AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Olle Huduga Pratham: ಅಳಿಯ ಆಗುತ್ತಿದ್ದಾರೆ ಒಳ್ಳೆ ಹುಡುಗ ಪ್ರಥಮ್​, ಇಂದು ಸಂಜೆ ಕರ್ನಾಟಕ ಅಳಿಯ ಟೀಸರ್​ ಬಿಡುಗಡೆ

Sandalwood: ಚಿತ್ರದ ಮೂಲಕ ಕರ್ನಾಟಕದ ಅಳಿಯ ಆಗುತ್ತಿರುವ ಒಳ್ಳೆ ಹುಡುಗನನ್ನು ಕನ್ನಡ ಚಿತ್ರ ಪ್ರೇಮಿಗಳು ಹೇಗೆ ಸ್ವೀಕರಿಸುತ್ತಾರೆ. ಟೀಸರ್​ ಹೇಗೆ ಮೂಡಿಬರಲಿದೆ ಎಂಬುದನ್ನು ಕಾದು ನೋಡಬೇಕಿದೆ.

Olle Huduga Pratham: ಅಳಿಯ ಆಗುತ್ತಿದ್ದಾರೆ ಒಳ್ಳೆ ಹುಡುಗ ಪ್ರಥಮ್​, ಇಂದು ಸಂಜೆ ಕರ್ನಾಟಕ ಅಳಿಯ ಟೀಸರ್​ ಬಿಡುಗಡೆ
ಒಳ್ಳೆ ಹುಡುಗ ಪ್ರಥಮ್​
Skanda
| Updated By: ರಾಜೇಶ್ ದುಗ್ಗುಮನೆ|

Updated on: Feb 24, 2021 | 1:09 PM

Share

ಬಿಗ್​ಬಾಸ್​ ಮೂಲಕ ಕರ್ನಾಟಕದ ಮನೆ ಮಾತಾದ ಒಳ್ಳೆ ಹುಡುಗ ಪ್ರಥಮ್​ ತಮ್ಮ ವಿಭಿನ್ನ ಶೈಲಿಯ ಮಾತು, ನಡವಳಿಕೆ, ಹೇಳಿಕೆಯ ಮುಖಾಂತರ ಜನರ ಗಮನ ಸೆಳೆಯುತ್ತಲೇ ಬಂದಿದ್ದಾರೆ. ಈ ಮಧ್ಯೆ ಕೆಲ ಸಿನಿಮಾಗಳಿಂದಲೂ ಸದ್ದು ಮಾಡಿದ್ದ ಒಳ್ಳೆ ಹುಡುಗ ಇದೀಗ ‘ಕರ್ನಾಟಕದ ಅಳಿಯ’ ಆಗಲು ಹೊರಟಿದ್ದಾರೆ. ಈ ಬಗ್ಗೆ ತಮ್ಮ ಅಧಿಕೃತ ಫೇಸ್​ಬುಕ್​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಥಮ್​, ಇದು ನಿಜಕ್ಕೂ ವಿಶೇಷವಾದ ಸಿನಿಮಾ. ಇಂದು (ಫೆಬ್ರವರಿ 24) ಸಂಜೆ ಈ ಸಿನಿಮಾದ ಟೀಸರ್​ ಆನಂದ್​ ಆಡಿಯೋ ಯೂಟ್ಯೂಬ್​ ಚಾನೆಲ್​ಯಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಿಕೊಂಡಿದ್ದಾರೆ.

ಈ ಸಿನಿಮಾದ ಟೀಸರ್​ ನೋಡಿದ ನಂತರ ಹುಡುಗರು ಹೆಮ್ಮೆಯಿಂದ ಶೇರ್​ ಮಾಡಿಕೊಂಡು ನಗ್ತೀರಾ, ಹುಡುಗೀರು ಗುಟ್ಟಾಗಿ ಶೇರ್​ ಮಾಡ್ತೀರಾ.. ಬರೆದು ಇಟ್ಕೊಳಿ ಎಂದು ಹೆಳಿರುವ ಒಳ್ಳೆ ಹುಡುಗ ಪ್ರಥಮ್ ತಮ್ಮ ಸಿನಿಮಾದ ಟೀಸರ್​ನಲ್ಲಿ ಏನೋ ವೈಶಿಷ್ಟ್ಯ ಇದೆ ಎಂದು ಈ ಮೂಲಕ ಕುತೂಹಲ ಹುಟ್ಟುಹಾಕಿದ್ದಾರೆ. ಈ ಟೀಸರ್​ ಬಗ್ಗೆ ಧ್ರುವಾ ಸರ್ಜಾ ಕೂಡ ಮಾತನಾಡಿದ್ದು, ಕರ್ನಾಟಕದ ಅಳಿಯ ತುಂಬಾ ಚೆನ್ನಾಗಿದೆ ಎಂದು ಹೇಳಿದ್ದಾರೆ.

ಅಂತೆಯೇ ಪ್ರಥಮ್​ ಅಭಿನಯಿಸಿದ ನಟ ಭಯಂಕರ ಚಿತ್ರ ಜೂನ್​ ತಿಂಗಳಲ್ಲಿ ತೆರೆ ಕಾಣಲಿದೆ ಎಂದು ಸ್ವತಃ ಒಳ್ಳೆ ಹುಡುಗ ಹೇಳಿಕೊಂಡಿದ್ದಾರೆ. ಚಿತ್ರದ ಮೂಲಕ ಕರ್ನಾಟಕದ ಅಳಿಯ ಆಗುತ್ತಿರುವ ಒಳ್ಳೆ ಹುಡುಗನನ್ನು ಕನ್ನಡ ಚಿತ್ರ ಪ್ರೇಮಿಗಳು ಹೇಗೆ ಸ್ವೀಕರಿಸುತ್ತಾರೆ. ಟೀಸರ್​ ಹೇಗೆ ಮೂಡಿಬರಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಸದ್ಯ ಚಂದನವನದಲ್ಲಿ ಒಂದಾದ ಮೇಲೊಂದು ಸಿನಿಮಾ ಸುದ್ದಿ ಹರಿದಾಡುತ್ತಿದ್ದು, ಕೊರೊನಾ ನಂತರ ಚಂದನವನದಲ್ಲಿ ಚಿಗುರು ಮೂಡಿರುವುದು ಸ್ಪಷ್ಟವಾಗಿದೆ. ಇನ್ನು ನಾಳೆ ಪುನೀತ್​ ರಾಜ್​ಕುಮಾರ್​ ಅಭಿನಯದ ಬಹುನಿರೀಕ್ಷಿತ ಚಿತ್ರ ಯುವರತ್ನದ ಊರಿಗೊಬ್ಬ ರಾಜ ವಿಡಿಯೋ ಸಾಂಗ್​ ಸಹ ಬಿಡುಗಡೆಯಾಗುತ್ತಿದ್ದು, ಭಾರೀ ನಿರೀಕ್ಷೆ ಮೂಡಿಸಿದೆ.

ಇದನ್ನೂ ಓದಿ: ಯುವರತ್ನ ಸಿನಿಮಾದ ಊರಿಗೊಬ್ಬ ವಿಡಿಯೋ ಸಾಂಗ್​ ಬಿಡುಗಡೆಗೆ ಸಜ್ಜು, ಪುನೀತ್​​ ಧ್ವನಿಯಲ್ಲೇ ಮೂಡಿಬಂದ ಹಾಡು

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ