AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಓಲ್ಡ್​ ಮಾಂಕ್​’ ಗೆದ್ದ ಬಳಿಕ ಶ್ರೀನಿ ಹೊಸ ಚಿತ್ರ ಅನೌನ್ಸ್​; ಈ ಬಾರಿ ಶಿವಣ್ಣ, ಸಂದೇಶ್​ ನಾಗರಾಜ್​ ಜೊತೆ ಸಿನಿಮಾ

‘ಘೋಸ್ಟ್​’ ಚಿತ್ರಕ್ಕೆ ಶ್ರೀನಿ ಕಥೆ ಬರೆದಿದ್ದಾರೆ. ಶಿವರಾಜ್​ಕುಮಾರ್​ ನಾಯಕನಾಗಿ ನಟಿಸಲಿದ್ದು, ಸಂದೇಶ್​ ನಾಗರಾಜ್​ ಅವರು ನಿರ್ಮಾಣ ಮಾಡುತ್ತಿದ್ದಾರೆ.

‘ಓಲ್ಡ್​ ಮಾಂಕ್​’ ಗೆದ್ದ ಬಳಿಕ ಶ್ರೀನಿ ಹೊಸ ಚಿತ್ರ ಅನೌನ್ಸ್​; ಈ ಬಾರಿ ಶಿವಣ್ಣ, ಸಂದೇಶ್​ ನಾಗರಾಜ್​ ಜೊತೆ ಸಿನಿಮಾ
ಶ್ರೀನಿ, ಶಿವರಾಜ್​ಕುಮಾರ್, ಸಂದೇಶ್​ ನಾಗರಾಜ್
TV9 Web
| Updated By: ಮದನ್​ ಕುಮಾರ್​|

Updated on: Apr 09, 2022 | 8:03 AM

Share

ಕನ್ನಡ ಚಿತ್ರರಂಗದಲ್ಲಿ ನಟ-ನಿರ್ದೇಶಕ ಶ್ರೀನಿ (ಎಂ.ಜಿ. ಶ್ರೀನಿವಾಸ್​) ಅವರು ಹಲವು ಸಿನಿಮಾಗಳ ಮೂಲಕ ಜನಮನ ಗೆದ್ದಿದ್ದಾರೆ. ಇತ್ತೀಚೆಗೆ ತೆರೆಕಂಡ ‘ಓಲ್ಡ್​ ಮಾಂಕ್​’ ಚಿತ್ರಕ್ಕೆ ಶ್ರೀನಿ (Srini) ನಿರ್ದೇಶನ ಮಾಡುವುದರ ಜೊತೆಗೆ ಹೀರೋ ಆಗಿಯೂ ನಟಿಸಿದರು. ಆ ಚಿತ್ರ ಸೂಪರ್ ಹಿಟ್​ ಆಯಿತು. ಚಿತ್ರಮಂದಿರದಲ್ಲಿ ಉತ್ತಮ ಕಲೆಕ್ಷನ್​ ಮಾಡಿದ ಬಳಿಕ ಟಿವಿಯಲ್ಲೂ ಪ್ರಸಾರವಾಗಿ ಪ್ರೇಕ್ಷಕರಿಂದ ಭೇಷ್​ ಎನಿಸಿಕೊಂಡಿದೆ. ಈಗ ಒಟಿಟಿಗೂ ‘ಓಲ್ಡ್​ ಮಾಂಕ್​’ ಕಾಲಿಟ್ಟು ಸದ್ದು ಮಾಡುತ್ತಿದೆ. ಈ ಗೆಲುವಿನ ಬೆನ್ನಲ್ಲೇ ಅವರ ಹೊಸ ಸಿನಿಮಾ ಬಗ್ಗೆ ಮಾಹಿತಿ ಹೊರಬಿದ್ದಿದೆ. ಈ ಬಾರಿ ಶ್ರೀನಿ ಅವರಿಗೆ ಬಂಪರ್​ ಚಾನ್ಸ್​ ಸಿಕ್ಕಿದೆ. ಪ್ರತಿಷ್ಠಿತ ಪ್ರೊಡಕ್ಷನ್​ ಹೌಸ್​ ಮತ್ತು ಸೂಪರ್​ ಸ್ಟಾರ್​ ನಟನ ಜೊತೆ ಕೆಲಸ ಮಾಡುವ ಅವಕಾಶ ಅವರ ಪಾಲಾಗಿದೆ. ಹೌದು, ಸಂದೇಶ್​ ನಾಗರಾಜ್​ (Sandesh Nagaraj) ಅವರ ‘ಸಂದೇಶ್​ ಪ್ರೊಡಕ್ಷನ್ಸ್​’ ಬ್ಯಾನರ್​ನಲ್ಲಿ ಮೂಡಿಬರಲಿರುವ ಹೊಸ ಸಿನಿಮಾಗೆ ಶ್ರೀನಿ ನಿರ್ದೇಶನ ಮಾಡಲಿದ್ದಾರೆ. ಆ ಚಿತ್ರಕ್ಕೆ ಶಿವರಾಜ್​ಕುಮಾರ್​ (Shivarajkumar) ಹೀರೋ. ಈ ಸೂಪರ್​ ಕಾಂಬಿನೇಷನ್​ನ ಸಿನಿಮಾಗೆ ‘ಘೋಸ್ಟ್​’ ಎಂದು ಶೀರ್ಷಿಕೆ ಇಡಲಾಗಿದೆ.

ಕನ್ನಡ ಚಿತ್ರರಂಗದಲ್ಲಿ ಅನೇಕ ಸೂಪರ್​ ಹಿಟ್​ ಸಿನಿಮಾಗಳನ್ನು ನಿರ್ಮಾಣ ಮಾಡಿದ ಕೀರ್ತಿ ‘ಸಂದೇಶ್​ ಪ್ರೊಡಕ್ಷನ್ಸ್​’ ಸಂಸ್ಥೆಗೆ ಇದೆ. ‘ಮಣ್ಣಿನ ದೋಣಿ’, ‘ಮಿಸ್ಟರ್​ ಐರಾವತ’, ‘ಪ್ರಿನ್ಸ್​’, ‘ಅಮರ್​’ ಮುಂತಾದ ಸಿನಿಮಾಗಳು ಈ ಬ್ಯಾನರ್​ನಿಂದಲೇ ಮೂಡಿಬಂದಿದೆ. ಈಗ ಕೆಲವು ಪ್ರಾಜೆಕ್ಟ್​​ಗಳಿಗೆ ಸಂದೇಶ್​ ನಾಗರಾಜ್​ ಅವರು ಬಂಡವಾಳ ಹೂಡುತ್ತಿದ್ದಾರೆ. ಆ ಪೈಕಿ ಶಿವರಾಜ್​ಕುಮಾರ್​ ಮತ್ತು ಶ್ರೀನಿ ಕಾಂಬಿನೇಷನ್​ನ ‘ಗೋಸ್ಟ್​’ ಸಿನಿಮಾ ಸಖತ್​ ನಿರೀಕ್ಷೆ ಮೂಡಿಸಿದೆ.

‘ಶ್ರೀನಿವಾಸ ಕಲ್ಯಾಣ’, ‘ಬೀರ್​ಬಲ್​’, ‘ಓಲ್ಡ್​ ಮಾಂಕ್​’ ಮುಂತಾದ ಸಿನಿಮಾಗಳ ಮೂಲಕ ಶ್ರೀನಿ ಅವರು ತಮ್ಮ ಸಾಮರ್ಥ್ಯ ಏನೆಂಬುದನ್ನು ಸಾಬೀತುಪಡಿಸಿದ್ದಾರೆ. ಈಗ ದೊಡ್ಡ ಜವಾಬ್ದಾರಿ ಅವರ ಹೆಗಲೇರಿದೆ. ಶಿವರಾಜ್​ಕುಮಾರ್​ ಅವರ ಸಿನಿಮಾಗೆ ನಿರ್ದೇಶನ ಮಾಡುವುದು ಎಂದರೆ ಸುಲಭದ ಮಾತಲ್ಲ. ಈ ಬಾರಿ ಶ್ರೀನಿ ಯಾವ ರೀತಿಯ ಕಥೆ ಹೇಳಲಿದ್ದಾರೆ ಎಂದು ತಿಳಿದುಕೊಳ್ಳುವ ಕೌತುಕ ಜನರಲ್ಲಿ ಮೂಡಿದೆ.

‘ಘೋಸ್ಟ್​’ ಚಿತ್ರಕ್ಕೆ ಶ್ರೀನಿ ಅವರೇ ಕಥೆ ಬರೆದಿದ್ದಾರೆ. ಈ ಸಿನಿಮಾಗೆ ಅರ್ಜುನ್​ ಜನ್ಯ ಸಂಗೀತ ನಿರ್ದೇಶನ ಮಾಡಲಿದ್ದಾರೆ. ಶಿವರಾಜ್​ಕುಮಾರ್​ ಜೊತೆ ಬೇರೆ ಯಾವೆಲ್ಲ ಕಲಾವಿದರು ನಟಿಸಲಿದ್ದಾರೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ತಂತ್ರಜ್ಞರ ಆಯ್ಕೆ ಪ್ರಕ್ರಿಯೆ ಕೂಡ ಚಾಲ್ತಿಯಲ್ಲಿದೆ. ಶೀಘ್ರದಲ್ಲೇ ಈ ಸಿನಿಮಾ ಸೆಟ್ಟೇರಲಿದೆ. ‘ಓಲ್ಡ್​ ಮಾಂಕ್​’ ಗೆಲುವಿನಿಂದ ಶ್ರೀನಿ ಖುಷಿಯಾಗಿದ್ದಾರೆ. ಪ್ರೇಕ್ಷಕರು ಅವರಿಗೆ ಪ್ರತಿ ದಿನ ಅಭಿನಂದನೆಯ ಸಂದೇಶ ಕಳಿಸುತ್ತಿದ್ದಾರೆ. ಅದರ ಬೆನ್ನಲ್ಲೇ ಅವರ ‘ಘೋಸ್ಟ್​’ ಸಿನಿಮಾ ಅನೌನ್ಸ್​ ಆಗಿರುವುದು ಸಹಜವಾಗಿಯೇ ಅಭಿಮಾನಿಗಳಿಗೆ ಖುಷಿ ನೀಡಿದೆ.

ಪ್ರಭುದೇವ ಜೊತೆಗೂ ಸಂದೇಶ್​ ನಾಗರಾಜ್​ ಸಿನಿಮಾ:

ಹಲವು ಚಿತ್ರಗಳಿಗೆ ‘ಸಂದೇಶ್​ ಪ್ರೊಡಕ್ಷನ್ಸ್​’ ಸಂಸ್ಥೆ ಬಂಡವಾಳ ಹೂಡುತ್ತಿದೆ. ಕೆಲವೇ ದಿನಗಳ ಹಿಂದೆ ಈ ಬ್ಯಾನರ್​ನಿಂದ ಒಂದು ಬಿಗ್​ ನ್ಯೂಸ್​ ಹೊರಬಿದ್ದಿತ್ತು. ಖ್ಯಾತ ನಟ, ನಿರ್ದೇಶಕ, ಡ್ಯಾನ್ಸ್​ ಕೊರಿಯೋಗ್ರಾಫರ್​ ಪ್ರಭುದೇವ ಜೊತೆಗೆ ಸಂದೇಶ್​ ನಾಗರಾಜ್​ ಸಿನಿಮಾ ಮಾಡುವುದು ಖಚಿತ ಆಗಿತ್ತು. ಅದೊಂದು ಪ್ಯಾನ್​ ಇಂಡಿಯಾ ಸಿನಿಮಾ ಆಗಿರಲಿದ್ದು, ಈಗಾಗಲೇ ಪ್ರಭುದೇವ ಮತ್ತು ಸಂದೇಶ್​ ನಾಗರಾಜ್​ ಅವರು ಒಂದು ಸುತ್ತಿನ ಮಾತುಕತೆ ಮುಗಿಸಿದ್ದಾರೆ ಎಂದು ವರದಿ ಆಗಿತ್ತು. ಆ ಸಿನಿಮಾ ಬಗ್ಗೆಯೂ ಹೆಚ್ಚಿನ ಮಾಹಿತಿ ತಿಳಿಯಲು ಪ್ರೇಕ್ಷಕರು ಕಾದಿದ್ದಾರೆ.

ಇದನ್ನೂ ಓದಿ:

Old Monk Review: ಕಾಮಿಡಿ ಪ್ರಿಯರಿಗೆ ನಗುವಿನ ಕಿಕ್​ ನೀಡುವ ‘ಓಲ್ಡ್​ ಮಾಂಕ್​’

ಯಶ್ ಮಾತಿಗೆ ಕಣ್ಣೀರು ಹಾಕಿದ ಶಿವರಾಜ್​ಕುಮಾರ್

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು