AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Olle Huduga Pratham: ಅಳಿಯ ಆಗುತ್ತಿದ್ದಾರೆ ಒಳ್ಳೆ ಹುಡುಗ ಪ್ರಥಮ್​, ಇಂದು ಸಂಜೆ ಕರ್ನಾಟಕ ಅಳಿಯ ಟೀಸರ್​ ಬಿಡುಗಡೆ

Sandalwood: ಚಿತ್ರದ ಮೂಲಕ ಕರ್ನಾಟಕದ ಅಳಿಯ ಆಗುತ್ತಿರುವ ಒಳ್ಳೆ ಹುಡುಗನನ್ನು ಕನ್ನಡ ಚಿತ್ರ ಪ್ರೇಮಿಗಳು ಹೇಗೆ ಸ್ವೀಕರಿಸುತ್ತಾರೆ. ಟೀಸರ್​ ಹೇಗೆ ಮೂಡಿಬರಲಿದೆ ಎಂಬುದನ್ನು ಕಾದು ನೋಡಬೇಕಿದೆ.

Olle Huduga Pratham: ಅಳಿಯ ಆಗುತ್ತಿದ್ದಾರೆ ಒಳ್ಳೆ ಹುಡುಗ ಪ್ರಥಮ್​, ಇಂದು ಸಂಜೆ ಕರ್ನಾಟಕ ಅಳಿಯ ಟೀಸರ್​ ಬಿಡುಗಡೆ
ಒಳ್ಳೆ ಹುಡುಗ ಪ್ರಥಮ್​
Skanda
| Edited By: |

Updated on: Feb 24, 2021 | 1:09 PM

Share

ಬಿಗ್​ಬಾಸ್​ ಮೂಲಕ ಕರ್ನಾಟಕದ ಮನೆ ಮಾತಾದ ಒಳ್ಳೆ ಹುಡುಗ ಪ್ರಥಮ್​ ತಮ್ಮ ವಿಭಿನ್ನ ಶೈಲಿಯ ಮಾತು, ನಡವಳಿಕೆ, ಹೇಳಿಕೆಯ ಮುಖಾಂತರ ಜನರ ಗಮನ ಸೆಳೆಯುತ್ತಲೇ ಬಂದಿದ್ದಾರೆ. ಈ ಮಧ್ಯೆ ಕೆಲ ಸಿನಿಮಾಗಳಿಂದಲೂ ಸದ್ದು ಮಾಡಿದ್ದ ಒಳ್ಳೆ ಹುಡುಗ ಇದೀಗ ‘ಕರ್ನಾಟಕದ ಅಳಿಯ’ ಆಗಲು ಹೊರಟಿದ್ದಾರೆ. ಈ ಬಗ್ಗೆ ತಮ್ಮ ಅಧಿಕೃತ ಫೇಸ್​ಬುಕ್​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಥಮ್​, ಇದು ನಿಜಕ್ಕೂ ವಿಶೇಷವಾದ ಸಿನಿಮಾ. ಇಂದು (ಫೆಬ್ರವರಿ 24) ಸಂಜೆ ಈ ಸಿನಿಮಾದ ಟೀಸರ್​ ಆನಂದ್​ ಆಡಿಯೋ ಯೂಟ್ಯೂಬ್​ ಚಾನೆಲ್​ಯಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಿಕೊಂಡಿದ್ದಾರೆ.

ಈ ಸಿನಿಮಾದ ಟೀಸರ್​ ನೋಡಿದ ನಂತರ ಹುಡುಗರು ಹೆಮ್ಮೆಯಿಂದ ಶೇರ್​ ಮಾಡಿಕೊಂಡು ನಗ್ತೀರಾ, ಹುಡುಗೀರು ಗುಟ್ಟಾಗಿ ಶೇರ್​ ಮಾಡ್ತೀರಾ.. ಬರೆದು ಇಟ್ಕೊಳಿ ಎಂದು ಹೆಳಿರುವ ಒಳ್ಳೆ ಹುಡುಗ ಪ್ರಥಮ್ ತಮ್ಮ ಸಿನಿಮಾದ ಟೀಸರ್​ನಲ್ಲಿ ಏನೋ ವೈಶಿಷ್ಟ್ಯ ಇದೆ ಎಂದು ಈ ಮೂಲಕ ಕುತೂಹಲ ಹುಟ್ಟುಹಾಕಿದ್ದಾರೆ. ಈ ಟೀಸರ್​ ಬಗ್ಗೆ ಧ್ರುವಾ ಸರ್ಜಾ ಕೂಡ ಮಾತನಾಡಿದ್ದು, ಕರ್ನಾಟಕದ ಅಳಿಯ ತುಂಬಾ ಚೆನ್ನಾಗಿದೆ ಎಂದು ಹೇಳಿದ್ದಾರೆ.

ಅಂತೆಯೇ ಪ್ರಥಮ್​ ಅಭಿನಯಿಸಿದ ನಟ ಭಯಂಕರ ಚಿತ್ರ ಜೂನ್​ ತಿಂಗಳಲ್ಲಿ ತೆರೆ ಕಾಣಲಿದೆ ಎಂದು ಸ್ವತಃ ಒಳ್ಳೆ ಹುಡುಗ ಹೇಳಿಕೊಂಡಿದ್ದಾರೆ. ಚಿತ್ರದ ಮೂಲಕ ಕರ್ನಾಟಕದ ಅಳಿಯ ಆಗುತ್ತಿರುವ ಒಳ್ಳೆ ಹುಡುಗನನ್ನು ಕನ್ನಡ ಚಿತ್ರ ಪ್ರೇಮಿಗಳು ಹೇಗೆ ಸ್ವೀಕರಿಸುತ್ತಾರೆ. ಟೀಸರ್​ ಹೇಗೆ ಮೂಡಿಬರಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಸದ್ಯ ಚಂದನವನದಲ್ಲಿ ಒಂದಾದ ಮೇಲೊಂದು ಸಿನಿಮಾ ಸುದ್ದಿ ಹರಿದಾಡುತ್ತಿದ್ದು, ಕೊರೊನಾ ನಂತರ ಚಂದನವನದಲ್ಲಿ ಚಿಗುರು ಮೂಡಿರುವುದು ಸ್ಪಷ್ಟವಾಗಿದೆ. ಇನ್ನು ನಾಳೆ ಪುನೀತ್​ ರಾಜ್​ಕುಮಾರ್​ ಅಭಿನಯದ ಬಹುನಿರೀಕ್ಷಿತ ಚಿತ್ರ ಯುವರತ್ನದ ಊರಿಗೊಬ್ಬ ರಾಜ ವಿಡಿಯೋ ಸಾಂಗ್​ ಸಹ ಬಿಡುಗಡೆಯಾಗುತ್ತಿದ್ದು, ಭಾರೀ ನಿರೀಕ್ಷೆ ಮೂಡಿಸಿದೆ.

ಇದನ್ನೂ ಓದಿ: ಯುವರತ್ನ ಸಿನಿಮಾದ ಊರಿಗೊಬ್ಬ ವಿಡಿಯೋ ಸಾಂಗ್​ ಬಿಡುಗಡೆಗೆ ಸಜ್ಜು, ಪುನೀತ್​​ ಧ್ವನಿಯಲ್ಲೇ ಮೂಡಿಬಂದ ಹಾಡು

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ