AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Olle Huduga Pratham: ಅಳಿಯ ಆಗುತ್ತಿದ್ದಾರೆ ಒಳ್ಳೆ ಹುಡುಗ ಪ್ರಥಮ್​, ಇಂದು ಸಂಜೆ ಕರ್ನಾಟಕ ಅಳಿಯ ಟೀಸರ್​ ಬಿಡುಗಡೆ

Sandalwood: ಚಿತ್ರದ ಮೂಲಕ ಕರ್ನಾಟಕದ ಅಳಿಯ ಆಗುತ್ತಿರುವ ಒಳ್ಳೆ ಹುಡುಗನನ್ನು ಕನ್ನಡ ಚಿತ್ರ ಪ್ರೇಮಿಗಳು ಹೇಗೆ ಸ್ವೀಕರಿಸುತ್ತಾರೆ. ಟೀಸರ್​ ಹೇಗೆ ಮೂಡಿಬರಲಿದೆ ಎಂಬುದನ್ನು ಕಾದು ನೋಡಬೇಕಿದೆ.

Olle Huduga Pratham: ಅಳಿಯ ಆಗುತ್ತಿದ್ದಾರೆ ಒಳ್ಳೆ ಹುಡುಗ ಪ್ರಥಮ್​, ಇಂದು ಸಂಜೆ ಕರ್ನಾಟಕ ಅಳಿಯ ಟೀಸರ್​ ಬಿಡುಗಡೆ
ಒಳ್ಳೆ ಹುಡುಗ ಪ್ರಥಮ್​
Skanda
| Edited By: |

Updated on: Feb 24, 2021 | 1:09 PM

Share

ಬಿಗ್​ಬಾಸ್​ ಮೂಲಕ ಕರ್ನಾಟಕದ ಮನೆ ಮಾತಾದ ಒಳ್ಳೆ ಹುಡುಗ ಪ್ರಥಮ್​ ತಮ್ಮ ವಿಭಿನ್ನ ಶೈಲಿಯ ಮಾತು, ನಡವಳಿಕೆ, ಹೇಳಿಕೆಯ ಮುಖಾಂತರ ಜನರ ಗಮನ ಸೆಳೆಯುತ್ತಲೇ ಬಂದಿದ್ದಾರೆ. ಈ ಮಧ್ಯೆ ಕೆಲ ಸಿನಿಮಾಗಳಿಂದಲೂ ಸದ್ದು ಮಾಡಿದ್ದ ಒಳ್ಳೆ ಹುಡುಗ ಇದೀಗ ‘ಕರ್ನಾಟಕದ ಅಳಿಯ’ ಆಗಲು ಹೊರಟಿದ್ದಾರೆ. ಈ ಬಗ್ಗೆ ತಮ್ಮ ಅಧಿಕೃತ ಫೇಸ್​ಬುಕ್​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಥಮ್​, ಇದು ನಿಜಕ್ಕೂ ವಿಶೇಷವಾದ ಸಿನಿಮಾ. ಇಂದು (ಫೆಬ್ರವರಿ 24) ಸಂಜೆ ಈ ಸಿನಿಮಾದ ಟೀಸರ್​ ಆನಂದ್​ ಆಡಿಯೋ ಯೂಟ್ಯೂಬ್​ ಚಾನೆಲ್​ಯಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಿಕೊಂಡಿದ್ದಾರೆ.

ಈ ಸಿನಿಮಾದ ಟೀಸರ್​ ನೋಡಿದ ನಂತರ ಹುಡುಗರು ಹೆಮ್ಮೆಯಿಂದ ಶೇರ್​ ಮಾಡಿಕೊಂಡು ನಗ್ತೀರಾ, ಹುಡುಗೀರು ಗುಟ್ಟಾಗಿ ಶೇರ್​ ಮಾಡ್ತೀರಾ.. ಬರೆದು ಇಟ್ಕೊಳಿ ಎಂದು ಹೆಳಿರುವ ಒಳ್ಳೆ ಹುಡುಗ ಪ್ರಥಮ್ ತಮ್ಮ ಸಿನಿಮಾದ ಟೀಸರ್​ನಲ್ಲಿ ಏನೋ ವೈಶಿಷ್ಟ್ಯ ಇದೆ ಎಂದು ಈ ಮೂಲಕ ಕುತೂಹಲ ಹುಟ್ಟುಹಾಕಿದ್ದಾರೆ. ಈ ಟೀಸರ್​ ಬಗ್ಗೆ ಧ್ರುವಾ ಸರ್ಜಾ ಕೂಡ ಮಾತನಾಡಿದ್ದು, ಕರ್ನಾಟಕದ ಅಳಿಯ ತುಂಬಾ ಚೆನ್ನಾಗಿದೆ ಎಂದು ಹೇಳಿದ್ದಾರೆ.

ಅಂತೆಯೇ ಪ್ರಥಮ್​ ಅಭಿನಯಿಸಿದ ನಟ ಭಯಂಕರ ಚಿತ್ರ ಜೂನ್​ ತಿಂಗಳಲ್ಲಿ ತೆರೆ ಕಾಣಲಿದೆ ಎಂದು ಸ್ವತಃ ಒಳ್ಳೆ ಹುಡುಗ ಹೇಳಿಕೊಂಡಿದ್ದಾರೆ. ಚಿತ್ರದ ಮೂಲಕ ಕರ್ನಾಟಕದ ಅಳಿಯ ಆಗುತ್ತಿರುವ ಒಳ್ಳೆ ಹುಡುಗನನ್ನು ಕನ್ನಡ ಚಿತ್ರ ಪ್ರೇಮಿಗಳು ಹೇಗೆ ಸ್ವೀಕರಿಸುತ್ತಾರೆ. ಟೀಸರ್​ ಹೇಗೆ ಮೂಡಿಬರಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಸದ್ಯ ಚಂದನವನದಲ್ಲಿ ಒಂದಾದ ಮೇಲೊಂದು ಸಿನಿಮಾ ಸುದ್ದಿ ಹರಿದಾಡುತ್ತಿದ್ದು, ಕೊರೊನಾ ನಂತರ ಚಂದನವನದಲ್ಲಿ ಚಿಗುರು ಮೂಡಿರುವುದು ಸ್ಪಷ್ಟವಾಗಿದೆ. ಇನ್ನು ನಾಳೆ ಪುನೀತ್​ ರಾಜ್​ಕುಮಾರ್​ ಅಭಿನಯದ ಬಹುನಿರೀಕ್ಷಿತ ಚಿತ್ರ ಯುವರತ್ನದ ಊರಿಗೊಬ್ಬ ರಾಜ ವಿಡಿಯೋ ಸಾಂಗ್​ ಸಹ ಬಿಡುಗಡೆಯಾಗುತ್ತಿದ್ದು, ಭಾರೀ ನಿರೀಕ್ಷೆ ಮೂಡಿಸಿದೆ.

ಇದನ್ನೂ ಓದಿ: ಯುವರತ್ನ ಸಿನಿಮಾದ ಊರಿಗೊಬ್ಬ ವಿಡಿಯೋ ಸಾಂಗ್​ ಬಿಡುಗಡೆಗೆ ಸಜ್ಜು, ಪುನೀತ್​​ ಧ್ವನಿಯಲ್ಲೇ ಮೂಡಿಬಂದ ಹಾಡು

Follow Us
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್