AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೇರೆಯವರ ದುಡ್ಡಲ್ಲಿ ನಾನೇಕೆ ಬಿಲ್ಡಪ್​ ತೆಗೆದುಕೊಳ್ಳಲಿ?’; ಸ್ವಂತ ಖರ್ಚಲ್ಲಿ ‘ನಟ ಭಯಂಕರ’ ಸಿನಿಮಾ ಕಾರ್ಮಿಕರಿಗೆ ಪ್ರಥಮ್​ ಸಹಾಯ

ಉಪೇಂದ್ರ ಅವರ ಕೆಲಸವನ್ನು ನೋಡಿ ಪ್ರಥಮ್​ ಕೂಡ ಸ್ಫೂರ್ತಿ ಪಡೆದಿದ್ದು, ಕಷ್ಟದಲ್ಲಿರುವ ಸಿನಿಮಾ ಕಾರ್ಮಿಕರಿಗೆ ಸಹಾಯ ಮಾಡಿದ್ದಾರೆ.

‘ಬೇರೆಯವರ ದುಡ್ಡಲ್ಲಿ ನಾನೇಕೆ ಬಿಲ್ಡಪ್​ ತೆಗೆದುಕೊಳ್ಳಲಿ?’; ಸ್ವಂತ ಖರ್ಚಲ್ಲಿ ‘ನಟ ಭಯಂಕರ’ ಸಿನಿಮಾ ಕಾರ್ಮಿಕರಿಗೆ ಪ್ರಥಮ್​ ಸಹಾಯ
ಸ್ವಂತ ಖರ್ಚಲ್ಲಿ ‘ನಟ ಭಯಂಕರ’ ಸಿನಿಮಾ ಕಾರ್ಮಿಕರಿಗೆ ಪ್ರಥಮ್​ ಸಹಾಯ
ರಾಜೇಶ್ ದುಗ್ಗುಮನೆ
| Edited By: |

Updated on: May 29, 2021 | 3:45 PM

Share

ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಹೇರಿದ ಲಾಕ್​ಡೌನ್​​ನಿಂದಾಗಿ ಸಿನಿಮಾ ಕೆಲಸಗಳು ಅರ್ಧಕ್ಕೆ ನಿಂತಿವೆ. ಚಿತ್ರರಂಗದ ಕಾರ್ಮಿಕರು ಹಾಗೂ ಕಲಾವಿದರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅನೇಕ ನಟ-ನಟಿಯರು ಇವರ ಸಹಾಯಕ್ಕೆ ಮುಂದೆ ಬಂದಿದ್ದಾರೆ. ಈಗ ನಟ ಹಾಗೂ ‘ಬಿಗ್​ ಬಾಸ್​ ಕನ್ನಡ ಸೀಸನ್​ 4’ರ ವಿನ್ನರ್​ ಒಳ್ಳೇ ಹುಡುಗ ಪ್ರಥಮ್​ ಕೂಡ ಸಹಾಯ ಹಸ್ತ ಚಾಚಿದ್ದಾರೆ. ಅವರು ನಿರ್ದೇಶಿಸಿ ನಟಿಸುತ್ತಿರುವ ನಟ ಭಯಂಕರ ಸಿನಿಮಾದಲ್ಲಿ ಕೆಲಸ ಮಾಡಿದವರಿಗೆ ಪ್ರಥಮ್​ ಸಹಾಯ ಮಾಡಿದ್ದಾರೆ.

‘ನಟ ಭಯಂಕರ ಸಿನಿಮಾಗಾಗಿ ಶ್ರಮಿಸಿದ ಎಲ್ಲಾ ಕಾರ್ಮಿಕರನ್ನು ಮನೆಗೆ ಕರೆಸಿ ಅವರಿಗೆ ಅತ್ಯುತ್ತಮ ಗುಣಮಟ್ಟದ ಆಹಾರದ ಕಿಟ್, ಐಸೋಲೇಷನ್​ ಕಿಟ್​ ನೀಡಿದ್ದೇವೆ. ನಮ್ಮ ಕಾರ್ಮಿಕರಿಗೆ ಒಂದು ತಿಂಗಳು ಯಾವುದೇ ಸಮಸ್ಯೆ ಬರಬಾರದು. ಎಲ್ಲರ ಮನೆಯಲ್ಲೂ ಯಾವಾಗ ತೊಂದರೆ ಬರುತ್ತದೆ ಎಂದ ಹೇಳೋಕೆ ಸಾಧ್ಯವಿಲ್ಲ. ಅವರಿಗೆ ತೊಂದರೆ ಆದಾಗ ಹೊರಗೆ ಹೋಗಿ ತರೋದು ಕಷ್ಟ. ಈ ಕಾರಣಕ್ಕೆ ನಾವು ವೈದ್ಯಕೀಯ ಕಿಟ್​ ಕೂಡ ನೀಡಿದ್ದೇವೆ’ ಎನ್ನುತ್ತಾರೆ ಪ್ರಥಮ್​.

‘ನಟ ಭಯಂಕರ ಸಿನಿಮಾ ಶೂಟಿಂಗ್​ ವೇಳೆ 6 ಗಂಟೆಗೆ ಪ್ಯಾಕ್​​ಅಪ್ ಆಗುತ್ತಿತ್ತು. ಆದರೆ, ನನ್ನ ಸಿನಿಮಾದಲ್ಲಿ ಕೆಲಸ ಮಾಡಿದವರು 7:30ವರೆಗೂ ಕೆಲಸ ಮಾಡುತ್ತಿದ್ದರು. ಅವರು ಎಂದಿಗೂ ಹೆಚ್ಚಿನ ಹಣ ಕೇಳಿಲ್ಲ. ನನ್ನ ಕಷ್ಟಕ್ಕೆ ಅವರು ಓಗೊಟ್ಟಾಗ ನಾನು ಕೂಡ ಅವರ ಕಷ್ಟವನ್ನು ಆಲಿಸಲೇಬೇಕು. ಅದು ನನ್ನ ಕರ್ತವ್ಯ. ಈ  ಕಾರಣಕ್ಕೆ ನಾನು ಫುಡ್​ಕಿಟ್​ ಕೊಟ್ಟಿದ್ದೇನೆ’ ಎನ್ನುತ್ತಾರೆ ಪ್ರಥಮ್​.

‘ಜನಗಳ ಹತ್ತಿರ ನಾನು ಒಂದು ರೂಪಾಯಿ ತೆಗೆದುಕೊಂಡಿಲ್ಲ. ಜನರಿಂದ ಹಣ ತೆಗೆದುಕೊಂಡು ಅದನ್ನು ಜನರಿಗೇ ನೀಡಿ ಬಿಲ್ಡಪ್​ ತೆಗೆದುಕೊಳ್ಳೋ ಅವಶ್ಯಕತೆ ಇಲ್ಲ. ಜನರೇ ಕಷ್ಟದಲ್ಲಿದ್ದಾರೆ. ಮತ್ತೆ ಅವರಿಂದ ಹಣ ತೆಗೆದುಕೊಳ್ಳಲು ಮನಸ್ಸು ಬಂದಿಲ್ಲ. ಹೀಗಾಗಿ, ನಾನು ಸೋಶಿಯಲ್​ ಮೀಡಿಯಾ ಪೋಸ್ಟ್​ಗಳಲ್ಲೂ ಇದನ್ನು ಉಲ್ಲೇಖ ಮಾಡಿದ್ದೇನೆ’ ಎಂದಿದ್ದಾರೆ ಅವರು.

ಈ ಕೆಲಸಕ್ಕೆ ಸ್ಫೂರ್ತಿ ಯಾರು ಎನ್ನುವ ಪ್ರಶ್ನೆಗೆ ಉಪೇಂದ್ರ ಹೆಸರನ್ನು ಹೇಳುತ್ತಾರೆ ಪ್ರಥಮ್​. ಕಷ್ಟದಲ್ಲಿರುವ ಸಾಕಷ್ಟು ಜನರಿಗೆ ಉಪೇಂದ್ರ ಸಹಾಯ ಮಾಡಿದ್ದಾರೆ. ಈ ಮೂಲಕ ಅನೇಕರಿಗೆ ಮಾದರಿಯಾಗಿದ್ದಾರೆ. ಉಪೇಂದ್ರ ಅವರ ಕೆಲಸವನ್ನು ನೋಡಿ ಪ್ರಥಮ್​ ಕೂಡ ಸ್ಫೂರ್ತಿ ಪಡೆದಿದ್ದು, ಕಷ್ಟದಲ್ಲಿರುವ ಸಿನಿಮಾ ಕಾರ್ಮಿಕರಿಗೆ ಸಹಾಯ ಮಾಡಿದ್ದಾರೆ.

ಇದನ್ನೂ ಓದಿ: ಒಂದೇ ಶೋನಲ್ಲಿ ಪ್ರಥಮ್​, ಸಿಹಿಕಹಿ ಚಂದ್ರು, ಅಕುಲ್​ ಬಾಲಾಜಿ! ಕಿರುತೆರೆ ಪ್ರೇಕ್ಷಕರಿಗೆ ಮಸ್ತ್​​ ಮನರಂಜನೆ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್