AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಂಕರ್ ಅನುಶ್ರೀ ಈಗ ಎಲ್ಲಿದ್ದಾರೆ?; ಅವರ ಮೇಲಿರೋ ಆರೋಪಗಳೇನು?; ಸಂಪೂರ್ಣ ಮಾಹಿತಿ ಇಲ್ಲಿದೆ

ಖ್ಯಾತ ನಿರೂಪಕಿ ಅನುಶ್ರೀ ವಿರುದ್ಧ ಡ್ರಗ್ಸ್ ಕೇಸ್ ಪ್ರಕರಣದ ಎ2 ಕಿಶೋರ್ ಶೆಟ್ಟಿ ಸಿಸಿಬಿ ಪೊಲೀಸರ ಎದುರು ಮಾಡಿರುವ ಆರೋಪಗಳು ಚಾರ್ಜ್​ಶೀಟಿನಲ್ಲಿ ದಾಖಲಾಗಿವೆ. ಆದರೆ ಈ ಕುರಿತು ಅನುಶ್ರೀ ಇನ್ನೂ ಪ್ರತಿಕ್ರಿಯಿಸಿಲ್ಲ. ಪ್ರಸ್ತುತ ಅವರು ಎಲ್ಲಿದ್ದಾರೆ, ಅವರ ಮೇಲಿರುವ ಆರೋಪಗಳೇನು? ಎಂಬ ಮಾಹಿತಿ ಇಲ್ಲಿದೆ.

ಆ್ಯಂಕರ್ ಅನುಶ್ರೀ ಈಗ ಎಲ್ಲಿದ್ದಾರೆ?; ಅವರ ಮೇಲಿರೋ ಆರೋಪಗಳೇನು?; ಸಂಪೂರ್ಣ ಮಾಹಿತಿ ಇಲ್ಲಿದೆ
ಅನುಶ್ರೀ (ಸಂಗ್ರಹ ಚಿತ್ರ)
TV9 Web
| Updated By: Digi Tech Desk|

Updated on:Sep 15, 2021 | 12:46 PM

Share

ಸಿಸಿಬಿ ಪೊಲೀಸರು ಸಲ್ಲಿಸಿರುವ ಚಾರ್ಜ್​ಶೀಟ್​ನಲ್ಲಿ ಆ್ಯಂಕರ್ ಅನುಶ್ರೀ ಕೂಡ ಡ್ರಗ್ಸ್ ಸೇವನೆ ಹಾಗೂ ಸಾಗಣೆಯಲ್ಲಿ ಭಾಗಿಯಾಗಿದ್ದರು ಎಂದು ಪ್ರಕರಣದ ಎ2 ಕಿಶೋರ್ ಶೆಟ್ಟಿ ಚಾರ್ಜ್​ಶೀಟಿನಲ್ಲಿ ಹೇಳಿಕೆ ನೀಡಿದ್ದಾರೆ. ಇದರಿಂದಾಗಿ ಅನುಶ್ರೀಗೆ ಸಂಕಷ್ಟ ಎದುರಾಗಿದೆ. 2007-08ರಲ್ಲಿ ಅನುಶ್ರೀ ರಿಯಾಲಿಟಿ ಶೋವೊಂದರಲ್ಲಿ ಸ್ಪರ್ಧಿಯಾಗಿದ್ದಾಗ ಕೊರಿಯೋಗ್ರಾಫರ್​ಗಳಾದ ತರುಣ್ ಹಾಗೂ ಕಿಶೋರ್ ಅವರೊಂದಿಗೆ ಡ್ರಗ್ಸ್ ಸೇವಿಸಿದ್ದರು ಎಂದು ಆರೋಪಿಸಲಾಗಿದೆ. ಜೊತೆಗೆ ಇದಕ್ಕೆ ಡ್ರಗ್ಸ್ ಅನ್ನು ಪೂರೈಕೆ ಮಾಡಿದ್ದೂ ಕೂಡ ಅನುಶ್ರೀ ಎಂದು ಕಿಶೋರ್ ಗಂಭೀರ ಆರೋಪ ಮಾಡಿದ್ದಾರೆ.

ಸದ್ಯ ಅನುಶ್ರೀ ಬೆಂಗಳೂರಿನ ತಮ್ಮ ಮನೆಯಲ್ಲಿಲ್ಲ. ಅವರು ನಿನ್ನೆ (ಸೆಪ್ಟೆಂಬರ್ 07) ಮುಂಬೈಗೆ ಪ್ರಯಾಣ ಬೆಳೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಗೌರಿ- ಗಣೇಶ ಹಬ್ಬದ ಪ್ರಯುಕ್ತ ಶೂಟಿಂಗ್ ಇರದಿರುವ ಕಾರಣ ಅವರು, ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ನಿನ್ನೆ 8.20ರ ವಿಮಾನದಲ್ಲಿ ಅವರು ಮುಂಬೈಗೆ ತೆರಳಿದ್ದಾರೆ ಎಂದು ಹೇಳಲಾಗಿದೆ.

ಅನುಶ್ರೀ ಮೇಲಿರುವ ಆರೋಪಗಳೇನು? ಪ್ರಕರಣದ ಎ2 ಕಿಶೋರ್ ಶೆಟ್ಟಿ ಅನುಶ್ರೀಯವರ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ. ಅನುಶ್ರೀ ಡ್ರಗ್ಸ್ ಸೇವನೆ ಮಾಡಿದ್ದಾರೆ, ಅದನ್ನು ತಂದುಕೊಟ್ಟಿದ್ಧಾರೆ(ಸಾಗಾಟ), ಅವರಿಗೆ ಪೆಡ್ಲರ್​ಗಳ ಪರಿಚಯವಿತ್ತು, ಡ್ರಗ್ಸ್ ಎಲ್ಲಿ, ಹೇಗೆ ಸಿಗುತ್ತದೆ ಎಂಬ ಮಾಹಿತಿ ಅವರಿಗಿತ್ತು, ಅನುಶ್ರೀ ಎಕ್ಸ್ಟಸಿ ಡ್ರಗ್ ಸೇವಿಸುತ್ತಿದ್ದರು ಎಂಬ ಆರೋಪಗಳನ್ನು ಕಿಶೋರ್ ಅನುಶ್ರೀ ವಿರುದ್ಧ ಮಾಡಿದ್ದಾರೆ. ಈ ಕುರಿತ ಸಂಪೂರ್ಣ ವಿಡಿಯೊ ವರದಿ ಇಲ್ಲಿದೆ.

ಇದೀಗ ಆರೋಪಿ ಕಿಶೋರ್ ಶೆಟ್ಟಿ ಟಿವಿ9ನೊಂದಿಗೆ ಮಾತನಾಡಿದ್ದು, ಚಾರ್ಜ್​ಶೀಟಿನಲ್ಲಿರುವುದು ತನ್ನ ಹೇಳಿಕೆಯಲ್ಲ. ತಾನು ಅಂತಹ ಹೇಳಿಕೆಗಳನ್ನು ನೀಡಿಲ್ಲ ಎಂದಿರುವುದು ಪ್ರಕರಣಕ್ಕೆ ಮತ್ತೊಂದು ತಿರುವು ಲಭಿಸಿದಂತಾಗಿದೆ.

ಇದನ್ನೂ ಓದಿ:

ಅನುಶ್ರೀ ಡ್ರಗ್ಸ್ ಕೇಸ್; ಚಾರ್ಜ್​ಶೀಟಿನಲ್ಲಿರುವುದು ತನ್ನ ಹೇಳಿಕೆ ಅಲ್ಲ ಎಂದ ಆರೋಪಿ ಕಿಶೋರ್ ಅಮನ್ ಶೆಟ್ಟಿ

ನವೆಂಬರ್ 1ಕ್ಕೆ ಶುಗರ್ ಡ್ಯಾಡಿ ಪುಸ್ತಕ ರಿಲೀಸ್; ಶೀಘ್ರವೇ 28 ಸೆಕೆಂಡ್​ಗಳ ಆಡಿಯೊ ಬಾಂಬ್: ಪ್ರಶಾಂತ್ ಸಂಬರಗಿ

Published On - 2:00 pm, Wed, 8 September 21

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ