬಳಿ ಇರುವ ಜೆಟ್ ಲ್ಯಾಗ್ ಪಬ್​​ನಲ್ಲಿ ಪಾರ್ಟಿ ಮಾಡಿದ್ದರು.

ಜೆಟ್ ಲ್ಯಾಗ್ ಪಾರ್ಟಿ ಪ್ರಕರಣ: ದರ್ಶನ್, ಅಭಿಷೇಕ್​ಗೆ ಪೊಲೀಸರ ನೋಟಿಸ್
ದರ್ಶನ್​
Follow us on

ಇತ್ತೀಚೆಗೆ ಜೆಟ್​ ​ಲ್ಯಾಗ್ ಪಬ್​ನಲ್ಲಿ ದರ್ಶನ್ (Darshan), ಅಭಿಷೇಕ್ ಅಂಬರೀಷ್ ಸೇರಿ ಅನೇಕ ಸೆಲೆಬ್ರೆಟಿಗಳು ಮುಂಜಾನೆವರೆಗೆ ಪಾರ್ಟಿ ಮಾಡಿದ್ದರು. ಈ ಪ್ರಕರಣ ಸಾಕಷ್ಟು ಸುದ್ದಿ ಆಗಿತ್ತು. ಈ ಪ್ರಕರಣದಲ್ಲಿ ಪಬ್ ವಿರುದ್ಧ ಕೇಸ್ ದಾಖಲಾಗಿತ್ತು. ಈ ಪಾರ್ಟಿಯಲ್ಲಿ ಭಾಗಿ ಆದ ನಟ ದರ್ಶನ್, ಅಭಿಷೇಕ್, ನಿರ್ಮಾಪಕ ರಾಕ್​ಲೈನ್ ವೆಂಕಟೇಶ್​ಗೆ ನೋಟಿಸ್ ಜಾರಿ ಆಗಿದೆ. ಸುಬ್ರಹ್ಮಣ್ಯನಗರ ಇನ್ಸ್​ಪೆಕ್ಟರ್​ ಸುರೇಶ್ ಅವ​ರಿಂದ ಮೂವರಿಗೂ ನೋಟಿಸ್ ಜಾರಿ ಆಗಿದೆ. ನಟರಾದ ಡಾಲಿ ಧನಂಜಯ್, ಚಿಕ್ಕಣ್ಣ, ನಿನಾಸಂ ಸತೀಶ್ ಹಾಗೂ ನಿರ್ದೇಶಕ ತರುಣ್ ಸುಧೀರ್​ಗೆ ನೋಟಿಸ್​ ನೀಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಏನಿದು ಪ್ರಕರಣ?

ಇತ್ತೀಚೆಗೆ ‘ಕಾಟೇರ’ ಸಿನಿಮಾ ರಿಲೀಸ್ ಆಗಿ ಗೆದ್ದಿತು. ಅದರ‌ ಸಕ್ಸಸ್ ಸೆಲೆಬ್ರೇಷನ್ ಬಳಿಕ ದರ್ಶನ್, ಅಭಿಷೇಕ್ ಅಂಬರೀಷ್, ಧನಂಜಯ್ ಸೇರಿ ಅನೇಕರು ಬೆಂಗಳೂರಿನ ಒರಾಯನ್‌ ಮಾಲ್ ಬಳಿ ಇರುವ ಜೆಟ್ ಲ್ಯಾಗ್ ಪಬ್​​ನಲ್ಲಿ ಪಾರ್ಟಿ ಮಾಡಿದ್ದರು. ಜನವರಿ‌ 3ರಂದು‌ ರಾತ್ರಿ‌ ಪಬ್​ಗೆ ಇವರು ಬೆಳಗಿನಜಾವದವರೆಗೆ ಪಾರ್ಟಿ ಮಾಡಿದ್ದರು. ನಿಯಮದ ಪ್ರಕಾರ ತಡರಾತ್ರಿ 1 ಗಂಟೆವರೆಗೆ ಮಾತ್ರ ಪಬ್ ಓಪನ್ ಇಡಲು ಅವಕಾಶ ಇದೆ. ಆದರೆ, ನಿಯಮವನ್ನು ಇಲ್ಲಿ ಮೀರಲಾಗಿದೆ.

ಇದನ್ನೂ ಓದಿ: ಸಿನಿಮಾ ಸಕ್ಸಸ್​​ ಖುಷಿಯಲ್ಲಿ ಮುಂಜಾನೆವರೆಗೂ ಸ್ಟಾರ್ ಹೀರೋ ಪಾರ್ಟಿ; ಪಬ್ ವಿರುದ್ಧ ಎಫ್​ಐಆರ್  

ಯಾರಿಗೆ ನೋಟಿಸ್?

ಈಗಾಗಲೇ ದರ್ಶನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನಟ ಅಭಿಷೇಕ್ ಅಂಬರೀಷ್​ಗೆ ನೋಟಿಸ್ ತಲುಪಿದೆ. ಪಾರ್ಟಿಯಲ್ಲಿ ಭಾಗಿ ಆಗಿದ್ದ ನಟ ಡಾಲಿ ಧನುಂಜಯ್, ನಟ ಚಿಕ್ಕಣ್ಣ, ನಿನಾಸಂ ಸತೀಶ್, ಡೈರಕ್ಟರ್ ತರುಣ್ ಸುಧೀರ್, ಸಂಗೀತ ನಿರ್ದೇಶಕ ಹರಿಕೃಷ್ಣ ಅವರಿಗೆ ನೋಟಿಸ್ ನೀಡಲು ಸಿದ್ಧತೆ ನಡೆದಿದೆ. ಸದ್ಯ ಚಿತ್ರತಂಡ ವಿದೇಶದಲ್ಲಿದೆ ಎನ್ನಲಾಗಿದೆ.

ಸಂಚಾರಕ್ಕೆ ಅಡಚಣೆ

ಅಭಿಮಾನಿಗಳು ಸ್ಟಾರ್ ನಟನ ನೋಡಲು ಮುಂಜಾನೆಯೂ ಆಗಮಿಸಿದ್ದರು. ಹೀರೋಗಳು ರಸ್ತೆ ಮೇಲೆಯೇ‌ ಕಾರು ನಿಲ್ಲಿಸಿ ಸಂಚಾರಕ್ಕೆ ಅಡಚಣೆ ಮಾಡಿದ್ದರು ಎನ್ನಲಾಗಿದೆ. ಸ್ಟಾರ್ಸ್ ಚಲನವಲನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ ಆಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:23 pm, Mon, 8 January 24