AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Olle Huduga Pratham: ಅಳಿಯ ಆಗುತ್ತಿದ್ದಾರೆ ಒಳ್ಳೆ ಹುಡುಗ ಪ್ರಥಮ್​, ಇಂದು ಸಂಜೆ ಕರ್ನಾಟಕ ಅಳಿಯ ಟೀಸರ್​ ಬಿಡುಗಡೆ

Sandalwood: ಚಿತ್ರದ ಮೂಲಕ ಕರ್ನಾಟಕದ ಅಳಿಯ ಆಗುತ್ತಿರುವ ಒಳ್ಳೆ ಹುಡುಗನನ್ನು ಕನ್ನಡ ಚಿತ್ರ ಪ್ರೇಮಿಗಳು ಹೇಗೆ ಸ್ವೀಕರಿಸುತ್ತಾರೆ. ಟೀಸರ್​ ಹೇಗೆ ಮೂಡಿಬರಲಿದೆ ಎಂಬುದನ್ನು ಕಾದು ನೋಡಬೇಕಿದೆ.

Olle Huduga Pratham: ಅಳಿಯ ಆಗುತ್ತಿದ್ದಾರೆ ಒಳ್ಳೆ ಹುಡುಗ ಪ್ರಥಮ್​, ಇಂದು ಸಂಜೆ ಕರ್ನಾಟಕ ಅಳಿಯ ಟೀಸರ್​ ಬಿಡುಗಡೆ
ಒಳ್ಳೆ ಹುಡುಗ ಪ್ರಥಮ್​
Skanda
| Edited By: |

Updated on: Feb 24, 2021 | 1:09 PM

Share

ಬಿಗ್​ಬಾಸ್​ ಮೂಲಕ ಕರ್ನಾಟಕದ ಮನೆ ಮಾತಾದ ಒಳ್ಳೆ ಹುಡುಗ ಪ್ರಥಮ್​ ತಮ್ಮ ವಿಭಿನ್ನ ಶೈಲಿಯ ಮಾತು, ನಡವಳಿಕೆ, ಹೇಳಿಕೆಯ ಮುಖಾಂತರ ಜನರ ಗಮನ ಸೆಳೆಯುತ್ತಲೇ ಬಂದಿದ್ದಾರೆ. ಈ ಮಧ್ಯೆ ಕೆಲ ಸಿನಿಮಾಗಳಿಂದಲೂ ಸದ್ದು ಮಾಡಿದ್ದ ಒಳ್ಳೆ ಹುಡುಗ ಇದೀಗ ‘ಕರ್ನಾಟಕದ ಅಳಿಯ’ ಆಗಲು ಹೊರಟಿದ್ದಾರೆ. ಈ ಬಗ್ಗೆ ತಮ್ಮ ಅಧಿಕೃತ ಫೇಸ್​ಬುಕ್​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಥಮ್​, ಇದು ನಿಜಕ್ಕೂ ವಿಶೇಷವಾದ ಸಿನಿಮಾ. ಇಂದು (ಫೆಬ್ರವರಿ 24) ಸಂಜೆ ಈ ಸಿನಿಮಾದ ಟೀಸರ್​ ಆನಂದ್​ ಆಡಿಯೋ ಯೂಟ್ಯೂಬ್​ ಚಾನೆಲ್​ಯಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಿಕೊಂಡಿದ್ದಾರೆ.

ಈ ಸಿನಿಮಾದ ಟೀಸರ್​ ನೋಡಿದ ನಂತರ ಹುಡುಗರು ಹೆಮ್ಮೆಯಿಂದ ಶೇರ್​ ಮಾಡಿಕೊಂಡು ನಗ್ತೀರಾ, ಹುಡುಗೀರು ಗುಟ್ಟಾಗಿ ಶೇರ್​ ಮಾಡ್ತೀರಾ.. ಬರೆದು ಇಟ್ಕೊಳಿ ಎಂದು ಹೆಳಿರುವ ಒಳ್ಳೆ ಹುಡುಗ ಪ್ರಥಮ್ ತಮ್ಮ ಸಿನಿಮಾದ ಟೀಸರ್​ನಲ್ಲಿ ಏನೋ ವೈಶಿಷ್ಟ್ಯ ಇದೆ ಎಂದು ಈ ಮೂಲಕ ಕುತೂಹಲ ಹುಟ್ಟುಹಾಕಿದ್ದಾರೆ. ಈ ಟೀಸರ್​ ಬಗ್ಗೆ ಧ್ರುವಾ ಸರ್ಜಾ ಕೂಡ ಮಾತನಾಡಿದ್ದು, ಕರ್ನಾಟಕದ ಅಳಿಯ ತುಂಬಾ ಚೆನ್ನಾಗಿದೆ ಎಂದು ಹೇಳಿದ್ದಾರೆ.

ಅಂತೆಯೇ ಪ್ರಥಮ್​ ಅಭಿನಯಿಸಿದ ನಟ ಭಯಂಕರ ಚಿತ್ರ ಜೂನ್​ ತಿಂಗಳಲ್ಲಿ ತೆರೆ ಕಾಣಲಿದೆ ಎಂದು ಸ್ವತಃ ಒಳ್ಳೆ ಹುಡುಗ ಹೇಳಿಕೊಂಡಿದ್ದಾರೆ. ಚಿತ್ರದ ಮೂಲಕ ಕರ್ನಾಟಕದ ಅಳಿಯ ಆಗುತ್ತಿರುವ ಒಳ್ಳೆ ಹುಡುಗನನ್ನು ಕನ್ನಡ ಚಿತ್ರ ಪ್ರೇಮಿಗಳು ಹೇಗೆ ಸ್ವೀಕರಿಸುತ್ತಾರೆ. ಟೀಸರ್​ ಹೇಗೆ ಮೂಡಿಬರಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಸದ್ಯ ಚಂದನವನದಲ್ಲಿ ಒಂದಾದ ಮೇಲೊಂದು ಸಿನಿಮಾ ಸುದ್ದಿ ಹರಿದಾಡುತ್ತಿದ್ದು, ಕೊರೊನಾ ನಂತರ ಚಂದನವನದಲ್ಲಿ ಚಿಗುರು ಮೂಡಿರುವುದು ಸ್ಪಷ್ಟವಾಗಿದೆ. ಇನ್ನು ನಾಳೆ ಪುನೀತ್​ ರಾಜ್​ಕುಮಾರ್​ ಅಭಿನಯದ ಬಹುನಿರೀಕ್ಷಿತ ಚಿತ್ರ ಯುವರತ್ನದ ಊರಿಗೊಬ್ಬ ರಾಜ ವಿಡಿಯೋ ಸಾಂಗ್​ ಸಹ ಬಿಡುಗಡೆಯಾಗುತ್ತಿದ್ದು, ಭಾರೀ ನಿರೀಕ್ಷೆ ಮೂಡಿಸಿದೆ.

ಇದನ್ನೂ ಓದಿ: ಯುವರತ್ನ ಸಿನಿಮಾದ ಊರಿಗೊಬ್ಬ ವಿಡಿಯೋ ಸಾಂಗ್​ ಬಿಡುಗಡೆಗೆ ಸಜ್ಜು, ಪುನೀತ್​​ ಧ್ವನಿಯಲ್ಲೇ ಮೂಡಿಬಂದ ಹಾಡು

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು