ಸದ್ಯ ಅನುಶ್ರೀ ಬೆಂಗಳೂರಿನ ತಮ್ಮ ಮನೆಯಲ್ಲಿಲ್ಲ. ಅವರು ನಿನ್ನೆ (ಸೆಪ್ಟೆಂಬರ್ 07) ಮುಂಬೈಗೆ ಪ್ರಯಾಣ ಬೆಳೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಗೌರಿ- ಗಣೇಶ ಹಬ್ಬದ ಪ್ರಯುಕ್ತ ಶೂಟಿಂಗ್ ಇರದಿರುವ ಕಾರಣ ಅವರು, ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ನಿನ್ನೆ 8.20ರ ವಿಮಾನದಲ್ಲಿ ಅವರು ಮುಂಬೈಗೆ ತೆರಳಿದ್ದಾರೆ ಎಂದು ಹೇಳಲಾಗಿದೆ.
ಅನುಶ್ರೀ ಮೇಲಿರುವ ಆರೋಪಗಳೇನು?
ಪ್ರಕರಣದ ಎ2 ಕಿಶೋರ್ ಶೆಟ್ಟಿ ಅನುಶ್ರೀಯವರ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ. ಅನುಶ್ರೀ ಡ್ರಗ್ಸ್ ಸೇವನೆ ಮಾಡಿದ್ದಾರೆ, ಅದನ್ನು ತಂದುಕೊಟ್ಟಿದ್ಧಾರೆ(ಸಾಗಾಟ), ಅವರಿಗೆ ಪೆಡ್ಲರ್ಗಳ ಪರಿಚಯವಿತ್ತು, ಡ್ರಗ್ಸ್ ಎಲ್ಲಿ, ಹೇಗೆ ಸಿಗುತ್ತದೆ ಎಂಬ ಮಾಹಿತಿ ಅವರಿಗಿತ್ತು, ಅನುಶ್ರೀ ಎಕ್ಸ್ಟಸಿ ಡ್ರಗ್ ಸೇವಿಸುತ್ತಿದ್ದರು ಎಂಬ ಆರೋಪಗಳನ್ನು ಕಿಶೋರ್ ಅನುಶ್ರೀ ವಿರುದ್ಧ ಮಾಡಿದ್ದಾರೆ. ಈ ಕುರಿತ ಸಂಪೂರ್ಣ ವಿಡಿಯೊ ವರದಿ ಇಲ್ಲಿದೆ.
ಇದೀಗ ಆರೋಪಿ ಕಿಶೋರ್ ಶೆಟ್ಟಿ ಟಿವಿ9ನೊಂದಿಗೆ ಮಾತನಾಡಿದ್ದು, ಚಾರ್ಜ್ಶೀಟಿನಲ್ಲಿರುವುದು ತನ್ನ ಹೇಳಿಕೆಯಲ್ಲ. ತಾನು ಅಂತಹ ಹೇಳಿಕೆಗಳನ್ನು ನೀಡಿಲ್ಲ ಎಂದಿರುವುದು ಪ್ರಕರಣಕ್ಕೆ ಮತ್ತೊಂದು ತಿರುವು ಲಭಿಸಿದಂತಾಗಿದೆ.
ಇದನ್ನೂ ಓದಿ:
ಅನುಶ್ರೀ ಡ್ರಗ್ಸ್ ಕೇಸ್; ಚಾರ್ಜ್ಶೀಟಿನಲ್ಲಿರುವುದು ತನ್ನ ಹೇಳಿಕೆ ಅಲ್ಲ ಎಂದ ಆರೋಪಿ ಕಿಶೋರ್ ಅಮನ್ ಶೆಟ್ಟಿ
ನವೆಂಬರ್ 1ಕ್ಕೆ ಶುಗರ್ ಡ್ಯಾಡಿ ಪುಸ್ತಕ ರಿಲೀಸ್; ಶೀಘ್ರವೇ 28 ಸೆಕೆಂಡ್ಗಳ ಆಡಿಯೊ ಬಾಂಬ್: ಪ್ರಶಾಂತ್ ಸಂಬರಗಿ