AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೇರೆಯವರ ದುಡ್ಡಲ್ಲಿ ನಾನೇಕೆ ಬಿಲ್ಡಪ್​ ತೆಗೆದುಕೊಳ್ಳಲಿ?’; ಸ್ವಂತ ಖರ್ಚಲ್ಲಿ ‘ನಟ ಭಯಂಕರ’ ಸಿನಿಮಾ ಕಾರ್ಮಿಕರಿಗೆ ಪ್ರಥಮ್​ ಸಹಾಯ

ಉಪೇಂದ್ರ ಅವರ ಕೆಲಸವನ್ನು ನೋಡಿ ಪ್ರಥಮ್​ ಕೂಡ ಸ್ಫೂರ್ತಿ ಪಡೆದಿದ್ದು, ಕಷ್ಟದಲ್ಲಿರುವ ಸಿನಿಮಾ ಕಾರ್ಮಿಕರಿಗೆ ಸಹಾಯ ಮಾಡಿದ್ದಾರೆ.

‘ಬೇರೆಯವರ ದುಡ್ಡಲ್ಲಿ ನಾನೇಕೆ ಬಿಲ್ಡಪ್​ ತೆಗೆದುಕೊಳ್ಳಲಿ?’; ಸ್ವಂತ ಖರ್ಚಲ್ಲಿ ‘ನಟ ಭಯಂಕರ’ ಸಿನಿಮಾ ಕಾರ್ಮಿಕರಿಗೆ ಪ್ರಥಮ್​ ಸಹಾಯ
ಸ್ವಂತ ಖರ್ಚಲ್ಲಿ ‘ನಟ ಭಯಂಕರ’ ಸಿನಿಮಾ ಕಾರ್ಮಿಕರಿಗೆ ಪ್ರಥಮ್​ ಸಹಾಯ
ರಾಜೇಶ್ ದುಗ್ಗುಮನೆ
| Edited By: |

Updated on: May 29, 2021 | 3:45 PM

Share

ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಹೇರಿದ ಲಾಕ್​ಡೌನ್​​ನಿಂದಾಗಿ ಸಿನಿಮಾ ಕೆಲಸಗಳು ಅರ್ಧಕ್ಕೆ ನಿಂತಿವೆ. ಚಿತ್ರರಂಗದ ಕಾರ್ಮಿಕರು ಹಾಗೂ ಕಲಾವಿದರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅನೇಕ ನಟ-ನಟಿಯರು ಇವರ ಸಹಾಯಕ್ಕೆ ಮುಂದೆ ಬಂದಿದ್ದಾರೆ. ಈಗ ನಟ ಹಾಗೂ ‘ಬಿಗ್​ ಬಾಸ್​ ಕನ್ನಡ ಸೀಸನ್​ 4’ರ ವಿನ್ನರ್​ ಒಳ್ಳೇ ಹುಡುಗ ಪ್ರಥಮ್​ ಕೂಡ ಸಹಾಯ ಹಸ್ತ ಚಾಚಿದ್ದಾರೆ. ಅವರು ನಿರ್ದೇಶಿಸಿ ನಟಿಸುತ್ತಿರುವ ನಟ ಭಯಂಕರ ಸಿನಿಮಾದಲ್ಲಿ ಕೆಲಸ ಮಾಡಿದವರಿಗೆ ಪ್ರಥಮ್​ ಸಹಾಯ ಮಾಡಿದ್ದಾರೆ.

‘ನಟ ಭಯಂಕರ ಸಿನಿಮಾಗಾಗಿ ಶ್ರಮಿಸಿದ ಎಲ್ಲಾ ಕಾರ್ಮಿಕರನ್ನು ಮನೆಗೆ ಕರೆಸಿ ಅವರಿಗೆ ಅತ್ಯುತ್ತಮ ಗುಣಮಟ್ಟದ ಆಹಾರದ ಕಿಟ್, ಐಸೋಲೇಷನ್​ ಕಿಟ್​ ನೀಡಿದ್ದೇವೆ. ನಮ್ಮ ಕಾರ್ಮಿಕರಿಗೆ ಒಂದು ತಿಂಗಳು ಯಾವುದೇ ಸಮಸ್ಯೆ ಬರಬಾರದು. ಎಲ್ಲರ ಮನೆಯಲ್ಲೂ ಯಾವಾಗ ತೊಂದರೆ ಬರುತ್ತದೆ ಎಂದ ಹೇಳೋಕೆ ಸಾಧ್ಯವಿಲ್ಲ. ಅವರಿಗೆ ತೊಂದರೆ ಆದಾಗ ಹೊರಗೆ ಹೋಗಿ ತರೋದು ಕಷ್ಟ. ಈ ಕಾರಣಕ್ಕೆ ನಾವು ವೈದ್ಯಕೀಯ ಕಿಟ್​ ಕೂಡ ನೀಡಿದ್ದೇವೆ’ ಎನ್ನುತ್ತಾರೆ ಪ್ರಥಮ್​.

‘ನಟ ಭಯಂಕರ ಸಿನಿಮಾ ಶೂಟಿಂಗ್​ ವೇಳೆ 6 ಗಂಟೆಗೆ ಪ್ಯಾಕ್​​ಅಪ್ ಆಗುತ್ತಿತ್ತು. ಆದರೆ, ನನ್ನ ಸಿನಿಮಾದಲ್ಲಿ ಕೆಲಸ ಮಾಡಿದವರು 7:30ವರೆಗೂ ಕೆಲಸ ಮಾಡುತ್ತಿದ್ದರು. ಅವರು ಎಂದಿಗೂ ಹೆಚ್ಚಿನ ಹಣ ಕೇಳಿಲ್ಲ. ನನ್ನ ಕಷ್ಟಕ್ಕೆ ಅವರು ಓಗೊಟ್ಟಾಗ ನಾನು ಕೂಡ ಅವರ ಕಷ್ಟವನ್ನು ಆಲಿಸಲೇಬೇಕು. ಅದು ನನ್ನ ಕರ್ತವ್ಯ. ಈ  ಕಾರಣಕ್ಕೆ ನಾನು ಫುಡ್​ಕಿಟ್​ ಕೊಟ್ಟಿದ್ದೇನೆ’ ಎನ್ನುತ್ತಾರೆ ಪ್ರಥಮ್​.

‘ಜನಗಳ ಹತ್ತಿರ ನಾನು ಒಂದು ರೂಪಾಯಿ ತೆಗೆದುಕೊಂಡಿಲ್ಲ. ಜನರಿಂದ ಹಣ ತೆಗೆದುಕೊಂಡು ಅದನ್ನು ಜನರಿಗೇ ನೀಡಿ ಬಿಲ್ಡಪ್​ ತೆಗೆದುಕೊಳ್ಳೋ ಅವಶ್ಯಕತೆ ಇಲ್ಲ. ಜನರೇ ಕಷ್ಟದಲ್ಲಿದ್ದಾರೆ. ಮತ್ತೆ ಅವರಿಂದ ಹಣ ತೆಗೆದುಕೊಳ್ಳಲು ಮನಸ್ಸು ಬಂದಿಲ್ಲ. ಹೀಗಾಗಿ, ನಾನು ಸೋಶಿಯಲ್​ ಮೀಡಿಯಾ ಪೋಸ್ಟ್​ಗಳಲ್ಲೂ ಇದನ್ನು ಉಲ್ಲೇಖ ಮಾಡಿದ್ದೇನೆ’ ಎಂದಿದ್ದಾರೆ ಅವರು.

ಈ ಕೆಲಸಕ್ಕೆ ಸ್ಫೂರ್ತಿ ಯಾರು ಎನ್ನುವ ಪ್ರಶ್ನೆಗೆ ಉಪೇಂದ್ರ ಹೆಸರನ್ನು ಹೇಳುತ್ತಾರೆ ಪ್ರಥಮ್​. ಕಷ್ಟದಲ್ಲಿರುವ ಸಾಕಷ್ಟು ಜನರಿಗೆ ಉಪೇಂದ್ರ ಸಹಾಯ ಮಾಡಿದ್ದಾರೆ. ಈ ಮೂಲಕ ಅನೇಕರಿಗೆ ಮಾದರಿಯಾಗಿದ್ದಾರೆ. ಉಪೇಂದ್ರ ಅವರ ಕೆಲಸವನ್ನು ನೋಡಿ ಪ್ರಥಮ್​ ಕೂಡ ಸ್ಫೂರ್ತಿ ಪಡೆದಿದ್ದು, ಕಷ್ಟದಲ್ಲಿರುವ ಸಿನಿಮಾ ಕಾರ್ಮಿಕರಿಗೆ ಸಹಾಯ ಮಾಡಿದ್ದಾರೆ.

ಇದನ್ನೂ ಓದಿ: ಒಂದೇ ಶೋನಲ್ಲಿ ಪ್ರಥಮ್​, ಸಿಹಿಕಹಿ ಚಂದ್ರು, ಅಕುಲ್​ ಬಾಲಾಜಿ! ಕಿರುತೆರೆ ಪ್ರೇಕ್ಷಕರಿಗೆ ಮಸ್ತ್​​ ಮನರಂಜನೆ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ